ಪಾಕ್ ವಿರುದ್ಧ ಕ್ರಿಕೆಟ್ ಆಡದಿರುವುದು ನಾವು ಶರಣಾಗುವುದಕ್ಕಿಂತಲೂ ಕೀಳು: ತರೂರ್
ನವದೆಹಲಿ, ಫೆಬ್ರವರಿ 22: ಪುಲ್ವಾಮಾ ದಾಳಿಗೆ ಪಾಕಿಸ್ತಾನವೇ ಹೊಣೆಯಾಗಿರುವುದರಿಂದ ಮುಂಬರುವ ವಿಶ್ವಕಪ್ ಕ್ರಿಕೆಟ್ನಲ್ಲಿ ಅದರೊಂದಿಗೆ ಪಂದ್ಯ ಆಡಬಾರದು ಎಂಬ ಒತ್ತಾಯಗಳು ಕೇಳಿಬರುತ್ತಿವೆ.
ಭಾರತೀಯ ಕ್ರಿಕೆಟ್ ಮಂಡಳಿ ಸಹ ಪಾಕಿಸ್ತಾನದೊಂದಿಗೆ ಮುಖಾಮುಖಿಯಾಗದಂತೆ ವೇಳಾಪಟ್ಟಿ ಬದಲಿಸಲು ಒತ್ತಡ ಹೇರುವ ಪ್ರಯತ್ನ ನಡೆಸಿದೆ. ಆದರೆ ಸಂಸದ ಶಶಿ ತರೂರ್ ಉಭಯ ತಂಡಗಳ ನಡುವೆ ವಿಶ್ವಕಪ್ ಕ್ರಿಕೆಟ್ ಪಂದ್ಯ ನಡೆಯಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅದಕ್ಕೆ ಅವರು ಸಮರ್ಥನೀಯ ಕಾರಣವನ್ನೂ ನೀಡಿದ್ದಾರೆ.
ಪಾಕ್ ಕ್ರೀಡಾಪಟುಗಳಿಗೆ ವೀಸಾ ನಕಾರ: ಭಾರತಕ್ಕೆ ಎಚ್ಚರಿಕೆ ನೀಡಿದ ಒಲಿಂಪಿಕ್
'1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತವು ಪಾಕಿಸ್ತಾನದ ವಿರುದ್ಧ ವಿಶ್ವಕಪ್ನಲ್ಲಿ ಆಡಿತ್ತು. ಮತ್ತು ಪಂದ್ಯವನ್ನು ಕೂಡ ಗೆದ್ದುಕೊಂಡಿತ್ತು. ಈ ಬಾರಿಯ ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವುದು ಕೇವಲ ಎರಡು ಅಂಕಗಳನ್ನು ಕಳೆದುಕೊಳ್ಳುವ ವಿಚಾರವಾಗಲಾರದು. ಅದು ಶರಣಾಗತಿಯಾಗುವುದಕ್ಕಿಂತಲೂ ಹೀನಾಯವಾದದ್ದು. ಇದೊಂದು ರೀತಿ ನಾವು ಹೋರಾಟ ಮಾಡದೆಯೇ ಸೋತಂತೆ' ಎಂದು ತರೂರ್ ಹೇಳಿದ್ದಾರೆ.
#WATCH Shashi Tharoor says, "In '1999 Kargil War, India played Pakistan in the cricket World Cup, & won. To forfeit the match this year would not just cost two points: it would be worse than a surrender, since it would be defeat without a fight." pic.twitter.com/yRIExUVJ4c
— ANI (@ANI) 22 February 2019
ನಾವು ಕ್ರಿಕೆಟ್ಅನ್ನು ಬೇರೆ ಕ್ರಮಗಳಿಗೆ ಪರ್ಯಾಯವಾಗಿ ಬಳಸಿಕೊಳ್ಳಬಾರದು. ಸರ್ಕಾರ ಅದಕ್ಕೆ ಬದಲಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಪ್ರದರ್ಶಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.