Covid 19 Report: ಭಾರತದಲ್ಲಿ 10,542 ಪಾಸಿಟಿವ್ ಪ್ರಕರಣ ಪತ್ತೆ, ಎರಡೇ ದಿನದಲ್ಲಿ ಶೇ.38 ಏರಿಕೆ
ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಎರಡು ದಿನದಿಂದ ಕಡಿಮೆಯಾಗಿದ್ದ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗಿದೆ. ಬುಧವಾರ 10,542 ಹೆಚ್ಚು ಮಂದಿ ಕೋವಿಡ್ ತಗುಲಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿ ತಿಳಿಸಿದೆ.
ಭಾರತವು ಬುಧವಾರ 10,000 ಹೊಸ ಕೋವಿಡ್ ಪ್ರಕರಣಗಳನ್ನು ವರದಿ ಮಾಡಿದೆ. ಇದು ಕಳೆದ ಎರಡು ದಿನಗಳಿಗಿಂತ ಶೇಕಡಾ 38 ಅಧಿಕ ಎಂಬುದು ಆತಂಕಕಾರಿ ವಿಷಯವಾಗಿದೆ. ಬಿಡುಗಡೆಯಾದ ಕೋವಿಡ್ ವರದಿ ನೋಡಿದರೆ ಹೊಸ ಪ್ರಕರಣಗಳಿಂದ ದೇಶದ ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 63,562 ತಲುಪಿದೆ.

ನೆನ್ನೆ ಮಂಗಳವಾರ 7,633 ಹೊಸ ಪ್ರಕರಣ ಹಾಗೂ ಸೋಮವಾರ 9,111 ಹೊಸ ಪಾಸಿಟಿವ್ ಕೇಸ್ ದಾಖಲಾಗಿದ್ದವು. ಅದಾದ ಬಳಿಕ ಮತ್ತೆ ಕೊರೊನಾ ಏರುಗತಿಯಲ್ಲಿ ಸಾಗುತ್ತಿರುವ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ಒಂದೇ ದಿನಲ್ಲಿ ದೇಶಾದ್ಯಂತ 38 ಸಾವುಗಳು ದಾಖಲಾಗಿವೆ.
ಪಶ್ಚಿಮ ಬಂಗಾಳದಲ್ಲಿ ಮಾಸ್ಕ್ ಕಡ್ಡಾಯ
ಭಾರತಾದ್ಯಂತ ಕೊರೊನಾ ಸೋಂಕು ಆರ್ಭಟ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಕೊರೊನಾ ಪಾಸಿಟಿವ್ ಪ್ರಕರಣಗಳ ಮಧ್ಯೆ, ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಕೋವಿಡ್ 19 ಮಾರ್ಗಸೂಚಿ/ಸಲಹೆ ನೀಡಿದೆ. ಅದರ ಪ್ರಕಾರ ವಿಶೇಷವಾಗಿ ವೃದ್ಧರು, ಮಕ್ಕಳು, ಗರ್ಭಿಣಿಯರು, ಅನಾರೋಗ್ಯಕ್ಕೆ ಒಳಗಾದವರು ಜೊತೆಗೆ ಜನಸಂದಣಿ ಪ್ರದೇಶಗಳಲ್ಲಿನ ಜನರು ಕಡ್ಡಾಯವಾಗಿ ಮಾಸ್ಕ್ಧಾರಣೆ ಕಡ್ಡಾಯಗೊಳಿಸಿದೆ.
ಮಾಸ್ಕ್ ಕಡ್ಡಾಯದ ಜೊತೆಗೆ ಗುಂಪು ಸೇರುವುದನ್ನು ಸಾಧ್ಯವಾದರೆ ತಪ್ಪಿಸಿ. ವೈರಸ್ ಕೊಲ್ಲಲು ಜನರು ಆಗಾಗ್ಗೆ ಕೈ ತೊಳೆಯಬೇಕು. ಆಲ್ಕೋಹಾಲ್ ಆಧಾರಿತ ಸ್ಯಾನಿಟೈಜರ್ಗಳನ್ನು ಎಲ್ಲರು ಬಳಸಬೇಕು ಎಂದು ಸರ್ಕಾರ ಸಲಹೆ ನೀಡಿದೆ.

ಕೊರನಾ ಮೂರನೇ ಡೋಸ್ (ಬೂಸ್ಟರ್) ತೆಗೆದುಕೊಳ್ಳದ ಕಾರಣ ಜನರಿಗೆ ಕೂಡಲೇ ಲಸಿಕೆ ಪಡೆಯುವಂತೆ ಸರ್ಕಾರ ನಿರ್ದೇಶಿಸಿದೆ. ಕೋವಿಡ್ ಪಾಸಿಟಿವ್ ಕಂಡು ಬಂದವರು ಒಂದು ವಾರ ಮನೆಯಲ್ಲಿ ಪ್ರತ್ಯೇಕವಾಗಿರಬೇಕು. ಮನೆಗಳಲ್ಲಿ ಕೋವಿಡ್ ಮಾರ್ಗಸೂಚಿ ಅನುಸರಿಸಬೇಕು. ಆರೋಗ್ಯ ಪರಿಸ್ಥಿತಿ ಹದಗೆಟ್ಟರೆ ಅಂತವರು ಕೂಡಲೇ ಸಮೀಪದ ಆಸ್ಪತ್ರೆಗೆ ತೆರಳಿ ವೈದ್ಯರನ್ನು ಸಂಪರ್ಕಿಸಬೇಕು. ಸಾಧ್ಯವಾದರೆ ಆಸ್ಪತ್ರೆಗಳಲ್ಳೇ ಚಿಕಿತ್ಸೆ ಪಡೆಯುವಂತೆ ಹೇಳಲಾಗಿದೆ.
ಕರ್ನಾಟಕದಲ್ಲಿ ನೆನ್ನೆ 379 ಕೇಸ್ ಪತ್ತೆ
ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 379 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 2056ಕ್ಕೆ ತಲುಪಿದೆ. ಇದುವರೆಗೆ ಒಟ್ಟು 4040409 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಸೋಂಕಿನಿಂದ ಒಂದೇ ದಿನ 3 ಮಂದಿ ಮೃತಪಟ್ಟಿದ್ದಾರೆ. ಈ ಕಾರಣಕ್ಕೆ ಒಟ್ಟು ಮೃತರ ಸಂಖ್ಯೆ 40,297ಕ್ಕ ಏರಿಕೆ ಆಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಟ್ಟು 16,634 ಕೋವಿಡ್ ತಪಾಸಣೆ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ವರದಿ ತಿಳಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications