ಉದ್ಯಮ ಸ್ನೇಹಿ ಸೂಚ್ಯಂಕದಲ್ಲಿ 23 ಸ್ಥಾನಗಳ ಜಿಗಿತ ಕಂಡ ಭಾರತ
ಉದ್ಯಮ ಸ್ನೇಹಿ ಸೂಚ್ಯಂಕದಲ್ಲಿ ಭಾರತವು 23 ಸ್ಥಾನಗಳ ಜಿಗಿತ ಕಂಡಿದೆ. ಸುಲಭವಾಗಿ ವ್ಯಾಪಾರ ಮಾಡಬಹುದಾದ ದೇಶಗಳ ಸೂಚ್ಯಂಕವನ್ನು ವಿಶ್ವಬ್ಯಾಂಕ್ ಬುಧವಾರ ಬಿಡುಗಡೆ ಮಾಡಿದೆ. ಇದರಲ್ಲಿ 2018ನೇ ಸಾಲಿನಲ್ಲಿ 190 ರಾಷ್ಟ್ರಗಳ ಪೈಕಿ ಭಾರತವು 77ನೇ ಸ್ಥಾನವನ್ನು ತಲುಪಿದೆ.
ಕಳೆದ ವರ್ಷ ಭಾರತವು 100ನೇ ಸ್ಥಾನದಲ್ಲಿತ್ತು. 2015 ಹಾಗೂ 2016ರಲ್ಲಿ 130ನೇ ಸ್ಥಾನದಲ್ಲಿತ್ತು. ವ್ಯಾಪಾರ ಮಾಡಲು ಅನುಕೂಲ ವಾತಾವರಣ ಇರುವ ಸೂಚ್ಯಂಕದ ಸಾಲಿನಲ್ಲಿ ಭಾರತವು ನಿರಂತರವಾಗಿ ಏರಿಕೆ ಕಾಣುತ್ತಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಇದು ಶುಭ ಸುದ್ದಿಯಾಗಿ ಪರಿಣಮಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ಏಕೆಂದರೆ, ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ಧ್ವನಿ ಅಡಗಿಸಲು ಇದರಿಂದ ಸಹಾಯ ಆಗುತ್ತದೆ ಎನ್ನಲಾಗುತ್ತದೆ. ಭಾರತದಲ್ಲಿ ಉದ್ಯಮ ಆರಂಭಕ್ಕೆ ಹಾಗೂ ನಡೆಸಲು ಇರುವ ಮಾನದಂಡಗಳ ಪೈಕಿ 10ರಲ್ಲಿ 6 ಭಾರತದಲ್ಲಿ ಉತ್ತಮ ಬೆಳವಣಿಗೆ ಕಂಡಿವೆ.

ಉದ್ಯಮ ಆರಂಭಕ್ಕೆ ಅನುಕೂಲ, ನಿರ್ಮಾಣ ಅನುಮತಿ, ವಿದ್ಯುತ್ ಸಂಪರ್ಕ ಪಡೆಯುವುದು, ಸಾಲ ಪಡೆಯುವುದು, ತೆರಿಗೆ ಪಾವತಿ, ಗಡಿಯಾಚೆಗೆ ವ್ಯಾಪಾರ, ಒಪ್ಪಂದಗಳ ಜಾರಿ ಹಾಗೂ ಉದ್ಯಮ ಸ್ಥಗಿತಗೊಳಿಸುವಾಗಿನ ನಿಯಮಗಳು...ಇವೆಲ್ಲವನ್ನೂ ಮಾನದಂಡವಾಗಿ ಪರಿಗಣಿಸಲಾಗಿದೆ.
2014ರಲ್ಲಿ ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬರುವ ವೇಳೆ 190 ರಾಷ್ಟ್ರಗಳ ಪೈಕಿ ಭಾರತವು 142ನೇ ಸ್ಥಾನದಲ್ಲಿತ್ತು.
-
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications