ಸಂವಹನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ದಾಟಿದ ಭಾರತ
ಬೆಂಗಳೂರು, ಡಿ.7: ಸಂವಹನ ಕ್ಷೇತ್ರದಲ್ಲಿ ಭಾರತ ಹೊಸ ಮೈಲಿಗಲ್ಲು ದಾಟಿದೆ. ಭಾನುವಾರ ಮುಂಜಾನೆ ಫ್ರೆಂಚ್ ಗಯಾನಾದಲ್ಲಿ ಭಾರತದ ಜಿ-ಸ್ಯಾಟ್-16 ಅನ್ನು, ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಪ್ರತಿಕೂಲ ಹವಾಮಾನದ ಪರಿಣಾಮ ಎರಡು ಬಾರಿ ಉಡಾವಣೆ ದಿನಾಂಕವನ್ನು ಮುಂದೂಡಲಾಗಿತ್ತು.
ಫ್ರೆಂಚ್ ಗಯಾನಾದ ಕೌರೌ ಉಪಗ್ರಹ ಉಡಾವಣಾ ಕೇಂದ್ರದಿಂದ ನಭಕ್ಕೆ ಹಾರಿದ 3,181 ಕೆಜಿ ತೂಕದ ಜಿ-ಸ್ಯಾಟ್ ಮುಂದಿನ 12 ವರ್ಷಗಳವರೆಗೆ ಸಂವಹನ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿದೆ. ಏರಿಯನ್-5 ನೌಕೆ ಉಪಗ್ರಹವನ್ನು ಕಕ್ಷೆ ಸೇರಿಸುವಲ್ಲಿ ಯಶಸ್ವಿಯಾಗಿದೆ. ಮುಂಜಾನೆ 2.10 ಸುಮಾರಿಗೆ ಆಗಸಕ್ಕೆ ಉಪಗ್ರಹ ಹೊತ್ತ ನೌಕೆ ಹಾರುತ್ತಿದ್ದಂತೆ ಜಿ ಸ್ಯಾಟ್ ಸಮೂಹದ ಏರಿಯನ್ ಸರಣಿಯ 221ನೇ ಯಶಸ್ವಿ ಉಡಾವಣೆಗೆ ಸಾಕ್ಷಿಯಾಯಿತು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ) ನಿರ್ಮಿತ 48 ಟ್ರಾನ್ ಪಾಂಡರ್ ಗಳನ್ನು ಹೊತ್ತೊಯ್ಡಿರುವ ಜಿ ಸ್ಯಾಟ್ 16 ಜೊತೆಗೆ ಅಮೆರಿಕದ ಡೈರೆಕ್ಟ್ ಟಿವಿ-14 ಉಪಗ್ರಹವೂ ಸುರಕ್ಷಿತವಾಗಿ ಕಕ್ಷೆಗೆ ತಲುಪಿದೆ ಎಂದು ಏರಿಯನ್ ಸ್ಪೇಸ್ ಹೇಳಿದೆ.
ಜಿ ಸ್ಯಾಟ್ 16ರ ನಿಯಂತ್ರಣವನ್ನು ಹಾಸನದ ಮಾಸ್ಟರ್ ಕಂಟ್ರೋಲ್ ಫೆಸಿಲಿಟಿಯಲ್ಲಿ ನಡೆಸಲಾಗುತ್ತಿದ್ದು, ಉಪಗ್ರಹ ಸುಸ್ಥಿತಿಯಲ್ಲಿದೆ ಎಂದು ಹೇಳಿದ್ದಾರೆ. ಸೋಮವಾರ ಮುಂಜಾನೆ 3.50 ರ ಸುಮಾರಿಗೆ ಕಕ್ಷೆ ಕೋನ ಬದಲಿಸುವ ಕಾರ್ಯ ನಡೆಸಲಾಗುವುದು ಜಿ ಸ್ಯಾಟ್ 8, ಐಆರ್ ಎನ್ ಎಸ್ ಎಸ್ 1ಎ ಹಾಗೂ 1ಬಿ ಉಪಗ್ರಹಗಳ ಜೊತೆಗೆ ಜಿ ಸ್ಯಾಟ್ 16 ಸ್ಥಾಪನೆಯಾಗಲಿದೆ.
ಎರಡು ದಿನಗಳ ಕಾಲ ಪ್ರತಿಕೂಲ ಹವಮಾನ ಇತ್ತು. ಇದರಿಂದ ಸ್ವಲ್ಪಮಟ್ಟಿಗೆ ಆತಂಕ ಶುರುವಾಗಿತ್ತು. ಅದರೆ, ಇಂದು ಹವಮನ ಅನುಕೂಲಕರವಾಗಿತ್ತು. ಈ ಉಪಗ್ರಹ ಉಡಾವಣೆಯಲ್ಲಿ ಕಾರ್ಯ ನಿರ್ವಹಿಸಲಿದ ಎಲ್ಲರಿಗೂ ಧನ್ಯವಾದಗಳು ಎಂದು ಐಸಾಕ್ ನಿರ್ದೇಶಕ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. (ಪಿಟಿಐ)
Kudos to our scientists for the successful launch of GSAT-16. The communication satellite will become a major asset for our space programme.
— Narendra Modi (@narendramodi) December 7, 2014 -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications