ಗಡಿ ನಿಯಂತ್ರಣಾ ರೇಖೆ ದಾಟಿ ಉಗ್ರರ ಸದ್ದಡಗಿಸಿದ ಭಾರತೀಯ ಸೇನೆ
ನವದೆಹಲಿ, ಸೆಪ್ಟೆಂಬರ್ 29 : ಭಾರತದ ಮೇಲೆ ದಾಳಿ ಮಾಡಲು ಹೊಂಚು ಹಾಕಿ ಕುಳಿತಿದ್ದ ಭಯೋತ್ಪಾದಕ ನೆಲೆಯ ಮೇಲೆ ಭಾರತೀಯ ಸೇನೆ ಅತ್ಯಂತ ಚಾಕಚಕ್ಯತೆಯಿಂದ ಮತ್ತು ಕರಾರುವಾಕ್ಕಾಗಿ ಬುಧವಾರ ರಾತ್ರಿ ದಾಳಿ ನಡೆಸಿದ್ದು, ಉಗ್ರರ ನೆಲೆಗೆ ಭಾರೀ ಹಾನಿ ಮಾಡಿದೆ.
ಈ ಸಂಗತಿಯನ್ನು ಸೇನಾ ಕಾರ್ಯಾಚರಣೆಯ ಮಹಾ ನಿರ್ದೇಶಕ ಲೆ.ಜ. ರಣಬೀರ್ ಸಿಂಗ್ ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು. ವಿದೇಶಾಂಕ ಸಚಿವಾಲಯದ ವಕ್ತಾರರೊಡನೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಸೇನೆ ನಡೆಸಿದ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ಈ ಬಗ್ಗೆ ಪಾಕಿಸ್ತಾನಕ್ಕೂ ಮಾಹಿತಿ ನೀಡಲಾಗಿದೆ. [200ಕ್ಕೂ ಹೆಚ್ಚು ನುಸುಳುಕೋರರನ್ನು ಮಟ್ಟಹಾಕಿದ ಸೇನೆ]

ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ, ಭಾರತಕ್ಕೆ ಹಾನಿ ಮಾಡಲೆಂದೇ ಹೊಂಚು ಹಾಕಿ ಕುಳಿತಿದ್ದ ಉಗ್ರರಿಗೆ ಭಾರತೀಯ ಸೇನೆ ಭಾರೀ ಪೆಟ್ಟು ನೀಡಿದೆ. ಭಯೋತ್ಪಾಕರ ಸದ್ದನ್ನು ಅಡಗಿಸುವ ಉದ್ದೇಶದಿಂದ ಲೈನ್ ಆಫ್ ಕಂಟ್ರೋಲನ್ನು ದಾಟಿ ಸೇನೆ ದಾಳಿ ನಡೆಸಿದೆ.
ಇನ್ನು ಸುಮ್ಮನೆ ಕೂಡುವುದು ಸಾಧ್ಯವಿಲ್ಲ. ಭಾರತಕ್ಕೆ ಹಾನಿಯುಂಟು ಮಾಡಲು ಯಾವುದೇ ಭಯೋತ್ಪಾದಕ ಸಂಘಟನೆ ಯತ್ನಿಸಿದರೆ, ತಿರುಗೇಟು ನೀಡಲು ಭಾರತೀಯ ಸೇನೆ ಯಾವಾಗಲೂ ಸಿದ್ಧವಿರುತ್ತದೆ ಎಂದು ರಣಬೀರ್ ಸಿಂಗ್ ಅವರು ಉಗ್ರರಿಗೆ ಎಚ್ಚರಿಕೆ ನೀಡಿದ್ದಾರೆ. [ಎಷ್ಟು ಉಗ್ರರ ಕ್ಯಾಂಪ್ ಧ್ವಂಸ, ಎಷ್ಟು ಜನ ಉಗ್ರರು ಬಲಿ?]
ಭಾರತ ಮತ್ತು ಪಾಕ್ ಗಡಿಯ ಮೂಲಕ ಉಗ್ರರು ನುಸುಳಲು ಯತ್ನಿಸಿದರೆ ಭಾರತ ಎಂದೂ ಸುಮ್ಮನಿರುವುದಿಲ್ಲ. ಭಯೋತ್ಪಾದಕರು ನುಸುಳಲು ಅವಕಾಶ ಮಾಡಿಕೊಡಬಾರದೆಂದು ಪಾಕಿಸ್ತಾನಕ್ಕೆ ಎಷ್ಟೇ ಹೇಳಿದರೂ ಕೇಳುತ್ತಿಲ್ಲ. ನಾವು ಶಾಂತಿಯನ್ನು ಬಯಸುತ್ತೇವೆ. ಆದರೆ, ಯಾರೇ ಶಾಂತಿ ಭಂಗ ಮಾಡಲು ಯತ್ನಿಸಿದರೆ ತಿರುಗೇಟು ನೀಡೇನೀಡುತ್ತೇವೆ ಎಂದು ಅವರು ಪಾಕಿಸ್ತಾನಕ್ಕೆ ಕಟ್ಟೆಚ್ಚರಿಕೆ ನೀಡಿದ್ದಾರೆ.
ಉಗ್ರರ 5 ನೆಲೆಗಳು ನಾಶ : ಭಾರತೀಯ ಸೇನೆ ಮಾಡಿದ ದಾಳಿಗೆ ಉಗ್ರರ ಐದು ನೆಲೆಗಳು ಸರ್ವನಾಶವಾಗಿವೆ. ಗಡಿ ನಿಯಂತ್ರಣಾ ರೇಖೆಯ 500 ಮೀಟರ್ ಮತ್ತು 2 ಕಿ.ಮೀ. ದೂರದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ. ['ಸರ್ಜಿಕಲ್ ಆಪರೇಷನ್' ಅಂದರೆ ಏನು ಗೊತ್ತಾ?]
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications