ಜೂನ್ ಮಳೆ: 113 ವರ್ಷದ ಇತಿಹಾಸದಲ್ಲಿ ಕಡಿಮೆ ಮಳೆ
ನವ ದೆಹಲಿ, ಜೂ. 30: ಈ ವರ್ಷದ ಜೂನ್ ತಿಂಗಳಿನಲ್ಲಿ ಇಷ್ಟು ಕಡಿಮೆ ಪ್ರಮಾಣದ ಮಳೆಯಾಗುತ್ತಿರುವುದು 113 ವರ್ಷದ ಇತಿಹಾಸದಲ್ಲಿ 12ನೇ ಸಲ ಎಂದು ಖಾಸಗಿ ಹವಾಮಾನ ತಜ್ಞರು ವಿಶ್ಲೇಷಿಸಿದ್ದಾರೆ.
ಹವಾಮಾನ ಮುನ್ಸೂಚನೆ ನೀಡುವ ಸ್ಕೈಮೆಟ್ ಮೆಟರಾಲಾಜಿ ಡಿವಿಶನ್ ಆಫ್ ಇಂಡಿಯಾ ಈ ಮಾಹಿತಿಯನ್ನು ನೀಡಿದ್ದು ಈ ತಿಂಗಳು ದೇಶದೆಲ್ಲೆಡೆ ಸರಾಸರಿ ಶೇ. 42 ಮಳೆ ಕೊರತೆಯಾಗಿದೆ. ಗುಜರಾತ್ ಮತ್ತು ರಾಜಸ್ಥಾನದಲ್ಲಿ ಸಿಕ್ಕಾಪಟ್ಟೆ ಮಳೆ ಕಡಿಮೆಯಾಗಿದೆ ಎಂದು ತಿಳಿಸಿದೆ.
ಗುಜರಾತಿನಲ್ಲಿ ಜೂ.17ರ ತನಕ ಶೇ. 78 ಮಳೆ ಕೊರತೆಯಾಗಿತ್ತು ಬಳಿಕ ಪರಿಸ್ಥಿತಿ ಇನ್ನಷ್ಟು ಉಲ್ಬಣಿಸಿ ಮಳೆ ಕೊರತೆ ಶೇ. 88ಕ್ಕೇರಿದೆ. ಪಶ್ಚಿಮ ದಿಕ್ಕಿನಿಂದ ಮುಂಗಾರು ಮಾರುತಗಳು ವೆರಾವಲ್, ಸೂರತ್ ಮತ್ತು ನಾಸಿಕ್ ಮೂಲಕ ಹಾದು ಹೋಗುತ್ತವೆ. ಆದರೆ ಕಳೆದ 13 ದಿನಗಳಿಂದ ಈ ಮಾರುತಗಳಿಂದ ಯಾವುದೇ ಮಳೆಯಾಗಿಲ್ಲ ಎಂದು ತಿಳಿಸಿದೆ.

ಹವಾಮಾನ ಇಲಾಖೆ ಜುಲೈ ಮೊದಲ ವಾರದಲ್ಲಿ ದೇಶದಲ್ಲೆಡೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಒಂದು ವೇಳೆ ನಿಗದಿತ ಪ್ರಮಾಣದಲ್ಲಿ ಮಳೆ ಬೀಳದಿದ್ದಲ್ಲಿ ಶತಮಾನದ ಭೀಕರ ಬರಗಾಲಕ್ಕೆ ದೇಶ ತುತ್ತಾಗುವ ಸಾಧ್ಯತೆಯಿದೆ.[ಭಾರತದಲ್ಲಿ ಮುಂಗಾರು ಮಳೆ ಶೇ.45 ಕುಸಿತ]
ಜೂನ್ ಆರಂಭದಿಂದ ಜೂನ್ 18ರವರೆಗೆ ದೇಶದಲ್ಲಿ ಕೇವಲ ಶೇ.45ರಷ್ಟು ಮಾತ್ರ ಮಳೆಯಾಗಿದೆ. ಈ ಅವಧಿಯಲ್ಲಿ ದೇಶಾದ್ಯಂತ 78 ಮಿ.ಮೀ. ಮಳೆ ಸುರಿಯಬೇಕಿತ್ತು.
ಮಧ್ಯಪ್ರದೇಶ, ಗುಜರಾತ್, ಛತ್ತೀಸ್ಗಢ, ಮಹಾರಾಷ್ಟ್ರ, ಗೋವಾ ಹಾಗೂ ಒಡಿಶಾ ಒಳಗೊಂಡ ಮಧ್ಯಭಾರತದಲ್ಲಿ ದೀರ್ಘಕಾಲಿಕ ಸರಾಸರಿ ಮಳೆಯ ಪ್ರಮಾಣದ ಪ್ರಕಾರ ಶೇ. 66.2 ರಷ್ಟು ಮಳೆಯಾಗಬೇಕಿತ್ತು. ಆದರೆ ಇಲ್ಲಿವರೆಗೆ ಕೇವಲ 31.7 ಮಿ.ಮೀ.ನಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ತಿಳಿಸಿತ್ತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications