ಕಲ್ಲಿದ್ದಲು ಬಳಕೆಯ ಬೇಡಿಕೆ ಪೂರೈಸುವ ನಿಟ್ಟಿನಲ್ಲಿ ಭಾರತ ಸಮರ್ಥ: ಪ್ರಲ್ಹಾದ್ ಜೋಶಿ
ನವದೆಹಲಿ, ಅಕ್ಟೋಬರ್.17: ಜಾಗತಿಕ ಕಲ್ಲಿದ್ದಲು ಬೇಡಿಕೆಯನ್ನು ಹೆಚ್ಚಿಸುವ ಮತ್ತು ಬಳಕೆಯಲ್ಲಿನ ಬೇಡಿಕೆ ಪೂರೈಸಲು ಭಾರತ ಸಮರ್ಥವಾಗಿ ಸಜ್ಜಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನವದೆಹಲಿಯಲ್ಲಿ ನಡೆದ ಪ್ರಥಮ ಕಲ್ಲಿದ್ದಲು ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಲ್ಹಾದ್ ಜೋಶಿ, ಭಾರತದಲ್ಲಿ ಕಲ್ಲಿದ್ದಲು ಕ್ಷೇತ್ರದ ಭವಿಷ್ಯದ ಹಾದಿಯನ್ನು ನಿರ್ಧರಿಸಲು ಇಂತಹ ಸಮಾವೇಶಗಳು ಮುಖ್ಯಪಾತ್ರ ವಹಿಸಲಿವೆ ಎಂದರು.
ಜಾಗತಿಕ ಕಲ್ಲಿದ್ದಲು ಬೇಡಿಕೆಯನ್ನು ಹೆಚ್ಚಿಸುವ ಮತ್ತು ಬಳಕೆಯಲ್ಲಿನ ಬೇಡಿಕೆ ಪೂರೈಸಲು ಭಾರತ ಹೇಗೆ ಸಜ್ಜಾಗಿದೆ ಎಂಬುದರ ಕುರಿತು ಸ್ಪಷ್ಟತೆ ನೀಡಿದ ಪ್ರಲ್ಹಾದ್ ಜೋಶಿ, ನೀತಿ ನಿರೂಪಣೆ, ಉದ್ಯಮಿಗಳ ಒಗ್ಗೂಡವಿಕೆಗೆ ಸಮಾವೇಶಗಳು ಸಹಕಾರಿ ಎಂದು ಹೇಳಿದರು.

ಇನ್ನು ವಿಶೇಷವಾಗಿ ವಿದ್ಯುತ್ ವಲಯಕ್ಕೆ ಕಲ್ಲಿದ್ದಲು ರವಾನೆಯು ಕಳೆದ ವರ್ಷಕ್ಕಿಂತ (ಏಪ್ರಿಲ್-ಸೆಪ್ಟೆಂಬರ್) 16.7% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಕಲ್ಲಿದ್ದಲು ಉತ್ಪಾದನೆ 356 ಎಂ.ಟಿ ತಲುಪಿದ್ದನ್ನು ಗಮನಿಸಿದಾಗ ಸಂತೋಷವೆನಿಸುತ್ತದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.
ಇಂದಿನ ರಾಷ್ಟ್ರೀಯ ಕಲ್ಲಿದ್ದಲು ಸಮಾವೇಶದಲ್ಲಿ ಕಲ್ಲಿದ್ದಲು ಬ್ಲಾಕ್ಗಳ ಅಭಿವೃದ್ಧಿ ಮತ್ತು ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕುವ ಸಮಾರಂಭ ನಡೆಯಿತು. ಹಿಂದಿನ ಅವಧಿಗಳಲ್ಲಿ ಹಾರಾಜಾಗಿದ್ದ ಒಟ್ಟು 10 ಕಲ್ಲಿದ್ದಲು ಗಣಿಗಳು, ಕಲ್ಲಿದ್ದಲು ಉತ್ಪಾದನೆ ಒಪ್ಪಂದಕ್ಕೆ ಸಹಿ ಹಾಕಿವೆ. ಶೀಘ್ರದಲ್ಲಿಯೇ ಈ ಗಣಿಗಳಲ್ಲಿ ಕಲ್ಲಿದ್ದಲು ಉತ್ಪಾದನೆ ಆರಂಭವಾಗಲಿದೆ. ಇನ್ನು ಮೊದಲನೇ ಕಲ್ಲಿದ್ದಲು ರಾಷ್ಟ್ರೀಯ ಸಮಾವೇಶ ಇದಾಗಿದೆ. ಕಲ್ಲಿದ್ದಲು ಉತ್ಪಾದನಾ ಪ್ರದರ್ಶನ ಕೂಡ ಇದರೊಂದಿಗೆ ನಡೆದಿದ್ದು, ಎಲ್ಲರ ಗಮನ ಸೆಳೆದಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications