ಯಾಸಿನ್ ಮಲಿಕ್ ಪರ ನಿಂತ ಇಸ್ಲಾಮೀ ರಾಷ್ಟ್ರಗಳಿಗೆ ಭಾರತ ತಿರುಗೇಟು
ನವದೆಹಲಿ, ಮೇ 28: ಉಗ್ರ ಚಟುವಟಿಕೆಗಳಲ್ಲಿ ನಿರತರಾದ ಕಾರಣಕ್ಕೆ ಭಾರತೀಯ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಯಾಸಿನ್ ಮಲಿಕ್ ಪರ ವಹಿಸಿಕೊಂಡ ಇಸ್ಲಾಮಿಕ್ ರಾಷ್ಟ್ರಗಳ ಗುಂಪೊಂದನ್ನು ಭಾರತ ಕಟುವಾಗಿ ಟೀಕಿಸಿದೆ. ಯಾಸಿನ್ ಮಲಿಕ್ಗೆ ಶಿಕ್ಷೆ ನೀಡಿದ ಭಾರತೀಯ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವ ಮೂಲಕ ಈ ಸಂಘಟನೆಯು ಭಯೋತ್ಪಾದಕ ಚಟುವಟಿಕೆಗಳಿಗೆ ಸ್ಪಷ್ಟವಾಗಿ ಬೆಂಬಲ ನೀಡಿದೆ ಎಂದು ಭಾರತ ತನ್ನ ಆಕ್ಷೇಪ ವ್ಯಕ್ತಪಡಿಸಿದೆ.
ಇಸ್ಲಾಮಿಕ್ ಸಹಕಾರ ಸಂಘಟನೆಯ ಸ್ವತಂತ್ರ ಖಾಯಂ ಮಾನವ ಹಕ್ಕು ಆಯೋಗ (OIC-IPHRC) ಭಾರತೀಯ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತಾ ಯಾಸಿನ್ ಮಲಿಕ್ಗೆ ಸಹಾನುಭೂತಿ ವ್ಯಕ್ತಪಡಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ, "ಯಾಸಿನ್ ಮಲಿಕ್ನ ಉಗ್ರ ಚಟುವಟಿಕೆಗಳ ದಾಖಲೆಗಳನ್ನು ಅಮೂಲಾಗ್ರವಾಗಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಕೊಡಲಾಗಿತ್ತು. ಇಸ್ಲಾಮೀ ರಾಷ್ಟ್ರಗಳ ಈ ಮಾನವ ಹಕ್ಕು ಆಯೋಗದ ಅಭಿಪ್ರಾಯ ಭಾರತಕ್ಕೆ ಅಸಮ್ಮತ" ಎಂದು ಹೇಳಿದ್ದಾರೆ.
"ಯಾಸಿನ್ ಮಲಿಕ್ ಪ್ರಕರಣದಲ್ಲಿ ನೀಡಲಾದ ನ್ಯಾಯತೀರ್ಪಿನ ವಿಚಾರದಲ್ಲಿ ಒಐಸಿ-ಐಪಿಎಚ್ಆರ್ಸಿ ಮಾಡಿರುವ ಟೀಕೆಯನ್ನು ಭಾರತ ಒಪ್ಪುವುದಿಲ್ಲ. ಇಂಥ ಪ್ರತಿಕ್ರಿಯೆ ಮೂಲಕ ಈ ಸಂಸ್ಥೆಯು ಯಾಸಿನ್ ಮಲಿಕ್ನ ಉಗ್ರ ಚಟುವಟಿಕೆಗಳಿಗೆ ಸ್ಪಷ್ಟ ಬೆಂಬಲ ವ್ಯಕ್ತಪಡಿಸಿದೆ. ಭಯೋತ್ಪಾದನೆಯನ್ನು ಒಂದಿಷ್ಟೂ ಸಹಿಸಬಾರದು ಎಂದು ಇಡೀ ವಿಶ್ವವೇ ಹೇಳುತ್ತಿದೆ. ಹೀಗಿರುವಾಗ ಭಯೋತ್ಪಾದಕ ಚಟುವಟಿಕೆಯನ್ನು ಯಾವುದೇ ರೀತಿಯಲ್ಲೂ ಸಮರ್ಥಿಸಿಕೊಳ್ಳಬಾರದು ಎಂದು ಓಐಸಿಗೆ ಒತ್ತಾಯಿಸುತ್ತೇವೆ" ಎಂದು ಅರಿಂದಮ್ ಬಾಗಚಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸಿದ ಪ್ರಕರಣದಲ್ಲಿ ಎನ್ಐಎ ಕೋರ್ಟ್ ಮೂರು ದಿನಗಳ ಹಿಂದೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 10 ಲಕ್ಷ ರೂ ದಂಡ ಹಾಕಿದೆ. ಇದೇ ಪ್ರಕರಣದಲ್ಲಿ ವಿವಿಧ ಹತ್ತು ಅಪರಾಧಗಳಿಗೆ ಎರಡು ಜೀವಾವಧಿ ಶಿಕ್ಷೆ ಹಾಗು ಐದು ಸಾವಿರದಿಂದ ಹತ್ತು ಲಕ್ಷ ರು ವರೆಗೆ ದಂಡ ವಿಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಮುಕ್ತಿ ರಂಗ (JKLF- Jammu and Kashmir Liberation Front) ಎಂಬ ಪ್ರತ್ಯೇಕತಾವಾದಿ ಸಂಘಟನೆಯ ಮುಖ್ಯಸ್ಥರಾದ ಯಾಸಿನ್ ಮಲಿಕ್ ಅವರ ಎರಡು ಜೀವಾವಧಿ ಶಿಕ್ಷೆ ಏಕಕಾಲದಲ್ಲಿ ಜಾರಿಗೆ ಬರಲಿವೆ. ಅಂದರೆ ಅವರು 15 ವರ್ಷ ಜೈಲುಶಿಕ್ಷೆ ಅನುಭವಿಸಲಿದ್ದಾರೆ.

ಅತ್ತ, ಯಾಸಿನ್ ಮಲಿಕ್ ತಮ್ಮ ಮೇಲಿನ ಆರೋಪಗಳನ್ನು ಸುಳ್ಳು ಎಂದು ಕೋರ್ಟ್ ಮುಂದೆ ಹೇಳಿಲ್ಲ. ತಮ್ಮ ಕೃತ್ಯಗಳನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡ ಅವರು ಕೋರ್ಟ್ ಏನೇ ತೀರ್ಪು ಕೊಟ್ಟರೂ ಒಪ್ಪಿಕೊಳ್ಳುತ್ತೇನೆ ಎಂದಿದ್ದರು. ಹಲವು ಹಿಂದೂ ಸಂಘಟನೆಗಳು ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ ಕೊಟ್ಟ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಡಿಸಿವೆ. ಯಾಸಿನ್ಗೆ ಮರಣದಂಡನೆ ಶಿಕ್ಷೆ ವಿಧಿಸಬೇಕಿತ್ತು ಎಂಬುದು ಈ ಸಂಘಟನೆಗಳ ಆಗ್ರಹವಾಗಿದೆ.
(ಒನ್ಇಂಡಿಯಾ ಸುದ್ದಿ)
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications