ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಶೇ.91.34ಕ್ಕೆ ಏರಿಕೆ
ನವದೆಹಲಿ, ಅಕ್ಟೋಬರ್ 31: ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ 91.34ಕ್ಕೆ ತಲುಪಿದೆ.
ಭಾರತಕ್ಕೆ ಇನ್ನೆರಡು ತಿಂಗಳು ನಿರ್ಣಾಯಕ ಸಮಯವಾಗಿದ್ದು, ಕೊರೊನಾ ನಿಯಂತ್ರಣ ಲಸಿಕೆ ಲಭ್ಯವಾಗುವ ತನಕ ಜನರು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ಹಿಂದಿಗಿಂತಲೂ ಈಗ ಅತ್ಯಂತ ಅನಿವಾರ್ಯವಾಗಿದೆ.
ದೇಶಾದ್ಯಂತ ಮಾರಕ ಕೊರೊನಾ ವೈರಸ್ನಹಾವಳಿ ಇಳಿಮುಖವಾಗುವ ಮುನ್ಸೂಚನೆ ನಡುವೆಯೇ ಮತ್ತೆ ಸೋಂಕು ಮತ್ತು ಸಾವು ಪ್ರಕರಣಗಳಲ್ಲಿ ಏರಿಳಿತ ಕಂಡಿರುವುದುಜನರಲ್ಲಿ ಪುನಃ ಕಳವಳಕ್ಕೆ ಕಾರಣವಾಗಿದೆ.

ಗರಿಷ್ಠಕೇರಿ ಇಳಿಮುಖದತ್ತ ಸಾಗುತ್ತಿದ್ದ ಮಹಾಮಾರಿ ಬಗ್ಗೆ ಜನರು ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಧೋರಣೆ ಅನುಸರಿಸಿದ ಪರಿಣಾಮ ಮತ್ತೆ ಸೋಂಕು ಪ್ರಕರಣಗಳು ಏರತೊಡಗಿದೆ.
ನಿನ್ನೆ ಮತ್ತು ಮೊನ್ನೆ 50,000 ಸನಿಹದಲ್ಲೇ ದಿನನಿತ್ಯದ ಪಾಸಿಟಿವ್ ಕೇಸ್ಗಳ ವರದಿಯಾಗಿದೆ. ಸೋಂಕು ಪ್ರಕರಣಗಳು ಸ್ಥಿರವಾಗಿದ್ದರೂ, ದೇಶವಾಸಿಗಳು ಮುನ್ನೆಚ್ಚರಿಕೆ ವಹಿಸುವುದುತೀರಾ ಅಗತ್ಯವಾಗಿದೆ.
ಇವುಗಳ ನಡುವೆಯೂ ದೇಶದಲ್ಲಿ ಸೋಂಕಿತರ ಪ್ರಮಾಣ 82ಲಕ್ಷದಾಟುತ್ತಿರುವುದು ಜನರಲ್ಲಿ ಆತಂಕ ಮುಂದುವರಿಯುವಂತೆ ಮಾಡಿದೆ. ಈವರೆಗೆ ಗುಣಮುಖರಾದ ಸೋಂಕಿತರ ಸಂಖ್ಯೆ74.32ಲಕ್ಷದಾಟಿದೆ.
ಚೇತರಿಕೆ ಪ್ರಮಾಣ ಶೇ.91.34ರಷ್ಟು ಏರಿಕೆ ಮತ್ತು ಸಾವಿನ ಪ್ರಮಾಣ ಶೇ.1.49 ರಷ್ಟುತಗ್ಗಿದ್ದು, ಜನರಲ್ಲಿ ನಿರಾಳತೆ ಮೂಡಿದಿದೆ. ದೇಶದಲ್ಲಿ ಮೃತರ ಸಂಖ್ಯೆ1,21,641ದಾಟಿದೆ ಎಂದು ಕೇಂದ್ರಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ದೇಶದಲ್ಲಿಒಟ್ಟು ಸೋಂಕು ಪ್ರಕರಣಗಳು 82 ಲಕ್ಷ ಮತ್ತು ಸಾವಿನ ಸಂಖ್ಯೆ 1.22 ಲಕ್ಷಸನಿಹದಲ್ಲಿದೆ. ಹೆಮ್ಮಾರಿಯ ಆರ್ಭಟಗರಿಷ್ಠಕ್ಕೇರಿ ಇಳಿಮುಖದ ಹಾದಿಯಲ್ಲಿ ಸಾಗುತ್ತಿದ್ದ ಸಂದರ್ಭದಲ್ಲಿ ಜನರು ಮುನ್ನೆಚ್ಚರಿಕೆವಹಿಸದ ಪರಿಣಾಮ ದಿನಿನಿತ್ಯ ಪಾಸಿಟಿವ್ ಕೇಸ್ಗಳು ಸತತ ಮೂರನೇ ದಿನ 50,000ದತ್ತ ತಲುಪುತ್ತಿದೆ.
ನಿನ್ನೆ 48,648 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ.ಮೊನ್ನೆಇದುಇಷ್ಟೇ ಪ್ರಮಾಣದಲ್ಲಿತ್ತು. ಸತತ13ನೇ ದಿನ 60,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪಾಸಿಟಿವ್ ಕೇಸ್ಗಳು ವರದಿಯಾಗಿದೆ.
ಅಲ್ಲದೇ ಸತತ15ನೇ ದಿನವೂ ಸಕ್ರಿಯ ಸೋಂಕು ಪ್ರಕರಣಗಳು 8 ಲಕ್ಷಕ್ಕಿಂತ ಕಡಿಮೆ ಮಟ್ಟದಲ್ಲಿ ಇಳಿಮುಖದತ್ತ ಸಾಗಿದೆ.
ಭಾರತದಲ್ಲಿ ಒಟ್ಟು ರೋಗಿಗಳ ಸಂಖ್ಯೆ81,37,199ರಷ್ಟಿದ್ದು, ನಾಳೆ ವೇಳೆಗೆ 82ಲಕ್ಷದಾಟುವ ಸಾಧ್ಯತೆ ಇದೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral











Click it and Unblock the Notifications