1971ರ ಭಾರತ-ಪಾಕಿಸ್ತಾನ ಯುದ್ಧದ 49ನೇ ವರ್ಷದ ವಿಜಯ ದಿವಸ
ನವದೆಹಲಿ, ಡಿಸೆಂಬರ್ 16: ದೇಶದಾದ್ಯಂತ ಇಂದು ವಿಜಯ್ ದಿವಸ ಆಚರಿಸಲಾಗುತ್ತಿದೆ. ಸ್ವತಂತ್ರ ಬಾಂಗ್ಲಾದೇಶ ರಚನೆಗೆ ಕಾರಣವಾದ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಭಾರತದ ಗೆಲುವನ್ನು ಪ್ರತಿ ಡಿಸೆಂಬರ್ 16ರಂದು ಸಂಭ್ರಮಿಸಲಾಗುತ್ತದೆ.
ವಿಜಯ ದಿವಸದ 49ನೇ ವರ್ಷಾಚರಣೆಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಶಾಶ್ವತ ಬೆಳಕನಿಂದ ಸ್ವರ್ಣಿಂ ವಿಜಯ್ ಮಶಾಲ್ ದೀಪವನ್ನು ಬೆಳಗಿಸಿದರು. ಬಳಿಕ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.
ಶಾಶ್ವತ ಬೆಳಕಿನಿಂದ ಮೂಲಕ ಹೊತ್ತಿಸಿದ ವಿಜಯ ಮಶಾಲ್ ಅನ್ನು (ಗೆಲುವಿನ ಪ್ರಕಾಶಗಳು) 1971ರ ಯುದ್ಧದ ಬಳಿಕ ಪರಮ ವೀರಚಕ್ರ ಮತ್ತು ಮಹಾ ವೀರ ಚಕ್ರ ಪ್ರಶಸ್ತಿಗಳನ್ನು ಪಡೆದ ಯೋಧರ ಗ್ರಾಮಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಗೆ ಕೊಂಡೊಯ್ಯಲಾಗುತ್ತದೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

1971ರ ಯುದ್ಧ ಸುಮಾರು 13 ದಿನಗಳ ಕಾಲ ನಡೆದಿತ್ತು. ಪಾಕಿಸ್ತಾನದ ಸೇನಾ ಜನರಲ್ ಅಮೀರ್ ಅಬ್ದುಲ್ಲಾ ಖಾನ್ ನಿಯಾಜಿ ಅವರು ತಮ್ಮ 93,000 ಸೈನಿಕರೊಂದಿಗೆ ಡಿಸೆಂಬರ್ 16ರಂದು ಭಾರತೀಯ ಸೇನೆ ಮತ್ತು ಮುಕ್ತಿ ವಾಹಿನಿಯ ಎದುರು ಶರಣಾಗಿತ್ತು. ಇದರಿಂದ ಪೂರ್ವ ಪಾಕಿಸ್ತಾನವು ಪಾಕಿಸ್ತಾನದಿಂದ ಬೇರ್ಪಟ್ಟು ಬಾಂಗ್ಲಾದೇಶ ಎಂಬ ಹೊಸ ದೇಶದ ಉಗಮಕ್ಕೆ ಕಾರಣವಾಗಿತ್ತು.
ಈ ದಿನದ ಮಹತ್ವದ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಆಕಾಶವಾಣಿಯು ತನ್ನ ಎಫ್ಎಂ ಗೋಲ್ಡ್ನಲ್ಲಿ ಇಂದು ರಾತ್ರಿ 9.15ಕ್ಕೆ ವಿಶೇಷ ಕಾರ್ಯಕ್ರಮವನ್ನು ನಿಗದಿಗೊಳಿಸಿದೆ. ಈ ಕಾರ್ಯಕ್ರಮವು 'ನ್ಯೂಸ್ ಆನ್ ಏರ್ ಅಫಿಷಿಯಲ್' ಯೂಟ್ಯೂಬ್ ಚಾನೆಲ್ನಲ್ಲಿಯೂ ಲಭ್ಯ.
ಪಶ್ಚಿಮ ಬಂಗಾಳದ ಹಲ್ದಿಬಾರಿ ಮತ್ತು ಬಾಂಗ್ಲಾದೇಶದ ನಿಲ್ಫಮರಿ ಜಿಲ್ಲೆಯ ಚಿಲಾಹಟಿ ಪ್ರದೇಶಗಳ ನಡುವೆ ಅಂತರ್ ಗಡಿ ರೈಲು ಸಂಪರ್ಕ ಸೇವೆಯನ್ನು ಪುನರಾರಂಭಿಸುವ ಬಗ್ಗೆ ಭಾರತ ಮತ್ತು ಬಾಂಗ್ಲಾದೇಶ ನಿರ್ಧಾರ ತೆಗೆದುಕೊಂಡಿವೆ. ಸುಮಾರು 55 ವರ್ಷಗಳ ಬಳಿಕ ಇಲ್ಲಿ ರೈಲು ಸಂಚಾರ ನಡೆಯುತ್ತಿದೆ.
-
Bangladesh Bus Tragedy: ನದಿಗೆ ಉರಳಿದ 50 ಪ್ರಯಾಣಿಕರಿದ್ದ ಬಸ್, ಹಲವರು ಸಾವು; ಎದೆ ನಡುಗಿಸೋ ವಿಡಿಯೋ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications