ಚೀನಾಕ್ಕೆ ಯಾವ ಭೂಮಿಯನ್ನೂ ಬಿಟ್ಟುಕೊಟ್ಟಿಲ್ಲ: ರಕ್ಷಣಾ ಸಚಿವಾಲಯ
ನವದೆಹಲಿ, ಫೆಬ್ರವರಿ 12: ಪೂರ್ವ ಲಡಾಖ್ನ ಪ್ಯಾಂಗಾಂಗ್ ತ್ಸೊ ಸರೋವರದ ಪ್ರದೇಶದಲ್ಲಿನ ಸೇನಾ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂಬಂಧ ಚೀನಾದೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಫಲವಾಗಿ ಯಾವುದೇ ಭೂಭಾಗವನ್ನು ಬಿಟ್ಟುಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಭಾರತವು ಚೀನಾಕ್ಕೆ ತನ್ನ ಭೂ ಪ್ರದೇಶವನ್ನು ಬಿಟ್ಟುಕೊಟ್ಟಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ನಲ್ಲಿ ಆರೋಪಿಸಿದ ಬಳಿಕ ರಕ್ಷಣಾ ಸಚಿವಾಲಯವು ಹೇಳಿಕೆ ಹೊರಡಿಸಿದ್ದು, ಪೂರ್ವ ಲಡಾಖ್ನಲ್ಲಿ ದೇಶದ ರಾಷ್ಟ್ರೀಯ ಹಿತಾಸಕ್ತಿ ಮತ್ತು ಭೂಪ್ರದೇಶವನ್ನು ಪರಿಣಾಮಕಾರಿಯಾಗಿ ಕಾಪಾಡುವ ಕ್ರಮ ತೆಗೆದುಕೊಳ್ಳಲಾಗಿದೆ. ಏಕೆಂದರೆ ಸರ್ಕಾರವು ಸಶಸ್ತ್ರ ಪಡೆಗಳ ಸಾಮರ್ಥ್ಯದ ಮೇಲೆ ಪೂರ್ತಿ ನಂಬಿಕೆ ಇರಿಸಿದೆ ಎಂದು ಸ್ಪಷ್ಟಪಡಿಸಿದೆ.
'ನಮ್ಮ ಸೇನಾ ಸಿಬ್ಬಂದಿ ಮಾಡಿದ ತ್ಯಾಗಗಳ ಮೂಲಕ ಸಾಧ್ಯವಾದ ಸಾಧನೆಗಳ ಬಗ್ಗೆ ಅನುಮಾನ ಪಡುವವರು ವಾಸ್ತವವಾಗಿ ಅವರನ್ನು ಅಗೌರವಿಸುತ್ತಿದ್ದಾರೆ' ಎಂದು ರಕ್ಷಣಾ ಸಚಿವಾಲಯ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದೆ.

'ಭಾರತದ ಭೂಪ್ರದೇಶವು ಫಿಂಗರ್ 4ರವರೆಗೂ ಇದೆ ಎನ್ನುವ ಪ್ರತಿಪಾದನೆಯು ಖಂಡಿತವಾಗಿಯೂ ಸುಳ್ಳು. 1962ರಿಂದ ಚೀನಾವು ಅಕ್ರಮವಾಗಿ ಆಕ್ರಮಿಸಿಕೊಂಡಿರುವ 43,000 ಚದರ ಕಿಮೀಗೂ ಅಧಿಕ ಪ್ರದೇಶ ಸೇರಿದಂತೆ ಭಾರತದ ಭೂಪಟದಲ್ಲಿ ಚಿತ್ರಿಸಿರುವ ಹಾಗೆ ಭಾರತದ ಭೂಪ್ರದೇಶವಿದೆ. ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್ಎಸಿ) ಕೂಡ ಭಾರತದ ಗ್ರಹಿಕೆಯಂತೆ ಇರುವುದು ಫಿಂಗರ್ 8ರಲ್ಲಿಯೇ ವಿನಾ ಫಿಂಗರ್ 4 ಅಲ್ಲ. ಈ ಕಾರಣದಿಂದಾಗಿಯೇ ಭಾರತವು ಚೀನಾದೊಂದಿಗಿನ ಈಗಿನ ಒಪ್ಪಂದ ಸೇರಿದಂತೆ ಫಿಂಗರ್ 8ರವರೆಗೂ ಗಸ್ತು ತಿರುಗುವ ಹಕ್ಕನ್ನು ದೃಢವಾಗಿ ಪ್ರತಿಪಾದಿಸಿದೆ' ಎಂದು ಹೇಳಿಕೆ ವಿವರಿಸಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications