ದೇಶದ ಹುಲಿಗಳ ಸಂಖ್ಯೆಯಲ್ಲಿ ಕರ್ನಾಟಕವೇ ನಂ.1
ನವದೆಹಲಿ,ಜ.20: ಪ್ರಾಣಿ ಪ್ರಿಯರಿಗೆ ಸಂತಸದ ಸುದ್ದಿ ಸಿಕ್ಕಿದೆ. ರಾಷ್ಟ್ರೀಯ ಪ್ರಾಣಿ ಹುಲಿಯನ್ನು ಸಂರಕ್ಷಿಸುವ ಹೊಣೆ ಹೊತ್ತವರು ಹೆಮ್ಮೆಪಡುವಂಥ ಅಂಕಿ ಅಂಶವನ್ನು ಕೇಂದ್ರ ಪರಿಸರ ಇಲಾಖೆ ನೀಡಿದೆ. ಇತ್ತೀಚಿನ ಗಣತಿ ಪ್ರಕಾರ ಭಾರತದಲ್ಲಿ ಪ್ರಸ್ತುತ ಹುಲಿಗಳ ಸಂಖ್ಯೆ ಎರಡು ಸಾವಿರವನ್ನು ದಾಟಿದೆ.
ದೇಶದಲ್ಲಿ ಹುಲಿಗಳ ಸಂಖ್ಯೆ ಕ್ಷೀಣಿಸುತ್ತಿರುವುವುದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಂಡಿದ್ದಲ್ಲದೆ, ಬೇಟೆಗಾರರು, ಕಳ್ಳ ಸಾಗಾಣಿಕೆ ಭೀತಿಯನ್ನು ಸಮರ್ಥವಾಗಿ ಎದುರಿಸಿರುವ ಭಾರತ ಹುಲಿಗಳ ಸಂತತಿಯಲ್ಲಿ ಗಣನೀಯವಾಗಿ ಏರಿಕೆಯಾಗುವಂತೆ ನೋಡಿಕೊಂಡಿದೆ.
2014ರ ಗಣತಿಯ ಪ್ರಕಾರ ಭಾರತದಲ್ಲಿ 2,226 ಹುಲಿಗಳು ಅಸ್ತಿತ್ವದಲ್ಲಿವೆಯಂತೆ. 2010ರಲ್ಲಿದ್ದ ಹುಲಿಗಳ ಸಂಖ್ಯೆ 1706. ಏಳು ವರ್ಷಗಳ ಹಿಂದೆ ಹುಲಿಗಳ ಸಂಖ್ಯೆ 1400ಕ್ಕೆ ಕುಸಿತು ಆತಂಕ ಮೂಡಿಸಿತ್ತು. ವಿಶ್ವದ ಇತರೆಡೆಗಳಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗುತ್ತಿದ್ದರೆ ಭಾರತದಲ್ಲಿ ಏರಿಕೆಯಾಗುತ್ತಿರುವುದು ಸಂತಸದ ಸುದ್ದಿ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಹರ್ಷ ವ್ಯಕ್ತಪಡಿಸಿದ್ದಾರೆ.
ಭಾರತ ವಿಶ್ವದ ಶೇಕಡಾ 70ರಷ್ಟು ಹುಲಿಗಳ ಆವಾಸ ಸ್ಥಾನವಾಗಿದೆ. ಭಾರತದಲ್ಲಿರುವ ಹುಲಿಗಳ ಪೈಕಿ ಕರ್ನಾಟಕದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿರುವುದು ಕಂಡು ಬಂದಿದೆ.

ಹುಲಿ ಸಂರಕ್ಷಣೆಗೆ ಸಂಬಂಧಿಸಿದಂತೆ ಮಧ್ಯಪ್ರದೇಶದ ಪನ್ನಾ ಹುಲಿ ಸಂರಕ್ಷಣಾ ಕೇಂದ್ರ ಹಾಗೂ ತಮಿಳುನಾಡಿನ ಅನ್ನಾಮಲೈ ಹುಲಿ ಸಂರಕ್ಷಣಾ ಕೇಂದ್ರಗಳು ಪ್ರಶಸ್ತಿ ಪಡೆದಿವೆ. ಸ್ಥಳೀಯರನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿದ್ದಕ್ಕಾಗಿ ಕೇರಳದ ಪೆರಿಯಾರ್ ಸಂರಕ್ಷಣಾ ಕೇಂದ್ರ ಪ್ರಶಸ್ತಿ ಪಡೆದುಕೊಂಡಿದೆ. ಅದೇ ರೀತಿ ಮಹಾರಾಷ್ಟ್ರದ ಮೇಲ್ಘಾಟ್ ಸಂರಕ್ಷಣಾ ಕೇಂದ್ರವೂ ಪ್ರಶಸ್ತಿಗೆ ಪಾತ್ರವಾಗಿದೆ ಎಂದು ಸಚಿವ ಪ್ರಕಾಶ್ ಹೇಳಿದರು.
ಭಾರತದಲ್ಲಿ ವನ್ಯಮೃಗಗಳ ಹತ್ಯೆ ಗಣನೀಯವಾಗಿ ಹೆಚ್ಚಿರುವ ಹಿನ್ನೆಲೆಯಲ್ಲಿ ಹುಲಿಯಂಥ ಪ್ರಾಣಿಗಳ ಸಂರಕ್ಷಣೆಗಾಗಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. 2000ದ ಇಸವಿಯಲ್ಲಿ ಮೂರು ಸಾವಿರವಿದ್ದ ಹುಲಿಗಳು 2006ರ ವೇಳೆಗೆ ಸಂಪೂರ್ಣ ನಶಿಸಿ 1411ಕ್ಕೆ ಇಳಿದಿತ್ತು. ನಂಥರದಲ್ಲಿ ಕೈಗೊಂಡ ಕ್ರಮಗಳಿಂದಾಗಿ 2014ಕ್ಕೆ ಹುಲಿಗಳ ಸಂಖ್ಯೆ ಎರಡು ಸಾವಿರ ದಾಟಿದೆ ಎಂದು ಸಚಿವ ಪ್ರಕಾಶ್ ತಿಳಿಸಿದ್ದಾರೆ.

ರಾಜ್ಯಗಳ ಹುಲಿಗಳ ಸಂಖ್ಯೆ ಇಂತಿದೆ
* ಕರ್ನಾಟಕ : 406
* ಉತ್ತರಾಖಂಡ : 340
* ತಮಿಳುನಾಡು : 229
* ಮಧ್ಯಪ್ರದೇಶ : 208
* ಮಹಾರಾಷ್ಟ್ರ :190
* ಬಂಗಾಳ : 76
ಕಳೆದ ಒಂದು ವರ್ಷಕಾಲ ಈ ಗಣತಿ, ಫೋಟೋ ತೆಗೆಯುವ ಕಾರ್ಯ ನಡೆಸಲಾಗಿದೆ. ಮನುಷ್ಯ ಮತ್ತು ಹುಲಿಗಳ ಸಂಘರ್ಷದ ಬಗ್ಗೆ ಹೇಳುವುದಾದರೆ, ಹುಲಿಗೆ ಬಲಿಯಾದವರ ಸಂಖ್ಯೆ ಕಡಿಮೆಯಾಗಿದೆ ಮತ್ತು ತಾಯಿಯಿಂದ ದೂರವಾದ ಹುಲಿಮರಿಗಳ ಬಗ್ಗೆಯೂ ಇಲಾಖೆ ಸೂಕ್ತಕ್ರಮ ತೆಗೆದುಕೊಂಡಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications