MPox: ಭಾರತದ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢ: ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿದ WHO
ನವದೆಹಲಿ, ಸೆಪ್ಟಂಬರ್ 23: ಮಂಕಿಫಾಕ್ಸ್ ವೇಗವಾಗಿ ಹರಡಬಹುದಾಗಿ ಒಂದು ವೈರಸ್ ಆಗಿದೆ. ಒಂದು ವಾರದ ಹಿಂದಷ್ಟೇ ಕೇರಳದ ವ್ಯಕ್ತಿಯೊಬ್ಬರಿಗೆ ಈ ಸೋಂಕು ಇರುವುದು ದೃಢವಾಗಿತ್ತು. ಈ ಮೂಲಕ ಭಾರತವು ಮೊದಲ ಮಂಕಿಫಾಕ್ಸ್ ವೈರಲ್ ಇರುವುದು ಖಚಿತವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದು ಈಗ ವಿಶ್ವ ಆರೋಗ್ಯ ಸಂಸ್ಥೆ (WHO)ಯು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಲು ಕಾರಣವಾಗಿದೆ ಎಂದು ಅಧಿಕೃತ ಮಾಹಿತಿ ಲಭ್ಯವಾಗಿದೆ.
ಇತ್ತೀಚೆಗೆ ಕೇರಳದ ಮಲ್ಲಪ್ಪುರಂ ನಿವಾಸಿ 38 ವರ್ಷ ವ್ಯಕ್ತಿಯು ಯುನೈಟೆಡ್ ಅರಬ್ ಎಮಿರೇಟ್ಸ್ನಿಂದ ದೇಶಕ್ಕೆ ಮರಳಿದ್ದರು. ಅವರ ಆರೋಗ್ಯ ತಪಾಸಣೆ ಮಾಡಿದಾಗ ಅವರಿಗೆ ಕ್ಲಾಡ್ 1 ಬಿ ಸ್ಟ್ರೈನ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಸದ್ಯ ರೋಗಿಯ ಆರೋಗ್ಯವು ಸ್ಥಿರವಾಗಿದೆ. ಈ ಪ್ರಕರಣವು ಎರಡನೇ ಭಾರಿಗೆ ಡಬ್ಲುಎಚ್ಓ ತುರ್ತು ಪರಿಸ್ಥಿತಿ ಘೋಷಣೆಗೆ ಕಾರಣವಾಗಿದೆ.

ಒಂದು ತಿಂಗಳ ಹಿಂದಷ್ಟ ದೇಶದ ರಾಜಧಾನಿ ನವದೆಹಲಿಯಲ್ಲಿ ಮಂಕಿಪಾಕ್ಸ್ ಆತಂಕ ಎದುರಾಗಿತ್ತು. ಆಗ ಹರಿಯಾಣದ ಹಿಸಾರ್ ಮೂಲಕದ 26 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು ದೃಢಪಟ್ಟಿತ್ತು. ಈ ವ್ಯಕ್ತಿ ಆಫ್ರಿಕಾದಿಂದ ಮರಳಿದ್ದರಿಂದ ಪರೀಕ್ಷೆ ನಡೆಸಲಾಗಿತ್ತು.
ವಿಶ್ವ ಆರೋಗ್ಯ ಸಂಸ್ಥೆಯು (WHO) 2022 ರಲ್ಲಿಯೇ ಮಂಕಿಫಾಕ್ಸ್ (MPox) ಅನ್ನು ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿಯ ಅಂತಾರಾಷ್ಟ್ರೀಯ ಕಾಳಜಿ ವಹಿಸಲು ಘೋಷಣೆ ಮಾಡಿತ್ತು. ಅದಾದ ಬಳಿಕ ಈವರೆಗೆ ಭಾರತದಲ್ಲಿ ಬರೋಬ್ಬರಿ 30 ಮಂಕಿಫಾಕ್ಸ್ ಪಾಸಿಟಿವ್ ಪ್ರಕರಣಗಳು ವರದಿ ಆಗಿವೆ.
ವಿಶ್ವ ಆರೋಗ್ಯ ಸಂಸ್ಥೆ (WHO) ಮಟ್ಟದಲ್ಲಿ ನೋಡುವುದಾದರೆ ಸಾರ್ವಜನಿಕ ತುರ್ತು ಪರಿಸ್ಥಿತಿ ಇದೊಂದು ಮಹತ್ವ ಎಚ್ಚರಿಕೆ ಎನ್ನಬಹುದು. ಆಗಸ್ಟ್ನಲ್ಲಿ ವಿಶ್ವಸಂಸ್ಥೆ ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ, ಕಾಳಜಿಯಲ್ಲಿ ಘೋಷಿಸಿತ್ತು. ಇದಾಗಿ ಮಂಕಿಪಾಕ್ಸ್ ಎರಡನೇ ಬಾರಿಗೆ ಪತ್ತೆಯಾದ ಬಳಿಕ ಇದೀಗ ಮತ್ತೊಮ್ಮೆ ಆರೋಗ್ಯ ಕಾಳಜಿಗೆ ಅಂತಾರಾಷ್ಟ್ರಮಟ್ಟದಲ್ಲಿ ಸೂಚನೆ ನೀಡಿದೆ. ಇ ಹಿಂದೆ ಜುಲೈ 2022ರಲ್ಲಿ ಮತ್ತು 2023ರ ಮಧ್ಯೆ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು.
Mpox ಅನ್ನು ಹಿಂದೆ ಮಂಕಿಪಾಕ್ಸ್ ಅಂತಲೂ ಕರೆಯಲಾಗುತ್ತದೆ. ಈ ಸೋಂಕು ತಗುಲಿದ ವ್ಯಕ್ತಗಳಿಗೆ ನಿರಂತರ ಜ್ವರ, ತಲೆನೋವು, ಸ್ನಾಯು ನೋವು, ಬೆನ್ನು ನೋವು, ರೋಗನಿರೋಧಕ ಶಕ್ತಿ ಕುಂದುವುದು ಕಂಡು ಬರುತ್ತದೆ. ಈ ಬಗ್ಗೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications