ಸಂವಹನ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ದಾಟಿದ ಭಾರತ
ಬೆಂಗಳೂರು, ಡಿ.7: ಸಂವಹನ ಕ್ಷೇತ್ರದಲ್ಲಿ ಭಾರತ ಹೊಸ ಮೈಲಿಗಲ್ಲು ದಾಟಿದೆ. ಭಾನುವಾರ ಮುಂಜಾನೆ ಫ್ರೆಂಚ್ ಗಯಾನಾದಲ್ಲಿ ಭಾರತದ ಜಿ-ಸ್ಯಾಟ್-16 ಅನ್ನು, ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಪ್ರತಿಕೂಲ ಹವಾಮಾನದ ಪರಿಣಾಮ ಎರಡು ಬಾರಿ ಉಡಾವಣೆ ದಿನಾಂಕವನ್ನು ಮುಂದೂಡಲಾಗಿತ್ತು.
ಫ್ರೆಂಚ್ ಗಯಾನಾದ ಕೌರೌ ಉಪಗ್ರಹ ಉಡಾವಣಾ ಕೇಂದ್ರದಿಂದ ನಭಕ್ಕೆ ಹಾರಿದ 3,181 ಕೆಜಿ ತೂಕದ ಜಿ-ಸ್ಯಾಟ್ ಮುಂದಿನ 12 ವರ್ಷಗಳವರೆಗೆ ಸಂವಹನ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿದೆ. ಏರಿಯನ್-5 ನೌಕೆ ಉಪಗ್ರಹವನ್ನು ಕಕ್ಷೆ ಸೇರಿಸುವಲ್ಲಿ ಯಶಸ್ವಿಯಾಗಿದೆ. ಮುಂಜಾನೆ 2.10 ಸುಮಾರಿಗೆ ಆಗಸಕ್ಕೆ ಉಪಗ್ರಹ ಹೊತ್ತ ನೌಕೆ ಹಾರುತ್ತಿದ್ದಂತೆ ಜಿ ಸ್ಯಾಟ್ ಸಮೂಹದ ಏರಿಯನ್ ಸರಣಿಯ 221ನೇ ಯಶಸ್ವಿ ಉಡಾವಣೆಗೆ ಸಾಕ್ಷಿಯಾಯಿತು.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ) ನಿರ್ಮಿತ 48 ಟ್ರಾನ್ ಪಾಂಡರ್ ಗಳನ್ನು ಹೊತ್ತೊಯ್ಡಿರುವ ಜಿ ಸ್ಯಾಟ್ 16 ಜೊತೆಗೆ ಅಮೆರಿಕದ ಡೈರೆಕ್ಟ್ ಟಿವಿ-14 ಉಪಗ್ರಹವೂ ಸುರಕ್ಷಿತವಾಗಿ ಕಕ್ಷೆಗೆ ತಲುಪಿದೆ ಎಂದು ಏರಿಯನ್ ಸ್ಪೇಸ್ ಹೇಳಿದೆ.
ಜಿ ಸ್ಯಾಟ್ 16ರ ನಿಯಂತ್ರಣವನ್ನು ಹಾಸನದ ಮಾಸ್ಟರ್ ಕಂಟ್ರೋಲ್ ಫೆಸಿಲಿಟಿಯಲ್ಲಿ ನಡೆಸಲಾಗುತ್ತಿದ್ದು, ಉಪಗ್ರಹ ಸುಸ್ಥಿತಿಯಲ್ಲಿದೆ ಎಂದು ಹೇಳಿದ್ದಾರೆ. ಸೋಮವಾರ ಮುಂಜಾನೆ 3.50 ರ ಸುಮಾರಿಗೆ ಕಕ್ಷೆ ಕೋನ ಬದಲಿಸುವ ಕಾರ್ಯ ನಡೆಸಲಾಗುವುದು ಜಿ ಸ್ಯಾಟ್ 8, ಐಆರ್ ಎನ್ ಎಸ್ ಎಸ್ 1ಎ ಹಾಗೂ 1ಬಿ ಉಪಗ್ರಹಗಳ ಜೊತೆಗೆ ಜಿ ಸ್ಯಾಟ್ 16 ಸ್ಥಾಪನೆಯಾಗಲಿದೆ.
ಎರಡು ದಿನಗಳ ಕಾಲ ಪ್ರತಿಕೂಲ ಹವಮಾನ ಇತ್ತು. ಇದರಿಂದ ಸ್ವಲ್ಪಮಟ್ಟಿಗೆ ಆತಂಕ ಶುರುವಾಗಿತ್ತು. ಅದರೆ, ಇಂದು ಹವಮನ ಅನುಕೂಲಕರವಾಗಿತ್ತು. ಈ ಉಪಗ್ರಹ ಉಡಾವಣೆಯಲ್ಲಿ ಕಾರ್ಯ ನಿರ್ವಹಿಸಲಿದ ಎಲ್ಲರಿಗೂ ಧನ್ಯವಾದಗಳು ಎಂದು ಐಸಾಕ್ ನಿರ್ದೇಶಕ ಶಿವಕುಮಾರ್ ಹರ್ಷ ವ್ಯಕ್ತಪಡಿಸಿದ್ದಾರೆ. (ಪಿಟಿಐ)
Kudos to our scientists for the successful launch of GSAT-16. The communication satellite will become a major asset for our space programme.
— Narendra Modi (@narendramodi) December 7, 2014 -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications