ಅಗಲಿದ ನಕ್ಷತ್ರ ಸ್ಟೀಫನ್ ಹಾಕಿಂಗ್ ಗೆ ಕಂಬನಿ ಮಿಡಿದ ಗಣ್ಯರು
ನವದೆಹಲಿ, ಮಾರ್ಚ್ 14: ವಿಜ್ಞಾನ ಕ್ಷೇತ್ರದ ದೈತ್ಯ ಪ್ರತಿಭೆ ಸ್ಟೀಫನ್ ಹಾಕಿಂಗ್ ನಿಧನರಾದ ಸುದ್ದಿ ಕೇಳಿ ವಿಶ್ವದ ಗಣ್ಯಾತಿ ಗಣ್ಯರು ಕಂಬನಿ ಮಿಡಿದಿದ್ದಾರೆ. ದೈಹಿಕ ನ್ಯೂನತೆಯನ್ನೆಲ್ಲ ಮೀರಿ ಮನೋಬಲದಿಂದ ಬದುಕುಳಿದ ಸ್ಟೀಫನ್ ಹಾಕಿಂಗ್ ಭೌತಶಾಸ್ತ್ರ ವಿಜ್ಞಾನಿಯಾಗಿ ಹತ್ತು, ಹಲವು ಸಂಶೋಧನೆಗಳನ್ನು ಮಾಡಿದವರು.
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
1963 ರಲ್ಲೇ ಅಮಿಯೊಟ್ರೋಫಿಕ್ ಲ್ಯಾಟರಲ್ ಸ್ಕ್ಲೆರಾಸಿಸ್ (ಅಥವಾ ALS)ಎಂಬ ನರಸಂಬಂಧೀ ಕಾಯಿಲೆ ತುತ್ತಾಗಿ, ಬದುಕುಳಿಯುವುದೇ ಅನುಮಾನ ಎಂದುಕೊಂಡಿದ್ದ ಹಾಕಿಂಗ್ ಗೆ ಮಾತನಾಡುವುದಕ್ಕೂ ಆಗುತ್ತಿರಲಿಲ್ಲ. ಧ್ವನಿ ಸಂವೇದನಾ ಯಂತ್ರದ ಮೂಲಕವೇ ಸಂವಹನ ನಡೆಸುತ್ತಿದ್ದ ಅವರು 76 ವರ್ಷಗಳ ಕಾಲ ಬದುಕಿ, 40 ವರ್ಷಗಳ ಕಾಲ ವಿಜ್ಞಾನ ಕ್ಷೇತ್ರಕ್ಕೆ ಅನಂತ ಕೊಡುಗೆ ನೀಡಿದ್ದಾರೆ.
ಅವರ ಅಗಲಿಕೆಗೆ ದೇಶದ ನಾನಾ ಗಣ್ಯರು ಕಂಬನಿ ಮಿಡಿದಿದ್ದಾರೆ. ವಿಜ್ಞಾನ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿ, ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
|
ರಾಮನಾಥ್ ಕೋವಿಂದ್
"ಸ್ಟೀಫನ್ ಹಾಕಿಂಗ್ ಅವರ ನಿಧನದ ಸುದ್ದಿ ಕೇಳಿ ಬೆಸರವಾಯಿತು. ಅವರ ಅಪ್ರತಿಮ ಬುದ್ಧಿಮತ್ತೆ ಈ ವಿಶ್ವ, ಮತ್ತು ಬ್ರಹ್ಮಾಂಡದ ಬಗೆಗಿನ ನಮ್ಮ ಕುತೂಹಲವನ್ನು ಕೊಂಚ ತಣ್ಣಗಾಗಿಸಿದೆ. ಅವರ ಧೈರ್ಯ ಮತ್ತು ಸ್ಥಿತಿಸ್ಥಾಪಕತ್ವ ಹಲವು ಪೀಳಿಗೆಗಳಿಗೆ ಆದರ್ಶವಾಗಿ ಉಳಿಯುತ್ತದೆ" ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
|
ನರೇಂದ್ರ ಮೋದಿ
"ಪ್ರೊ. ಸ್ಟೀಫನ್ ಹಾಕಿಂಗ್ ಒಬ್ಬ ಅತ್ಯುತ್ತಮ ವಿಜ್ಞಾನಿ. ಅವರ ಸ್ಥಿರತೆ, ಪ್ರತಿಭೆ ಈ ಜಗತ್ತಿಗೆ ಸ್ಫೂರ್ತಿಯಾಗಿ ಉಳಿಯುತ್ತದೆ. ಅವರ ಅಗಲಿಕೆ ತುಂಬಲಾರದ ನಷ್ಟ. ಅವರ ಅಮೋಘ ಕೆಲಸಗಳು ಈ ಜಗತ್ತನ್ನು ಸುಂದರವಾಗಿಸಿವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
|
ಡಾ. ಜಿ. ಪರಮೇಶ್ವರ್
"ನನ್ನ ಗುರಿ ಸರಳ. ಈ ಬ್ರಹ್ಮಾಂಡವನ್ನು ಸಂಪೂರ್ಣ ಅರ್ಥ ಮಾಡಿಕೊಳ್ಳುವುದು. ಅದು ಯಾಕೆ ಹೀಗಿದೆ ಮತ್ತು ಅದು ಯಾಕೆ ಅಸ್ತಿತ್ವದಲ್ಲಿದೆ ಎಂಬುದನ್ನು ತಿಳಿದುಕೊಳ್ಳುವುದು" ಎಂದಿದ್ದ ಸ್ಟೀಫನ್ ಹಾಕಿಂಗ್ ಇನ್ನಿಲ್ಲ ಎಂಬ ಸುದ್ದಿ ಕೇಳಿ ನೋವಾಯಿತು ನಕ್ಷತ್ರದಂಥ ವಿಜ್ಞಾನಿಗೆ ನನ್ನ ಸಂತಾಪಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಟ್ವೀಟ್ ಮಾಡಿದ್ದಾರೆ.
|
ಬಿ ಎಸ್ ಯಡಿಯೂರಪ್ಪ
"ಮೌನವಾಗಿರುವ ಜನರ ಮೆದುಳು ಚುರುಕಾಗಿ ಕೆಲಸ ಮಾಡುತ್ತದೆ! ವಿಶ್ವಪ್ರಸಿದ್ಧ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರ ನಿಧನದ ಸುದ್ದಿ ಕೇಳಿ ತೀವ್ರ ನೋವಾಯಿತು. ವಿಶ್ವದ ನಿಗೂಢತೆ, ಖಗೋಳ, ಕಪ್ಪು ರಂಧ್ರಗಳ ಬಗ್ಗೆ ಸಾಕಷ್ಟು ಸಂಶೋದನೆ ಮಾಡಿದ ಅವರ ಬದುಕು ಒಂದು ದಂತಕಥೆ. ಅವರ ಪರಂಪರೆ ಎಂದಿಗೂ ಜೀವಂತವಾಗಿರುತ್ತದೆ. ಅವರಿಗೆ ನನ್ನ ಶ್ರದ್ಧಾಂಜಲಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
|
ಸದ್ಗುರು
"ದೈನಿಕ ನ್ಯೂನತೆಗಳು ಯಶಸ್ಸಿನ ಅಡ್ಡಿಗಳಲ್ಲ, ಅವು ಯಶಸ್ಸಿಗೆ ಮೈಲಿಗಲ್ಲುಗಳು ಎಂಬುದನ್ನು ಸಾಬೀತುಪಡಿಸಿದ ಸ್ಟಿಫನ್ ಹಾಕಿಂಗ್ ಇನ್ನಿಲ್ಲ. ಅವರ ಪರಂಪರೆ ಮತ್ತು ಕೆಲಸಗಳು ಶತಮಾನಗಳಿಗೂ ಹೆಚ್ಚು ಕಾಲ ನೆನಪಿನಲ್ಲುಳಿಯುತ್ತದೆ. ಇದು ಒಂದು ಯುಗದ ಅಂತ್ಯ" ಎಂದು ಅಧಾತ್ಮ ಗುರು, ದಿಶಾ ಸಂಸ್ಥೆಯ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ ಟ್ವೀಟ್ ಮಾಡಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications