Operation Sindoor: ಭಾರತ ಸೇನೆಯ ಫೈಟರ್ ಜೆಟ್ಗಳ ನಷ್ಟದ ಬಗ್ಗೆ ಪರೋಕ್ಷ ಒಪ್ಪಿಗೆ?
ಭಾರತೀಯ ಸೇನೆ ಈಗಾಗಲೇ ಪಾಪಿ ಪಾಕಿಸ್ತಾನಕ್ಕೆ ಓಡಾಡಿಸಿಕೊಂಡು ಬಾರಿಸಿ ಸರಿಯಾಗಿಯೇ ಬುದ್ಧಿ ಕಲಿಸಿದೆ. ಭಾರತದ ಮಿಲಿಟರಿ ಕೊಟ್ಟ ಏಟಿಗೆ ನಲುಗಿ ಹೋಗಿರುವ ಪಾಪಿ ಪಾಕಿಸ್ತಾನ ರಾಜಿ & ಸಂಧಾನ ಮಾಡಿಕೊಂಡು ಕದನ ವಿರಾಮ ಘೋಷಣೆ ಮಾಡಿ ಯುದ್ಧ ನಿಲ್ಲಿಸಿದೆ. ಅಲ್ಲದೆ ಪಾಕಿಸ್ತಾನದ ನೆಲದಲ್ಲಿ ಭಾರತೀಯ ಸೇನೆ ನಡೆಸಿದ ದಾಳಿ ಪರಿಣಾಮ ಭಾರಿ ದೊಡ್ಡ ಪ್ರಮಾಣದ ನಷ್ಟ ಆಗಿದೆ ಎಂಬ ಮಾಹಿತಿ ಇದೆ. ಇಷ್ಟೆಲ್ಲದರ ನಡುವೆ ಇದೀಗ ಮತ್ತೊಂದು ವಿಚಾರ ಹೊರ ಬಿದ್ದಿದೆ.
ಭಾರತ ಸೇನೆಯಿಂದ ಪಾಪಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಅಂದ್ರೆ ಪಿಒಕೆ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿ ರಾಕ್ಷಸ ರೂಪಿ ಉಗ್ರರಿಗೆ ಪಾಠ ಕಲಿಸಲಾಗಿತ್ತು. ಉಗ್ರರ ಫ್ಯಾಕ್ಟರಿ ಆಗಿರುವ ಪಾಕಿಸ್ತಾನದ ಗಡಿ ಭಾಗದಲ್ಲಿ ಹೀಗೆ ಮಹತ್ವದ ಕಾರ್ಯಾಚರಣೆ ನಡೆಸಲಾಗಿತ್ತು. ಪಾಪಿ ಪಾಕ್ ಗಡಿಭಾಗದಲ್ಲಿ ಇರುವ ಉಗ್ರರ ಶಿಬಿರಗಳನ್ನ ಉಡಾಯಿಸಿ ಉಗ್ರರಿಗೆ ತಕ್ಕಪಾಠ ಕಲಿಸಿದ್ದರು ಭಾರತದ ಯೋಧರು.

'ಆಪರೇಷನ್ ಸಿಂಧೂರ್' ಹೆಸರಲ್ಲಿ ಪಾಕಿಸ್ತಾನದ ಹಲವು ಪ್ರದೇಶಗಳ ಮೇಲೆ ಈ ರೀತಿ ದೊಡ್ಡ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ನಡೆಸಿ ಉಗ್ರರ ಬಿಡಾರ ಉಡೀಸ್ ಮಾಡಿತ್ತು ಭಾರತೀಯ ಸೇನೆ. ಈ ರೀತಿ ಭಾರತ ನಡೆಸಿದ ಕಾರ್ಯಾಚರಣೆಗೆ ಭಾರಿ ಬೆಂಬಲ ಕೂಡ ವ್ಯಕ್ತವಾಗಿತ್ತು. ಆದರೆ ಈಗ ದಿಢೀರ್ ಮತ್ತೊಂದು ಸುದ್ದಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ...
ಭಾರತ ಸೇನೆಯ ಫೈಟರ್ ಜೆಟ್ಗಳ ನಷ್ಟ?
ಪಾಕಿಸ್ತಾನ ಪ್ರಧಾನಿ ಷರೀಫ್ ಬಾಯಿಗೆ ಬಂದಂತೆ ಮಾತನಾಡುತ್ತಾ, ಭಾರತದ ಜೆಟ್ಗಳನ್ನು ಬೀಳಿಸಿ ಗೆದ್ದಿದ್ದೇವೆ ಅಂತಾ ಪೋಸ್ ಕೊಡುತ್ತಿದ್ದ. ಆದರೆ, ಇದೀಗ ಭಾರತೀಯ ಸೇನೆಯ 3 ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರು ಪಾಕ್ಗೆ ಸೂಕ್ತ ಉತ್ತರ ನೀಡಿದ್ದಾರೆ. ಹಾಗಾದ್ರೆ ಅನಿಲ್ ಚೌಹಾಣ್ ಅವರು ಹೇಳಿದ್ದೇನು? ಪಾಕಿಸ್ತಾನ ಮಾಡಿದ್ದ ತಲೆ & ಬುಡವೇ ಇಲ್ಲದ ಆರೋಪಕ್ಕೆ ಇದೀಗ ಭಾರತ ನೀಡಿದ ಉತ್ತರ ಏನು?
ಪಾಕಿಸ್ತಾನಕ್ಕೆ ತಕ್ಕ ಉತ್ತರ ಸಿಕ್ತು!
ಸಿಂಗಾಪುರದ ಶಾಂಗ್ರಿ-ಲಾ ಸಂವಾದ ಮುಗಿಸಿ ಅಂತಾರಾಷ್ಟ್ರೀಯ ಪತ್ರಕರ್ತರ ಜೊತೆ ಅವರು ಮಾತನಾಡುತ್ತಾ, ಪಾಕಿಸ್ತಾನ ಹೇಳಿದ್ದ ಸುಳ್ಳನ್ನು ತಿರಸ್ಕರಿಸಿದ್ದಾರೆ. ಅಲ್ಲದೆ 6 ಫೈಟರ್ ಜೆಟ್ ಅಂದ್ರೆ ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂಬ ಪಾಕ್ ಹೇಳಿಕೆ ತಪ್ಪು ಎಂದಿದ್ದಾರೆ. ಈ ಮೂಲಕ ಪಾಪಿ ಪಾಕಿಸ್ತಾನ ಆರೋಪವನ್ನ ಭಾರತ ತಿರಸ್ಕರಿಸಿದ್ದು, ಹಾಗೇ ಮತ್ತೊಂದು ಕಡೆ ಸಣ್ಣಪುಟ್ಟ ನಷ್ಟ ಆಗಿರುವ ಬಗ್ಗೆಯೂ ತಿಳಿಸಲಾಗಿದೆ. ಅಂದಹಾಗೆ ಪಾಪಿ ಪಾಕಿಸ್ತಾನ ಮೂಲಕ ನುಸುಳಿ ಬಂದಿದ್ದ ಉಗ್ರರು ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ ಮೇಲೆ ದಾಳಿ ಮಾಡಿದ್ದರು. ಆ ನಂತರ ಭಾರತ ಕೂಡ ಸೇನಾ ಕಾರ್ಯಾಚರಣೆ ನಡೆಸಿತ್ತು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications