ಪಾಕ್ ನಲ್ಲಿ ನಡೆಯುವ SAARC ಸಮ್ಮೇಳನಕ್ಕೆ ಪ್ರಧಾನಿ ಮೋದಿಗೆ ಆಹ್ವಾನ
ಭಾರತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನವು SAARC (ಸೌತ್ ಏಷ್ಯನ್ ಅಸೋಸಿಯೇಷನ್ ಫಾರ್ ರೀಜಿನಲ್ ಕೋ ಆಪರೇಷನ್) ಸಮ್ಮೇಳನಕ್ಕೆ ಆಹ್ವಾನ ಮಾಡಲಿದೆ ಎಂದು ಅಲ್ಲಿನ ದಿನ ಪತ್ರಿಕೆ 'ಡಾನ್' ವರದಿ ಮಾಡಿದೆ. ವಿದೇಶಾಂಗ ಕಚೇರಿ ವಕ್ತಾರರ ಹೇಳಿಕೆ ಆಧರಿಸಿ ಈ ವರದಿ ಮಾಡಲಾಗಿದೆ.
"ಗಡಿಯಾಚೆಗಿನ ಭಯೋತ್ಪಾದನಾ ದಾಳಿ" ಕಾರಣಕ್ಕೆ 2016ರಲ್ಲಿ ಪಾಕಿಸ್ತಾನದ ಸಾರ್ಕ್ ಸಮ್ಮೇಳನವನ್ನು ಭಾರತ ಬಹಿಷ್ಕರಿಸಿತ್ತು. ಆ ನಂತರ ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್ ಕೂಡ ಆ ಸಮ್ಮೇಳನದಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದವು. ಎಂಟು ರಾಷ್ಟ್ರಗಳ ಪೈಕಿ ಯಾವುದೇ ಒಂದು ದೇಶ ಹಿಂದಕ್ಕೆ ಸರಿದರೆ ಸಾರ್ಕ್ ಸಮ್ಮೇಳನ ಸಾಧ್ಯವಿಲ್ಲ. ಕೊನೆಗೆ ಆ ಸಲ ಸಮ್ಮೇಳನವೇ ರದ್ದಾಗಿತ್ತು.
ಜಮ್ಮು-ಕಾಶ್ಮೀರದ ಉರಿಯಲ್ಲಿ ಸೇನಾ ಕ್ಯಾಂಪ್ ಮೇಲೆ ನಾಲ್ವರು ಉಗ್ರರು ನಡೆಸಿದ ಉಗ್ರರ ದಾಳಿ ಹಾಗೂ ಹದಿನೆಂಟು ಮಂದಿಯ ಹತ್ಯೆಯನ್ನು ಖಂಡಿಸಿ, ಸಮ್ಮೇಳನದಿಂದ ಹಿಂದಕ್ಕೆ ಸರಿದಿತ್ತು. ಜಾಗತಿಕ ವೇದಿಕೆಯಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿ ಮಾಡುವ ಅಭಿಯಾನಕ್ಕೆ ಚಾಲನೆ ನೀಡುವ ಸಲುವಾಗಿ ಈ ನಿರ್ಧಾರ ಮಾಡಲಾಗಿತ್ತು.

ಪಂಜಾಬ್ ನ ಅಮೃತ್ ಸರ್ ನಲ್ಲಿ ಪ್ರಾರ್ಥನಾ ಮಂದಿರದ ಮೇಲೆ ದಾಳಿ ನಡೆದು, ಮೂವರು ಮೃತಪಟ್ಟ ಕೆಲ ದಿನಗಳಿಗೆ ಈ ವರ್ಷದ ಸಮ್ಮೇಳನದ ಬಗ್ಗೆ ಮಾತು ಬಂದಿದೆ. ಈ ದಾಳಿಯ ಕಾರಣಕ್ಕೆ ಪಂಜಾಬ್ ನ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಕರ್ತರ್ ಪುರ್ ಕಾರಿಡಾರ್ ಯೋಜನೆಯ ಶಂಕುಸ್ಥಾಪನೆಗೆ ತೆರಳುವುದಿಲ್ಲ ಎಂದು ಹೇಳಿದ್ದಾರೆ.
ಐದು ರಾಜ್ಯಗಳ ಚುನಾವಣೆಯಲ್ಲಿ ಪಕ್ಷದ ಕೆಲಸ ಇರುವ ಕಾರಣ ಕಾರಣಕ್ಕೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪಾಲ್ಗೊಳ್ಳುವುದಿಲ್ಲ. ಹರ್ ಸಿಮ್ರತ್ ಕೌರ್ ಹಾಗೂ ಹರ್ ದೀಪ್ ಸಿಂಗ್ ಪುರಿ ಭಾರತವನ್ನು ಪ್ರತಿನಿಧಿಸಿ ಪಾಕಿಸ್ತಾನದಲ್ಲಿ ನಡೆಯುವ ಕಾರಿಡಾರ್ ಶಂಕುಸ್ಥಾಪನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications