ಸಂದೀಪ್ ಉನ್ನಿಕೃಷ್ಣನ್ ಸ್ಮರಣೆ ಪ್ರತಿದಿನದ ಕೆಲಸವಾಗಲಿ
ಬೆಂಗಳೂರು, ಮಾ. 15: ಮೇಜರ್ ಸಂದೀಪ್ ಉನ್ನಿಕೃಷ್ಣನ್, ಈ ಹೆಸರು ಕೇಳಿದರೆ ಮೈ ರೋಮಾಂಚನವಾಗುತ್ತದೆ. ಮುಂಬೈ ದಾಳಿಯಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಉನ್ನಿಕೃಷ್ಣನ್ ಬದುಕಿದ್ದರೆ ಇಂದು 38 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು.
ಸಂದೀಪ್ ಪ್ರಾಣತ್ಯಾಗ ಮಾಡಿ ಆರು ವರ್ಷಗಳೇ ಆಗಿವೆ. ಸಂದೀಪ್ ಎನ್ಎಸ್ಜಿ ಕಮಾಂಡೊ, ಮೇಜರ್ ಆಗಿ ಮುಂಬಯಿ ದಾಳಿಯಲ್ಲಿ ಉಗ್ರರೊಂದಿಗೆ ಸೆಣಸಾಡಿ ದೇಶಕ್ಕಾಗಿ ಮಡಿದರು. ಸಾಮಾಜಿಕ ಜಾಲತಾಣಗಳಲ್ಲೂ ಸಂದೀಪ್ ಸ್ಮರಣೆ ಮಾಡಿಕೊಳ್ಳಲಾಗಿದೆ.

ಸಂದೀಪ್ ಅಪ್ಪ ನಿವೃತ್ತ ಇಸ್ರೋ ಅಧಿಕಾರಿ ಉನ್ನಿಕೃಷ್ಣನ್ ಹಾಗೂ ತಾಯಿ ಧನಲಕ್ಷ್ಮಿ ಅವರು ' ನಮಗೆ ಮಗನನ್ನು ಕಳೆದುಕೊಂಡ ದುಃಖಕ್ಕಿಂತ ವೀರಪುತ್ರನನ್ನು ನಾಡಿಗೆ ನೀಡಿದ ಹೆಮ್ಮೆಯಿದೆ ಎಂದು ಹೇಳಿದ್ದರು, ಇಂದಿಗೂ ಅದೇ ಮಾತನ್ನು ಪುನರುಚ್ಚಾರ ಮಾಡುತ್ತಾರೆ. ಆತನ ಸಾವಿನ ನಂತರ ಯಾವುದೇ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ನಮಗೆ ಆಸಕ್ತಿಯಿಲ್ಲ. ಆತನ ನೆನೆಪೇ ನಮ್ಮ ಮುಂದಿನ ಜೀವನದ ಸಂಗಾತಿ ಎಂದು ಹೇಳುವಾಗ ಯಾವ ತಾಯಿಗೂ ಸಂದೀಪ್ ನಂಥ ಮಗ ಬೇಕು ಎಂದೆನಿಸದೆ ಇರಲಾರದು.
ಕೋಲ್ಕತ್ತಾದಲ್ಲಿ 1977 ಮಾರ್ಚ್ 15 ರಂದು ಜನಿಸಿದ ಸಂದೀಪ್ ಬೆಂಗಳೂರಿನ ಹೆಬ್ಬಾಳ ಸೇನಾ ಕೇಂದ್ರದಲ್ಲಿ ತರಬೇತಿ ಪಡೆದಿದ್ದರು. 31 ನೇ ವಯಸ್ಸಿನಲ್ಲಿ ಪ್ರಾಣ ತ್ಯಾಗ ಮಾಡಿದ ಸಂದೀಪ್ 9 ವರ್ಷಗಳ ಕಾಲ ಭಾರತದ ಸೇನೆಯ ಭಾಗವಾಗಿ ದುಡಿದಿದ್ದರು. ಅವರ ಸೇವೆಗೆ ಅಶೋಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಮುಂಬೈ ದಾಳಿಯಲ್ಲಿ ಬಲಿಯಾಗಬೇಕಿದ್ದ ಅದೆಷ್ಟೋ ಜನರ ಪ್ರಾಣ ಕಾಪಾಡಿದ ಸಂದೀಪ್ 28 ನವೆಂಬರ್ 2008 ರಂದು ಹುತಾತ್ಮರಾದರು. ಉಗ್ರಗಾಮಿಗಳ ದಾಳಿಗೆ ಎದೆಯೊಡ್ಡಿದ ಸಂದೀಪ್ ಉನ್ನಿಕೃಷ್ಣನ್ ಸ್ಮರಣೆ ಪ್ರತಿದಿನ ಮಾಡಿಕೊಳ್ಳಲೇಬೇಕು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications