Rain Alert: ಚಂಡಮಾರುತ ಪ್ರಸರಣ ತೀವ್ರ: ಸೆಪ್ಟಂಬರ್ 17ರವರೆಗೆ ಈ ಭಾಗಗಳಲ್ಲಿ ರಣಮಳೆ ಎಚ್ಚರಿಕೆ
IMD Cyclone Alert: ದೇಶದ ವಿವಿಧೆಡೆ ಮುಂಗಾರು ಮಳೆ ಪಸರಿಸುತ್ತಿದೆ. ಕರ್ನಾಟಕದಲ್ಲೂ ಸಹ ಮತ್ತೆ ಚುರುಕಾಗಿರುವ ಮಳೆರಾಯ ಭಾರತದ ಈಶಾನ್ಯ, ವಾಯುವ್ಯ ಹಾಗೂ ಮಧ್ಯ ಭಾಗದ ಅನೇಕ ರಾಜ್ಯಗಳಲ್ಲಿ ತೀವ್ರಗೊಂಡಿದೆ. ಹಲವಾರು ಭಾಗಗಳಲ್ಲಿ ವರುಣಾರ್ಭಟ ಮುಂದುವರಿದ ಪರಿಣಾಮ ಈಗಾಗಲೇ ಪ್ರವಾಹ ಎದುರಿಸಿದ್ದ ರಾಜ್ಯಗಳ ಜನರಲ್ಲಿ ಆತಂಕ ಮನೆ ಮಾಡಿದೆ.
ಈ ವಾರಾಂತ್ಯದ ಹೊತ್ತಿಗೆ ಪಾಕಿಸ್ತಾನ ಕರಾವಳಿ ಭಾಗ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಕಡಿಮೆ ಒತ್ತಡದ ಪ್ರಭಾವವು ತೀವ್ರಗೊಳ್ಳಲಿದೆ. ಮುಂದಿನ ಒಂದು ದಿನದಲ್ಲಿ ಇದರ ತೀವ್ರತೆ, ಸಂಚಾರದ ದಿಕ್ಕು ಮತ್ತಷ್ಟು ಖಚಿತಗೊಳ್ಳಲಿದೆ. ಮುಂಗಾರು ಸ್ಟ್ರಫ್ ಬಂಗಾಳಕೊಲ್ಲಿ, ಲಕ್ನೋ, ಗಂಗಾನಗರ ಭಾಗಗಳಲ್ಲಿ ಮುಂದುವರಿದಿದೆ. ಬಿರುಗಾಳಿಯ ವೇಗ ಹೆಚ್ಚಾಗಿದೆ.

ಸೆಪ್ಟಂಬರ್ 17ರವರೆಗೆ ಭಾರೀ ಮಳೆ
ಇತ್ತ ಒಡಿಶಾ ಹಾಗೂ ಆಂಧ್ರ ಪ್ರದೇಶ ಕರಾವಳಿ ಭಾಗದಲ್ಲಿ ಸಮುದ್ರ ಮೇಲ್ಮೈನಲ್ಲಿ ಚಂಡಮಾರುತ ಪ್ರಸರಣ ಉಂಟಾಗಿದೆ. ಇದು ಸಮುದ್ರ ಮಟ್ಟದಿಂದ 4.5 ಕಿಲೋ ಮೀಟರ್ ಎತ್ತರದಲ್ಲಿದೆ. ಮತ್ತೊಂದು ಚಂಡಮಾರುತ ಪ್ರಸರಣವು ಸಿಕ್ಕಿಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಂಡು ಬಂದಿದೆ. ಅದು ಸಮುದ್ರ ಮಟ್ಟದಿಂದ 3.1 ಕಿಲೋ ಮೀಟರ್ ಎತ್ತರದಲ್ಲಿದೆ. ತಮಿಳುನಾಡ ಹಾಗೂ ಕರ್ನಾಟಕ ಕರಾವಳಿ ಭಾಗಕ್ಕೆ ಹೊಂದಿಕೊಂಡಂತೆ ಸಮುದ್ರದಲ್ಲಿ ವೈಪರೀತ್ಯ ಉಂಟಾಗಿದ್ದು, ಇದು 1.5ಕಿಲೋ ಮೀಟರ್ ಎತ್ತರದಲ್ಲಿದೆ. ಇದರ ಪ್ರಭಾವದಿಂದಾಗಿ ವಿವಿಧ ರಾಜ್ಯಗಳಲ್ಲಿ ಮುಂದಿನ 05 ಭಾರೀ ಹಾಗೂ ಅತ್ಯಧಿಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 11-17ರ ಅವಧಿಯಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಸೆಪ್ಟಂಬರ್ 14ರ ಅವಧಿಯಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಧಾರಾಕಾರ ಮಳೆ ನಿರೀಕ್ಷೆ ಇದೆ. ಛತ್ತೀಸ್ಗಢ, ಬಿಹಾರ, ಉಪ-ಹಿಮಾಲಯ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳ ಹಲವೆಡೆ ಸಾಧಾರಣದಿಂದ ಭಾರೀ ಮಳೆ ಆಗಲಿದೆ. ಉಳಿದ ಕೆಲವೆಡೆ ಸಾಧಾರಣದಿಂದ ಉತ್ತಮ ಮಳೆ ನಿರೀಕ್ಷೆ ಇದೆ ಎಂದು ಗುರುವಾರದ ಹವಾಮಾನ ವರದಿ ಮಾಹಿತಿ ನೀಡಿದೆ.
ಇಂದಿನಿಂದ ಸೆಪ್ಟಂಬರ್ 17 ರವರೆಗೆ ಪೂರ್ವ ಉತ್ತರ ಪ್ರದೇಶದ ಹಲವೆಡೆ ಭಾರಿ ಮಳೆ ಆಗಲಿದೆ. ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಶನಿವಾರ, ಭಾನುವಾರ ಬಿರುಸಿನ ಮಳೆ ಆಗಲಿದೆ. ಪಶ್ಚಿಮ ಭಾರತದ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾ, ಗುಜರಾತ್ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 14 ರಿಂದ 17 ರವರೆಗೆ ಜೋರು ಮಳೆ ಸುರಿಯಲಿದೆ. ಕರ್ನಾಟಕದಲ್ಲಿ ಸೆಪ್ಟಂಬರ್ 15ರವರೆಗೆ ಅಲ್ಲಲ್ಲಿ ಭಾರೀ ಮಳೆ ನಿರೀಕ್ಷೆ ಇದೆ.
-
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications