ಭಾರತದ ಕಡಲಿನ ಗಡಿಯಲ್ಲಿ ಹೈ ಅಲರ್ಟ್ : ಲಷ್ಕರ್ ದಾಳಿ ಶಂಕೆ
ನವದೆಹಲಿ, ಅಕ್ಟೋಬರ್ 12: ಕಳೆದ ಮೂರು ತಿಂಗಳುಗಳಲ್ಲಿ ಎರಡನೇ ಬಾರಿಗೆ ಗುಪ್ತಚರ ಇಲಾಖೆಯಿಂದ ಮತ್ತೊಮ್ಮೆ ಉಗ್ರರ ದಾಳಿಯ ಬಗ್ಗೆ ಮುನ್ಸೂಚನೆ ಸಿಕ್ಕಿದೆ. ಭಾರತದ ಜಲಗಡಿಯಲ್ಲಿ ಈಗ ಹೈ ಅಲರ್ಟ್ ಘೋಷಿಸಲಾಗಿದೆ.
ಪಾಕಿಸ್ತಾನದ ಲಷ್ಕರ್ ಇ ತೋಯ್ಬಾ ಉಗ್ರರ ಕಣ್ಣು ಈಗ ಭಾರತದ ಜಲಗಡಿ ಮೇಲೆ ಬಿದ್ದಿದೆ. ತೈಲ ಟ್ಯಾಂಕರ್ಗಳು ಮತ್ತು ವಾಣಿಜ್ಯ ಹಡಗುಗಳನ್ನು ಹೈಜಾಕ್ ಮಾಡುವುದು, ಗಡಿಯೊಳಗೆ ನುಸುಳುವುದು ಭಾರತದ ಬಂದರುಗಳ ಮೇಲೆ ದಾಳಿ ನಡೆಸುವುದು ಮುಂತಾದ ಯೋಜನೆಯೊಂದಿಗೆ ಕಳೆದ ಕೆಲ ತಿಂಗಳುಗಳಿಂದ ಲಷ್ಕರ್ ಉಗ್ರರ ಗುಂಪೊಂದು ತರಬೇತಿ ಪಡೆಯುತ್ತಿರುವ ಆಘಾತಕಾರಿ ಸುದ್ದಿ ಸಿಕ್ಕಿದೆ.
ಅದರಲ್ಲೂ ಸಮುದ್ರದಲ್ಲಿ ವೇಗವಾಗಿ ಈಜುವುದು, ಆಳಸಮುದ್ರದಲ್ಲಿ ಡೈವಿಂಗ್ ಮಾಡುವುದನ್ನು ವಿಶೇಷವಾಗಿ ಕಲಿಯುತ್ತಿದ್ದಾರೆ. ಶೇಖ್ಪುರ, ಲಾಹೋರ್, ಫೈಸಲಾಬಾದ್ಗಳಲ್ಲಿ ಅವರಿಗೆ ತರಬೇತಿ ನೀಡಲಾಗುತ್ತಿದೆ.

ಜೈಷ್ ಎ ಮೊಹಮ್ಮದ್ ಉಗ್ರ ಸಂಘಟನೆ ಸಹ ಸಮುದ್ರದಲ್ಲಿ ದಾಳಿ ನಡೆಸಲು ಅಗತ್ಯವಿರುವ ನೆರವು ನೀಡಲು ಲಷ್ಕರ್ ಜೊತೆ ಕೈಜೋಡಿಸಿದೆ. ಭಯೋತ್ಪಾದಕ ಚಟುವಟಕೆಗಳ ಮೇಲೆ ನಿಗಾವಹಿಸಿರುವ ಗುಪ್ತಚರ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಭಾರತೀಯ ಗಡಿ ಭಾಗದ ಲೀಪಾ ಕಣಿವೆಯ ದುದ್ನಿಹಾಲ್, ಕೇಲ್ ಭಾಗದಲ್ಲಿ ಹೆಚ್ಚಿನ ನಿಗಾವಹಿಸಲಾಗಿದೆ. ನೌಕಾಪಡೆ ಮತ್ತು ಕರಾವಳಿ ರಕ್ಷಣ ಪಡೆ ಸಮುದ್ರದಲ್ಲಿ ಕಟ್ಟೆಚ್ಚರ ವಹಿಸಿವೆ. ಸುಮಾರು 7,517 ಕಿ.ಮೀ. ಉದ್ದದ ಕರಾವಳಿಯನ್ನು ರಕ್ಷಿಸಲು ಯೋಜನೆ ರೂಪಿಸಲಾಗಿದೆ.
2008ರ ನವೆಂಬರ್ 26ರಂದು ಉಗ್ರರು ಸಮುದ್ರ ಮಾರ್ಗದ ಮೂಲಕ ಮುಂಬೈಯನ್ನು ಪ್ರವೇಶಿಸಿ ವಿಧ್ವಂಸಕ ಕೃತ್ಯ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications