1971ರ ಭಾರತ-ಪಾಕಿಸ್ತಾನ ಯುದ್ಧದ 49ನೇ ವರ್ಷದ ವಿಜಯ ದಿವಸ
ನವದೆಹಲಿ, ಡಿಸೆಂಬರ್ 16: ದೇಶದಾದ್ಯಂತ ಇಂದು ವಿಜಯ್ ದಿವಸ ಆಚರಿಸಲಾಗುತ್ತಿದೆ. ಸ್ವತಂತ್ರ ಬಾಂಗ್ಲಾದೇಶ ರಚನೆಗೆ ಕಾರಣವಾದ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಭಾರತದ ಗೆಲುವನ್ನು ಪ್ರತಿ ಡಿಸೆಂಬರ್ 16ರಂದು ಸಂಭ್ರಮಿಸಲಾಗುತ್ತದೆ.
ವಿಜಯ ದಿವಸದ 49ನೇ ವರ್ಷಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಶಾಶ್ವತ ಬೆಳಕನಿಂದ ಸ್ವರ್ಣಿಂ ವಿಜಯ್ ಮಶಾಲ್ ದೀಪವನ್ನು ಬೆಳಗಿಸಿದರು. ಬಳಿಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಶಾಶ್ವತ ಬೆಳಕಿನಿಂದ ಮೂಲಕ ಹೊತ್ತಿಸಿದ ವಿಜಯ ಮಶಾಲ್ ಅನ್ನು (ಗೆಲುವಿನ ಪ್ರಕಾಶಗಳು) 1971ರ ಯುದ್ಧದ ಬಳಿಕ ಪರಮ ವೀರಚಕ್ರ ಮತ್ತು ಮಹಾ ವೀರ ಚಕ್ರ ಪ್ರಶಸ್ತಿಗಳನ್ನು ಪಡೆದ ಯೋಧರ ಗ್ರಾಮಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಕೊಂಡೊಯ್ಯಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

1971ರ ಯುದ್ಧ ಸುಮಾರು 13 ದಿನಗಳ ಕಾಲ ನಡೆದಿತ್ತು. ಪಾಕಿಸ್ತಾನದ ಸೇನಾ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಅವರು ತಮ್ಮ 93,000 ಸೈನಿಕರೊಂದಿಗೆ ಡಿಸೆಂಬರ್ 16ರಂದು ಭಾರತೀಯ ಸೇನೆ ಮತ್ತು ಮುಕ್ತಿ ವಾಹಿನಿಯ ಎದುರು ಶರಣಾಗಿತ್ತು. ಇದರಿಂದ ಪೂರ್ವ ಪಾಕಿಸ್ತಾನವು ಪಾಕಿಸ್ತಾನದಿಂದ ಬೇರ್ಪಟ್ಟು ಬಾಂಗ್ಲಾದೇಶ ಎಂಬ ಹೊಸ ದೇಶದ ಉಗಮಕ್ಕೆ ಕಾರಣವಾಗಿತ್ತು.
ಈ ದಿನದ ಮಹತ್ವದ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಆಕಾಶವಾಣಿಯು ತನ್ನ ಎಫ್ಎಂ ಗೋಲ್ಡ್ನಲ್ಲಿ ಇಂದು ರಾತ್ರಿ 9.15ಕ್ಕೆ ವಿಶೇಷ ಕಾರ್ಯಕ್ರಮವನ್ನು ನಿಗದಿಗೊಳಿಸಿದೆ. ಈ ಕಾರ್ಯಕ್ರಮವು 'ನ್ಯೂಸ್ ಆನ್ ಏರ್ ಅಫಿಷಿಯಲ್' ಯೂಟ್ಯೂಬ್ ಚಾನೆಲ್ನಲ್ಲಿಯೂ ಲಭ್ಯ.
ಪಶ್ಚಿಮ ಬಂಗಾಳದ ಹಲ್ದಿಬಾರಿ ಮತ್ತು ಬಾಂಗ್ಲಾದೇಶದ ನಿಲ್ಫಮರಿ ಜಿಲ್ಲೆಯ ಚಿಲಾಹಟಿ ಪ್ರದೇಶಗಳ ನಡುವೆ ಅಂತರ್ ಗಡಿ ರೈಲು ಸಂಪರ್ಕ ಸೇವೆಯನ್ನು ಪುನರಾರಂಭಿಸುವ ಬಗ್ಗೆ ಭಾರತ ಮತ್ತು ಬಾಂಗ್ಲಾದೇಶ ನಿರ್ಧಾರ ತೆಗೆದುಕೊಂಡಿವೆ. ಸುಮಾರು 55 ವರ್ಷಗಳ ಬಳಿಕ ಇಲ್ಲಿ ರೈಲು ಸಂಚಾರ ನಡೆಯುತ್ತಿದೆ.
-
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
US-Iran Talks: ಪಾಕ್ ನೆಲದಲ್ಲಿ 21 ಗಂಟೆಗಳ ಸಂಧಾನ ಮಾತುಕತೆ ವಿಫಲ: ಹೆಚ್ಚಿದ ಯುದ್ಧ ಭೀತಿ- ಪ್ರಮುಖಾಂಶಗಳು -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ











Click it and Unblock the Notifications