ಓಮಿಕ್ರಾನ್ ಅಂಟಿದರೆ ಮನೆಯಲ್ಲೇ ಚಿಕಿತ್ಸೆ: ಹೀಗಿದೆ ವಿಧಾನ
ಹೈದ್ರಾಬಾದ್, ಡಿಸೆಂಬರ್ 23: ತೆಲಂಗಾಣದಲ್ಲಿ ಮುಂದಿನ ಕೆಲವು ದಿನಗಳ ನಂತರ ಕೊವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಳ್ಳುವುದಕ್ಕೆ ಮನೆ ಆಧಾರಿತ ಪ್ರತ್ಯೇಕತೆಯು(ಹೋಮ್ ಐಸೋಲೇಷನ್) ಪ್ರಮುಖ ಪಾತ್ರ ವಹಿಸಲಿದೆ.
ವೈದ್ಯಕೀಯ ಅಧ್ಯಯನಗಳ ಪ್ರಕಾರ, ಓಮಿಕ್ರಾನ್ ರೂಪಾಂತರಿಯು ಹೆಚ್ಚು ವೇಗವಾಗಿ ಒಬ್ಬರಿಂದ ಒಬ್ಬರಿಗೆ ಹರಡುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ಡೆಲ್ಟಾ ರೂಪಾಂತರಿಗಿಂತ ಕಡಿಮೆ ತೀವ್ರತೆಯನ್ನು ಹೊಂದಿದೆ.
ಕೊರೊನಾವೈರಸ್ ಡೆಲ್ಟಾ ರೂಪಾಂತರಿಗಿಂತ ಅಪಾಯಕಾರಿ ಆಗಿರದ ಓಮಿಕ್ರಾನ್ ಸೋಂಕು ತಗುಲಿದ ರೋಗಿಗಳಿಗೆ ಮನೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಓಮಿಕ್ರಾನ್ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳುವುದರ ಬದಲಿಗೆ ಮನೆಗಳಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಒದಗಿಸಲು ರಾಜ್ಯ ಆರೋಗ್ಯ ಇಲಾಖೆಯು ಆಲೋಚಿಸುತ್ತಿದೆ.

ಹೋಮ್ ಐಸೋಲೇಷನ್ ಕಿಟ್ ಖರೀದಿಸಿದ ಸರ್ಕಾರ
ಓಮಿಕ್ರಾನ್ ಸೋಂಕು ತಗುಲಿದ ಸೋಂಕಿತರಿಗೆ ಹೋಮ್ ಐಸೋಲೇಷನ್ ತೀರಾ ಅಗತ್ಯವಾಗಿರುತ್ತದೆ. "ಹೋಮ್ ಐಸೋಲೇಶನ್ ಟ್ರೀಟ್ಮೆಂಟ್ ಮತ್ತು ಮಾನಿಟರಿಂಗ್ ಪ್ರೋಟೋಕಾಲ್" (HITAM) ಅನ್ನು ನಿಯೋಜಿಸಲು ಚಿಂತಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು 25 ಲಕ್ಷಕ್ಕೂ ಹೆಚ್ಚು ಹೋಮ್ ಐಸೋಲೇಶನ್ ಕಿಟ್ಗಳನ್ನು ಖರೀದಿಸಲು ತಯಾರಿ ನಡೆಸುತ್ತಿದೆ. ಈ ಕಿಟ್ಗಳನ್ನು ಓಮಿಕ್ರಾನ್ ರೂಪಾಂತರ ಸೋಂಕು ತಗುಲಿದ ರೋಗಿಗಳಿಗೆ ಮಾರ್ಗದರ್ಶನ ಮತ್ತು ಔಷಧಿಗಳನ್ನು ಒದಗಿಸಲು ಸಹಕಾರಿ ಆಗಿರುತ್ತದೆ.

ಓಮಿಕ್ರಾನ್ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆದುಕೊಳ್ಳಬಹುದು
"ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಅತಿಹೆಚ್ಚು ವೇಗವಾಗಿ ಹರಡುವ ರೋಗಾಣು ಆಗಿದೆ. ಆದರೆ ಈ ಸೋಂಕು ತಗುಲಿದ ವ್ಯಕ್ತಿಗಳಿಗೆ ಹೆಚ್ಚಿನ ಅಪಾಯ ಇರುವುದಿಲ್ಲ. ಈ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಮಟ್ಟದ ತೀವ್ರತೆಯನ್ನು ಎದುರಿಸುವುದಿಲ್ಲ. ಓಮಿಕ್ರಾನ್ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಿದರೆ ಸಾಕಾಗುತ್ತದೆ. ಈ ಹಿನ್ನೆಲೆ ಗೃಹ ಪ್ರತ್ಯೇಕತೆ ವ್ಯವಸ್ಥೆಯಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಆದ್ದರಿಂದ ನಾವು 25 ಲಕ್ಷಕ್ಕಿಂತ ಹೆಚ್ಚು ಹೋಮ್ ಐಸೋಲೇಷನ್ ಕಿಟ್ ಅನ್ನು ಖರೀದಿಸಿದ್ದೇವೆ," ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ನಿರ್ದೇಶಕ ಡಾ. ಜಿ ಶ್ರೀನಿವಾಸ್ ರಾವ್ ತಿಳಿಸಿದ್ದಾರೆ.

ಓಮಿಕ್ರಾನ್ ಸೋಂಕಿತರ ಆರೋಗ್ಯದ ಮೇಲೆ ಕಣ್ಗಾವಲು
ಗೃಹ ಪ್ರತ್ಯೇಕತೆ ವ್ಯವಸ್ಥೆಯಲ್ಲಿರುವ ಓಮಿಕ್ರಾನ್ ಸೋಂಕಿತರಿಗೆ ಔಷಧೀಯ ಕಿಟ್ ಅನ್ನು ವಿತರಿಸಿವುದರ ಜೊತೆಗೆ ಅವರ ಆರೋಗ್ಯದ ಬಗ್ಗೆ ಮೇಲ್ವಿಚಾರಣೆಯನ್ನು ನಡೆಸಲಾಗುವುದು. ತರಬೇತಿ ಪಡೆದ ಟೆಲಿಕಾಲರ್ ಮೂಲಕ ಆರೋಗ್ಯದಲ್ಲಿನ ಚೇತರಿಕೆ ಹಾಗೂ ಚಿಕಿತ್ಸೆಯ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು. ಹೋಮ್ ಐಸೋಲೇಶನ್ ಟ್ರೀಟ್ಮೆಂಟ್ ಮತ್ತು ಮಾನಿಟರಿಂಗ್ ಪ್ರೋಟೋಕಾಲ್ ಪ್ರಕಾರ ಆರೋಗ್ಯದ ಮೇಲ್ವಿಚಾರಣೆ ನಡೆಸಲಾಗುತ್ತದೆ. ಅದಕ್ಕಾಗಿ ಈ ಹಿಂದೆ ಕೊವಿಡ್-19 ಎರಡನೇ ಅಲೆಯ ಸಂದರ್ಭದಲ್ಲಿ ಹೈದ್ರಾಬಾದ್ ನಗರದಲ್ಲಿ ಕಾಲ್ ಸೆಂಟರ್ ಅನ್ನು ತೆರೆಯಲಾಗಿತ್ತು.

ಸೋಂಕಿತರ ಆರೋಗ್ಯ ಸ್ಥಿತಿ ಮೇಲೆ ಚಿಕಿತ್ಸೆ ವಿಧಾನ ನಿರ್ಧಾರ
ಕೊವಿಡ್-19 ವೈದ್ಯಕೀಯ ಪರೀಕ್ಷೆ ಕೇಂದ್ರಗಳಲ್ಲಿ ಸೋಂಕಿತನ ಆರೋಗ್ಯ ಸ್ಥಿತಿ ಮತ್ತು ಗಂಭೀರತೆ ಆಧಾರದ ಮೇಲೆ ಹೋಮ್ ಐಸೋಲೇಷನ್ ಅಡಿ ಚಿಕಿತ್ಸೆ ನೀಡಬೇಕೇ ಅಥವಾ ಆಸ್ಪತ್ರೆಗೆ ದಾಖಲಿಸಬೇಕೇ ಎಂಬುದನ್ನು ನಿರ್ಧರಿಸಲಾಗುತ್ತದೆ. ಹಿರಿಯ ವೈದ್ಯರು ಪರೀಕ್ಷೆ ನಡೆಸಿದ ನಂತರ ರೋಗಿಯ ಆರೋಗ್ಯ ಸ್ಥಿತಿಯ ಬಗ್ಗೆ ಟೆಲಿ ಕಾಲರ್ ಸಿಬ್ಬಂದಿಗೆ ಸೂಚನೆ ನೀಡಲಾಗುತ್ತದೆ. ನಂತರ ಟೆಲಿಕಾಲರ್ ಸಿಬ್ಬಂದಿಯು ರೋಗಿಯ ಆರೋಗ್ಯ ಸ್ಥಿತಿ ಮತ್ತು ಚೇತರಿಕೆ ಕುರಿತು ನಿಗಾ ವಹಿಸುತ್ತಾರೆ.
ಒಂದು ವೇಳೆ ಉಸಿರಾಟ ಸಮಸ್ಯೆ, ತೀವ್ರ ಜ್ವರ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಹೊಂದಿದ್ದರೆ, ಅಂಥ ರೋಗಿಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗುತ್ತದೆ. ಆಸ್ಪತ್ರೆಗೆ ದಾಖಲು ಮಾಡಬೇಕಾದ ಪ್ರಕರಣಗಳನ್ನು ಗುರುತಿಸಲು ಟೆಲಿ-ಕಾಲರ್ಗಳಿಗೆ ತರಬೇತಿ ನೀಡಲಾಗುತ್ತದೆ. ಟೆಲಿ-ಕಾಲರ್ಗಳು ತುರ್ತು ಆಂಬ್ಯುಲೆನ್ಸ್ ಮತ್ತು ಕೊವಿಡ್-19 ಆಸ್ಪತ್ರೆಗಳಲ್ಲಿ ತ್ವರಿತ ಸಾರಿಗೆ ಮತ್ತು ಪ್ರವೇಶಕ್ಕಾಗಿ ಹಾಸಿಗೆ ಲಭ್ಯತೆಯ ಮಾಹಿತಿ ಹೊಂದಿರುತ್ತಾರೆ.

ಹೋಮ್ ಐಸೋಲೇಷನ್ ನಲ್ಲಿರುವ ರೋಗಿಗೆ ಔಷಧಿ
"ಒಮಿಕ್ರಾನ್ ಸೋಂಕಿತ ರೋಗಿಗಳ ಚಿಕಿತ್ಸಾ ಮಾರ್ಗಸೂಚಿಗಳಲ್ಲಿ ಇದುವರೆಗೆ ಯಾವುದೇ ನಿರ್ದಿಷ್ಟ ಔಷಧವನ್ನು ಸೇರಿಸಲಾಗಿಲ್ಲ. ಸಾಮಾನ್ಯ ಔಷಧಿಗಳಾದ ಪ್ಯಾರೆಸಿಟಮಾಲ್, ಸೆಟ್ರಿಜಿನ್, ಡಾಕ್ಸಿಸೈಕ್ಲಿನ್ನಂತಹ ಬ್ರಾಡ್ ಸ್ಪೆಕ್ಟ್ರಮ್ ಆ್ಯಂಟಿಬಯೋಟಿಕ್ಗಳು, ವಿಟಮಿನ್ ಸಿ ಯಂತಹ ಪೂರಕ ಔಷಧಿಗಳನ್ನು ಹೋಮ್ ಐಸೋಲೇಷನ್ ನಲ್ಲಿರುವ ರೋಗಿಗಳಿಗೆ ನೀಡಲಾಗುತ್ತದೆ," ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications