ಸರ್ಜಿಕಲ್ ಸ್ಟ್ರೈಕಿಗಿಂತಲೂ ಉತ್ತಮ ಆಯ್ಕೆ ನಮ್ಮಲ್ಲಿದೆ: ಪಾಕಿಸ್ತಾನಕ್ಕೆ ಎಚ್ಚರಿಕೆ
ಸರ್ಜಿಕಲ್ ಸ್ಟ್ರೈಕಿಗಿಂತಲೂ ಪರಿಣಾಮಕಾರಿಯಾಗಿ ದಾಳಿ ನಡೆಸುವ ಆಯ್ಕೆ ನಮ್ಮಲ್ಲಿ ಇದೆ ಎಂದು ಪಾಕಿಸ್ತಾನಕ್ಕೆ ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ, ಜೂ 28: ಸೀಮಿತ ದಾಳಿಗಿಂತಲೂ ತೀಕ್ಷ್ಣವಾದ ಆಯ್ಕೆ ನಮ್ಮಲ್ಲಿದೆ ಎಂದು ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತದ ಜೊತೆಗಿನ ಯುದ್ದ ತ್ರಾಸದಾಯಕವಲ್ಲ ಎನ್ನುವ ನಿರ್ಧಾರಕ್ಕೆ ಪಾಕ್ ಬಂದಿದ್ದರೆ, ಸರ್ಜಿಕಲ್ ಸ್ಟ್ರೈಕಿಗಿಂತಲೂ ಪರಿಣಾಮಕಾರಿಯಾಗಿ ದಾಳಿ ನಡೆಸುವ ಆಯ್ಕೆ ನಮ್ಮಲ್ಲಿ ಇದೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಲು ಬಯಸುತ್ತೇನೆಂದು ರಾವತ್ ಹೇಳಿದ್ದಾರೆ.

ಭಾರತದ ಯೋಧರ ದೇಹವನ್ನು ವಿರೂಪಗೊಳಿಸಿದ್ದ ಬಗ್ಗೆ ಪ್ರತಿಕ್ರಿಯೆ ನೀಡುತ್ತಿದ್ದ ಜನರಲ್ ರಾವತ್, ನಮ್ಮ ಸೇನೆ ಪಾಕಿಸ್ತಾನದ ರೀತಿಯಲ್ಲಿ ಅಮಾನುಷ ಕೆಲಸವನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಎರಡು ದೇಶಗಳ ನಡುವೆ ಶಾಂತಿ ನೆಲೆಸಿದರೆ ಮಾತ್ರ ಮಾತುಕತೆ ನಡೆಯಲು ಸಾಧ್ಯ. ಕಾಶ್ಮೀರದಲ್ಲಿ ಶಾಂತಿ ನೆಲೆಸಬೇಕು ಎನ್ನುವುದು ನಮ್ಮ ಆಶಯ ಕೂಡಾ. ಕಾಶ್ಮೀರ ಸಂಪೂರ್ಣ ಸಹಜಸ್ಥಿತಿಗೆ ಬಂದಾಗ ನಾನೇ ಮಾತುಕತೆ ಆಯೋಜಿಸುತ್ತೇನೆಂದು ರಾವತ್ ಹೇಳಿದ್ದಾರೆ.
ಹಿಜ್ಬುಲ್ ಉಗ್ರಸಂಘಟನೆಯ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ವಿರುದ್ದ ಪಾಕಿಸ್ತಾನ ಯಾವ ಕ್ರಮ ತೆಗೆದುಕೊಳ್ಳುತ್ತದೆ ಎನ್ನುವುದನ್ನು ನಾವು ಕಾದು ನೋಡುತ್ತೇವೆ.
ಸಲಾಹುದ್ದೀನ್ 'ಜಾಗತಿಕ ಭಯೋತ್ಪಾದಕ' ಎಂದು ಅಮೆರಿಕಾ ಘೋಷಿಸಿರುವುದರ ಬಗ್ಗೆ ಹಿಂದೂಸ್ಥಾನ್ ಟೈಮ್ಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಜನರಲ್ ರಾವತ್, ಆತ ಪ್ರತಿಭಟನೆಗಳಿಗೆ ಕ್ಯಾಲೆಂಡರ್ ನಲ್ಲಿ ಮೊದಲೇ ದಿನ ನಿಗದಿಪಡಿಸುವವನು. ಈತನ ವಿರುದ್ದ ತುರ್ತಾಗಿ ಪಾಕ್ ಕ್ರಮ ತೆಗೆದುಕೊಳ್ಳಬೇಕೆಂದು ಹೇಳಿದ್ದಾರೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications