ಯಾಸಿನ್ ಮಲಿಕ್ ಪರ ನಿಂತ ಇಸ್ಲಾಮೀ ರಾಷ್ಟ್ರಗಳಿಗೆ ಭಾರತ ತಿರುಗೇಟು
ನವದೆಹಲಿ, ಮೇ 28: ಉಗ್ರ ಚಟುವಟಿಕೆಗಳಲ್ಲಿ ನಿರತರಾದ ಕಾರಣಕ್ಕೆ ಭಾರತೀಯ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಯಾಸಿನ್ ಮಲಿಕ್ ಪರ ವಹಿಸಿಕೊಂಡ ಇಸ್ಲಾಮಿಕ್ ರಾಷ್ಟ್ರಗಳ ಗುಂಪೊಂದನ್ನು ಭಾರತ ಕಟುವಾಗಿ ಟೀಕಿಸಿದೆ. ಯಾಸಿನ್ ಮಲಿಕ್ಗೆ ಶಿಕ್ಷೆ ನೀಡಿದ ಭಾರತೀಯ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುವ ಮೂಲಕ ಈ ಸಂಘಟನೆಯು ಭಯೋತ್ಪಾದಕ ಚಟುವಟಿಕೆಗಳಿಗೆ ಸ್ಪಷ್ಟವಾಗಿ ಬೆಂಬಲ ನೀಡಿದೆ ಎಂದು ಭಾರತ ತನ್ನ ಆಕ್ಷೇಪ ವ್ಯಕ್ತಪಡಿಸಿದೆ.
ಇಸ್ಲಾಮಿಕ್ ಸಹಕಾರ ಸಂಘಟನೆಯ ಸ್ವತಂತ್ರ ಖಾಯಂ ಮಾನವ ಹಕ್ಕು ಆಯೋಗ (OIC-IPHRC) ಭಾರತೀಯ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸುತ್ತಾ ಯಾಸಿನ್ ಮಲಿಕ್ಗೆ ಸಹಾನುಭೂತಿ ವ್ಯಕ್ತಪಡಿಸಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗಚಿ, "ಯಾಸಿನ್ ಮಲಿಕ್ನ ಉಗ್ರ ಚಟುವಟಿಕೆಗಳ ದಾಖಲೆಗಳನ್ನು ಅಮೂಲಾಗ್ರವಾಗಿ ಸಂಗ್ರಹಿಸಿ ನ್ಯಾಯಾಲಯಕ್ಕೆ ಕೊಡಲಾಗಿತ್ತು. ಇಸ್ಲಾಮೀ ರಾಷ್ಟ್ರಗಳ ಈ ಮಾನವ ಹಕ್ಕು ಆಯೋಗದ ಅಭಿಪ್ರಾಯ ಭಾರತಕ್ಕೆ ಅಸಮ್ಮತ" ಎಂದು ಹೇಳಿದ್ದಾರೆ.
"ಯಾಸಿನ್ ಮಲಿಕ್ ಪ್ರಕರಣದಲ್ಲಿ ನೀಡಲಾದ ನ್ಯಾಯತೀರ್ಪಿನ ವಿಚಾರದಲ್ಲಿ ಒಐಸಿ-ಐಪಿಎಚ್ಆರ್ಸಿ ಮಾಡಿರುವ ಟೀಕೆಯನ್ನು ಭಾರತ ಒಪ್ಪುವುದಿಲ್ಲ. ಇಂಥ ಪ್ರತಿಕ್ರಿಯೆ ಮೂಲಕ ಈ ಸಂಸ್ಥೆಯು ಯಾಸಿನ್ ಮಲಿಕ್ನ ಉಗ್ರ ಚಟುವಟಿಕೆಗಳಿಗೆ ಸ್ಪಷ್ಟ ಬೆಂಬಲ ವ್ಯಕ್ತಪಡಿಸಿದೆ. ಭಯೋತ್ಪಾದನೆಯನ್ನು ಒಂದಿಷ್ಟೂ ಸಹಿಸಬಾರದು ಎಂದು ಇಡೀ ವಿಶ್ವವೇ ಹೇಳುತ್ತಿದೆ. ಹೀಗಿರುವಾಗ ಭಯೋತ್ಪಾದಕ ಚಟುವಟಿಕೆಯನ್ನು ಯಾವುದೇ ರೀತಿಯಲ್ಲೂ ಸಮರ್ಥಿಸಿಕೊಳ್ಳಬಾರದು ಎಂದು ಓಐಸಿಗೆ ಒತ್ತಾಯಿಸುತ್ತೇವೆ" ಎಂದು ಅರಿಂದಮ್ ಬಾಗಚಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸಿದ ಪ್ರಕರಣದಲ್ಲಿ ಎನ್ಐಎ ಕೋರ್ಟ್ ಮೂರು ದಿನಗಳ ಹಿಂದೆ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ 10 ಲಕ್ಷ ರೂ ದಂಡ ಹಾಕಿದೆ. ಇದೇ ಪ್ರಕರಣದಲ್ಲಿ ವಿವಿಧ ಹತ್ತು ಅಪರಾಧಗಳಿಗೆ ಎರಡು ಜೀವಾವಧಿ ಶಿಕ್ಷೆ ಹಾಗು ಐದು ಸಾವಿರದಿಂದ ಹತ್ತು ಲಕ್ಷ ರು ವರೆಗೆ ದಂಡ ವಿಧಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರ ಮುಕ್ತಿ ರಂಗ (JKLF- Jammu and Kashmir Liberation Front) ಎಂಬ ಪ್ರತ್ಯೇಕತಾವಾದಿ ಸಂಘಟನೆಯ ಮುಖ್ಯಸ್ಥರಾದ ಯಾಸಿನ್ ಮಲಿಕ್ ಅವರ ಎರಡು ಜೀವಾವಧಿ ಶಿಕ್ಷೆ ಏಕಕಾಲದಲ್ಲಿ ಜಾರಿಗೆ ಬರಲಿವೆ. ಅಂದರೆ ಅವರು 15 ವರ್ಷ ಜೈಲುಶಿಕ್ಷೆ ಅನುಭವಿಸಲಿದ್ದಾರೆ.

ಅತ್ತ, ಯಾಸಿನ್ ಮಲಿಕ್ ತಮ್ಮ ಮೇಲಿನ ಆರೋಪಗಳನ್ನು ಸುಳ್ಳು ಎಂದು ಕೋರ್ಟ್ ಮುಂದೆ ಹೇಳಿಲ್ಲ. ತಮ್ಮ ಕೃತ್ಯಗಳನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡ ಅವರು ಕೋರ್ಟ್ ಏನೇ ತೀರ್ಪು ಕೊಟ್ಟರೂ ಒಪ್ಪಿಕೊಳ್ಳುತ್ತೇನೆ ಎಂದಿದ್ದರು. ಹಲವು ಹಿಂದೂ ಸಂಘಟನೆಗಳು ಯಾಸಿನ್ ಮಲಿಕ್ಗೆ ಜೀವಾವಧಿ ಶಿಕ್ಷೆ ಕೊಟ್ಟ ತೀರ್ಪಿನ ಬಗ್ಗೆ ಅಸಮಾಧಾನ ವ್ಯಕ್ತಡಿಸಿವೆ. ಯಾಸಿನ್ಗೆ ಮರಣದಂಡನೆ ಶಿಕ್ಷೆ ವಿಧಿಸಬೇಕಿತ್ತು ಎಂಬುದು ಈ ಸಂಘಟನೆಗಳ ಆಗ್ರಹವಾಗಿದೆ.
(ಒನ್ಇಂಡಿಯಾ ಸುದ್ದಿ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications