25 ನಿಮಿಷ, 9 ಉಗ್ರರ ಶಿಬಿರ, 70 ಹತ್ಯೆ, 60 ಮಂದಿಗೆ ಗಂಭೀರ ಗಾಯ: ಭಾರತ ಸುರಿದ ಬೆಂಕಿಗೆ ಪಾಕಿಸ್ತಾನ ತತ್ತರ, ಮಾಹಿತಿ ಇಲ್ಲಿದೆ!
Indian Army attack on Pakistan: ಬುಧವಾರ ಬೆಳಗಿನ ಜಾವ ಭಾರತವು ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ನಡೆಸಿದೆ. ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ನಡೆಸಲಾದ ಈ ದಾಳಿಗೆ 'ಆಪರೇಷನ್ ಸಿಂಧೂರ' ಎಂದು ಹೆಸರಿಡಲಾಗಿದೆ. ಕಳೆದ ಏಪ್ರಿಲ್ 22 ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಮೂವರು ಉಗ್ರರು 25 ಭಾರತೀಯರ ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರವನ್ನು ಕೈಗೊಂಡಿದೆ.
ಮುಜಾಫರಾಬಾದ್, ಬವಾಲ್ಪುರ, ಮುರಿದ್ಕೆ ಮತ್ತು ಅಹ್ಮದ್ಪುರ ಸೇರಿದಂತೆ ಪಟ್ಟು ಒಂಬತ್ತು ಸ್ಥಳಗಳಲ್ಲಿ ಆಪರೇಷನ್ ಸಿಂಧೂರವನ್ನು ಕೈಗೊಳ್ಳಲಾಗಿದೆ. ಈ ಜಾಗಗಳಲ್ಲಿ ಉಗ್ರ ಸಂಘಟನೆಗಳು ಬೀಡು ಬಿಟ್ಟಿದ್ದವು ಎಂದು ತಿಳಿದುಬಂದಿದೆ. ಆಪರೇಷನ್ ಸಿಂಧೂರವನ್ನು ಕೈಗೊಳ್ಳುವ ಮೂಲಕ ಭಾರತೀಯ ಸೇನೆಯು ಲಷ್ಕರ್-ಎ-ತೊಯ್ಬಾ, ಜೈಷ್-ಎ-ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗಳು ನಡೆಸುತ್ತಿದ್ದ ಶಿಬಿರಗಳನ್ನು ಎಂಬ ಮಾಹಿತಿ ಲಭ್ಯವಾಗಿದೆ.

ದಾಳಿ ಕುರಿತು ಮಾತನಾಡಿರುವ ಭಾರತ ಸೇನೆಯು, ಯಾವುದೇ ನಾಗರಿಕರು ಹಾಗೂ ಪಾಕಿಸ್ತಾನದ ಮಿಲಿಟಿರಿಯನ್ನು ಗುರಿಯಾಗಿಸಿ ದಾಳಿ ಮಾಡಲಾಗಿಲ್ಲ. ಉಗ್ರರ ಶಿಬಿರಗಳನ್ನು ಗುರಿಯಾಗಿಸಿ ನಿಖರವಾಗಿ ದಾಳಿ ನಡೆಸಲಾಗಿದೆ ಎಂದು ಹೇಳಿಕೆ ನೀಡಿದೆ. ಭಾರತದ ದಾಳಿಯನ್ನು ಖಂಡಿಸಿರುವ ಪಾಕಿಸ್ತಾನ ಇದೊಂದು ಯುದ್ಧ ಕೃತ್ಯವಾಗಿದೆ ಎಂದು ಹೇಳಿದೆ. ಪ್ರತೀಕಾರದ ಬೆದರಿಕೆಯನ್ನೂ ಪಾಕ್ ಒಡ್ಡಿದೆ.
ಬುಧುವಾರ ರಾತ್ರಿ ನಡೆದ ದಾಳಿಯು ಭಾರತ ಹಾಗೂ ಪಾಕಿಸ್ತಾನದ ಗಡಿ ಭಾಗಗಳಲ್ಲಿ ಉದ್ವಿಗ್ನ ವಾತಾವರಣವನ್ನು ನಿರ್ಮಿಸಿದೆ. ಗಡಿಯಲ್ಲಿ ಪಾಕಿಸ್ತಾನವು ನಿಯಮಗಳನ್ನು ಉಲ್ಲಂಘಿಸಿ ಶೇಲ್ ದಾಳಿಯನ್ನು ನಡೆಸುತ್ತಿದೆ ಎಂದು ಭಾರತ ಸೇನೆ ಆರೋಪಿಸಿದೆ.
ಭಾರತವು 9 ಉಗ್ರ ಶಿಬಿರಗಳ ಮೇಲೆ ದಾಳಿ ನಡೆಸಿದ್ದು ಇದಕ್ಕಾಗಿ 24 ಕ್ಷಿಪಣಿಗಳನ್ನು ಬಳಸಿದೆ ಎಂಬ ಮಾಹಿತಿಯನ್ನು ಭಾರತೀಯ ಸೇನೆ ನೀಡಿದೆ. ಈ ದಾಳಿಯು 25 ನಿಮಿಷಗಳಲ್ಲಿ ಕೊನೆಗೊಂಡಿದ್ದು ಒಟ್ಟು 9 ಉಗ್ರ ಶಿಬಿರಗಳನ್ನು ನಾಶಪಡಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕಾರ್ಯಾಚರಣೆಯಲ್ಲಿ ಒಟ್ಟು 70 ಉಗ್ರರನ್ನು ಹತ್ಯೆ ಮಾಡಲಾಗಿದೆ.
ದಾಳಿ ನಡೆದ ಸ್ಥಳಗಳು: ಮುಜಫರಾಬಾದ್, ಕೋಟ್ಲಿ, ಬವಾಲ್ಪುರ, ರಾವಲಕೋಟ್, ಚಕ್ಸ್ವ ರಿ, ಭಿಂಬರ್, ನೀಲಂ ಕಣಿವೆ, ಝೇಲಂ ಮತ್ತು ಚಕ್ವಾಲ್ನಲ್ಲಿ ನೆಲೆ ಕಂಡುಕೊಂಡಿದ್ದ ಉಗ್ರರ ಶಿಬಿರಗಳಲ್ಲಿ ಗುರಿಯಾಗಿಸಿ ಭಾರತವು ಕ್ಷಿಪಣಿ ದಾಳಿ ನಡೆಸಿದೆ. ದಾಳಿ ನಡೆದ ಎಲ್ಲಾ ಪ್ರದೇಶಗಳಲ್ಲಿ ಭಯೋತ್ಪಾದಕರು ಆಶ್ರಯ ಕಂಡುಕೊಂಡಿದ್ದರು ಎಂದು ಗುಪ್ತಚರ ಸಂಸ್ಥೆಗಳು ದೀರ್ಘಕಾಲದಿಂದ ಶಂಕಿಸುತ್ತಲೇ ಬಂದಿವೆ. ಈ ಸ್ಥಳಗಳಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಮತ್ತು ಜೈಶ್-ಎ-ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗಳು ಬೀಡು ಬಿಟ್ಟಿವೆ ಎಂದು ತಿಳಿದುಬಂದಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications