Sugar Export Ban: ಭಾರತದಿಂದ ಸಕ್ಕರೆ ರಫ್ತು ಮೇಲಿನ ನಿರ್ಬಂಧ ವಿಸ್ತರಣೆ, ಎಲ್ಲಿಯವರೆಗೆ?
ಬೆಂಗಳೂರು, ಅಕ್ಟೋಬರ್ 18: ದೇಶಿಯ ಉತ್ಪಾದನೆ ಮತ್ತು ಪೂರೈಕೆ ಖಚಿತತೆಗಾಗಿ ಭಾರತ ಸರ್ಕಾರ ಸಕ್ಕರೆ ಮೇಲಿನ ರಫ್ತು ನಿರ್ಬಂಧಗಳನ್ನು ಮುಂದಿನ ಆದೇಶವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.
ಡೈರೆಕ್ಟರ್ ಜನರಲ್ ಆಫ್ ಫಾರಿನ್ ಟ್ರೇಡ್ (DGFT) ಇತ್ತೀಚಿಗೆ ಹೊರಡಿಸಿದ ಆದೇಶ ನೋಡುವುದಾದರೆ, ಇದೇ ತಿಂಗಳ ಅಕ್ಟೋಬರ್ 31ರ ನಂತರ ಸಕ್ಕರೆ ರಫ್ತಿನ ಮೇಲಿನ ನಿರ್ಬಂಧಗಳು ಮುಂದುವರಿಯಲಿವೆ. ಇದು ಮುಂದಿನ ಆದೇಶದವರೆಗೆ ವಿಸ್ತರಣೆ ಮಾಡಲಾಗಿದೆ. ಜೊತೆಗೆ ಈ ನಿರ್ಬಂಧಗಳು ಒಂದೆರಡು ದೇಶಗಳಿಗೆ ಮಾಡುವ ರಫ್ತಿಗೆ ಅನ್ವಯಿಸುವುದಿಲ್ಲ ಎಂದು ತಿಳಿಸಿದೆ.

ಈ ನಿರ್ಬಂಧವು ಮೂಲಭೂತ ಸೌಲಭ್ಯಗಳ ಸರಕು ವರ್ಗದ ವ್ಯಾಪ್ತಿಗೆ ಬರುತ್ತದೆ. ರಫ್ತಿಗೆ ಯಾವುದೇ ಕೋಟಾ ಇನ್ನೂವರೆಗೆ ಘೋಷಿಸದ ಕಾರಣ ಸದ್ಯಕ್ಕೆ ಸಕ್ಕರೆ ರಫ್ತು ರದ್ದು ಎನ್ನಬಹುದಾಗಿದೆ. ಪರಿಸ್ಥಿತಿ ಸುಧಾರಿಸಿದರೆ ಕೇಂದ್ರ ಸರ್ಕಾರ ಮತ್ತೆ ಅವಲೋಕಿಸಿ, ತಜ್ಞರ ಜತೆ ಚರ್ಚಿಸಿ ಒಂದಷ್ಟು ಪ್ರಮಾಣದ ಸಕ್ಕರೆ ರಫ್ತಿಗೆ ಅವಕಾಶ ಕೊಡುವ ಸಾಧ್ಯತೆಗಳು ಇವೆ.
ಭಾರತ ಸಕ್ಕರೆ ರಫ್ತಿನ ಎರಡನೇ ದೊಡ್ಡ ದೇಶ
ಭಾರತ ಪ್ರಪಂಚದಲ್ಲಿ ಸಕ್ಕರೆ ರಫ್ತುದಾರ ದೊಡ್ಡ ದೇಶಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ಕಳೆದ ಒಂದು ವರ್ಷದಿಂದ ಹಿಡಿದು ಪ್ರಸಕ್ತ 2023ರ ಅಕ್ಟೋಬರ್ 31ರ ವರೆಗೆ ಸಕ್ಕರೆ ನಿರ್ಬಂಧ ವಿಧಿಸಲಾಗಿತ್ತು. ಈ ಮೂಲಕ ಅನಿಯಂತ್ರಣವಾಗಿ ಸಕ್ಕರೆ ಬೇರೆ ದೇಶಗಳಿಗೆ ಹರಿದು ದೇಶಿಯವಾಗಿ ಕೊರತೆ ಆಗದಿರಲಿ ಎಂದು ಕೇಂದ್ರ ರಫ್ತು ನಿಷೇಧಕ್ಕೆ ನಿರ್ಧರಿಸಿತ್ತು. ಈ ಮೂಲಕ ದೇಶಿಯವಾಗಿ ಮೊದಲು ಲಭ್ಯವಾಗುವಂತೆ ಮಾಡಿತು.
ಭಾರತದಲ್ಲಿ ಈ ಹಿಂದಿನ ಋತುವಿನಲ್ಲಿ ದಾಖಲೆಯ 11.1 ಮಿಲಿಯನ್ ಟನ್ಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗಿತ್ತು. ಬಳಿಕ ಸೆಪ್ಟೆಂಬರ್ 30 ರಂದು ಕೊನೆಗೊಳ್ಳುವ ಪ್ರಸಕ್ತ ಋತುವಿನಲ್ಲಿ ಕೇವಲ 6.1 ಮಿಲಿಯನ್ ಟನ್ ಸಕ್ಕರೆ ರಫ್ತು ಮಾಡಲು ಗಿರಣಿಗಳಿಗೆ ಅವಕಾಶ ಮಾಡಿಕೊಡಲಾಯಿತು.
-
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications