8,000 'ಎಕ್ಸ್ ಖಾತೆ'ಗಳ ನಿರ್ಬಂಧಕ್ಕೆ ಭಾರತ ಸರ್ಕಾರ ಆದೇಶ: India-Pakistan War
ನವದೆಹಲಿ, ಮೇ 09: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಬಳಿಕ ಭಾರತ-ಪಾಕಿಸ್ತಾನ ಯುದ್ಧ ನಡೆಯುತ್ತಿದೆ. ಇತ್ತ ಭಾರತ ಸರ್ಕಾರವು ಸಾಮಾಜಿಕ ಮಾಧ್ಯಮ ವೇದಿಕೆ X (ಹಿಂದೆ Twitter) ಭಾರತದಲ್ಲಿ 8,000 ಕ್ಕೂ ಹೆಚ್ಚು ಖಾತೆಗಳನ್ನು ನಿರ್ಬಂಧಿಸುವಂತೆ ಭಾರತ ಸರ್ಕಾರ ಆದೇಶ ಮಾಡಿದೆ. ಈ ಕುರಿತು ಕಂಪನಿ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರದ ಈ ನಿರ್ದೇಶನವನ್ನು ಪಾಲಿಸುತ್ತಿರುವುದಾಗಿ ಕಂಪನಿ ಹೇಳಿಕೊಂಡಿದೆ.
ಈ ಕುರಿತು ಎಕ್ಸ್ ಕಂಪನಿಯು ಗುರುವಾರ ಹೇಳಿಕೆ ಬಿಡುಗಡೆ ಮಾಡಿದೆ. ಸರ್ಕಾರದ ಆದೇಶಗಳಲ್ಲಿ ಪ್ರಮುಖ ಬಳಕೆದಾರರು ಮತ್ತು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳಿಗೆ ಸೇರಿದ ಖಾತೆಗಳನ್ನು ನಿರ್ಬಂಧಿಸುವುದು ಸೇರಿದಂತೆ ಸಾವಿರಾರು ಎಕ್ಸ್ ಖಾತೆಗಳಿಗನ್ನು ನಿರ್ಬಂಧಿಸುವಂತೆ ಕೋರಲಾಗಿದೆ. ಸಿಕ್ಕ ಸಿಕ್ಕ ಎಕ್ಸ್ ಖಾತೆಗಳನ್ನು ನಿರ್ಬಂಧಿಸುವಂತೆ ಹೇಳದೇ ನಿರ್ದಿಷ್ಟ ಖಾತೆಗಳ ವಿರುದ್ಧ ಭಾರತ ಸಮರ ಸಾರಿಗೆ. ಈ ಆದೇಶದ ಹಿಂದಿನ ತಾರ್ಕಿಕತೆಯನ್ನು ಒಪ್ಪಲು ಸಾಧ್ಯವಿಲ್ಲ. ಇದು ವಾಕ್ ಸ್ವಾತಂತ್ರ್ಯದ ವಿರುದ್ಧ ಎಂದು ಕಂಪನಿ ಹೇಳಿಕೊಂಡಿದೆ.

ಸದ್ಯ 8000 ಎಕ್ಸ್ ಖಾತೆಗಳ ಪ್ರವೇಶ ನಿರ್ಬಂಧಕ್ಕೆ ಕಂಪನಿಗೆ ಯಾವುದೇ ಪುರಾವೆಗಳು ಇಲ್ಲವೇ ತಕ್ಕ ಸಮರ್ಥನೆಗಳು ಲಭ್ಯವಾಗಿಲ್ಲ. ನಿಷೇಧಿಸಲು ಯಾವ ಪೋಸ್ಟ್ಗಳು ಭಾರತೀಯ ಕಾನೂನನ್ನು ಉಲ್ಲಂಘಿಸಿವೆ ಎಂದು ಕೇಂದ್ರ ಸರ್ಕಾರ ತನ್ನ ನಿರ್ದೇಶನದಲ್ಲಿ ಹೇಳಿಲ್ಲ. ಆದರೆ ಸದ್ಯಕ್ಕೆ ಇಷ್ಟು ಖಾತೆ ನಿರ್ಬಂಧಕ್ಕೆ ಕಂಪನಿ ಮುಂದಾಗಿದೆ ಎಂದು ತಿಳಿಸಿದೆ.
ಸರ್ಕಾರ ಆದೇಶ ಪಾಲಿಸಿದಿದ್ದರೇ ಮುಂದೇನು?
ಮುಂದಿನ ಕಾನೂನು ಪರಿಣಾಮಗಳ ಬಗ್ಗೆ ಕಂಪನಿಯು ಕಳವಳ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದ ಆದೇಶಗಳನ್ನು ಪಾಲಿಸಲು ವಿಫಲವಾದರೆ "ಕಂಪನಿಯ ಸ್ಥಳೀಯ ಉದ್ಯೋಗಿಗಳಿಗೆ ಗಮನಾರ್ಹ ದಂಡ ಮತ್ತು ಜೈಲು ಶಿಕ್ಷೆ ವಿಧಿಸುವ ಸಾಧ್ಯತೆಯು ಇದೆ. ಖಾತೆಗಳ ಸಂಪೂರ್ಣ ನಿಷೇಧ ಆಗುತ್ತಾ ಇಲ್ಲವೇ ಎಂಬುದು ಅನುಮಾನವಾಗಿದೆ. ಈ ಕ್ರಮವು ವಾಕ್ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ದುರ್ಬಲಗೊಳಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ. ಆದರೆ ಭಾರತ ಸರ್ಕಾರ ರಾಷ್ಟ್ರದ ಹಿತ ದೃಷ್ಟಿಯಿಂದ ಇಂಥದ್ದೊಂದು ಆದೇಶ ಮಾಡಿರುವುದು ಗೊತ್ತಾಗಿದೆ.
ಯಾವುದೇ ಭಿನ್ನಾಭಿಪ್ರಾಯ ಇದ್ದರೂ ಸಹಿತ ಭಾರತದಲ್ಲಿ ಎಕ್ಸ್ ಖಾತೆ ಪ್ರವೇಶಿಸುವಂತೆ ನೋಡಿಕೊಳ್ಳುವುದು ಆದ್ಯತೆ ಕರ್ತವ್ಯವಾಗಿದೆ. ಹೀಗಾಗಿ ಈ ಕೆಲಸ ಕಂಪನಿ ಮಾಡಲಿದೆ. ಭಾರತಿಯ ಮಾಹಿತಿ ತಿಳಿಯುವಂತೆ ಮಾಡವುದು ಅತ್ಯಗತ್ಯವಾಗಿದೆ. ಈ ಮೂಲಕ ಕಂಪನಿಯು ಸಾವಿರಾರು ಖಾತೆಗಳ ಪ್ರವೇಶ ಪೋಸ್ಟಗಳಿಗೆ ಅವಕಾಶ ನೀಡದಂತೆ ಮಾಡಲಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications