ಕೊರೊನಾ; ಒಂದೇ ದಿನದಲ್ಲಿ ಹೆಚ್ಚು ಸಾವು, ದಾಖಲೆ ಬರೆದ ಭಾರತ
ನವದೆಹಲಿ, ಏಪ್ರಿಲ್ 28 : ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 30 ಸಾವಿರದ ಹತ್ತಿರ ತಲುಪಿದೆ. ಮಧ್ಯಪ್ರದೇಶದಲ್ಲಿ ಒಂದೇ ದಿನ ಹೆಚ್ಚು ಪ್ರಕರಣ ದಾಖಲಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 29,571ಕ್ಕೆ ಏರಿಕೆಯಾಗಿದೆ.
ಸೋಮವಾರ ಒಂದೇ ದಿನ ದೇಶದಲ್ಲಿ 58 ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ ಅತಿ ಹೆಚ್ಚು ಸಾವಿನ ಪ್ರಕರಣ ಏಪ್ರಿಲ್ 27ರಂದು ದಾಖಲಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಲ್ಲಿ ಅತಿ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗಿವೆ.
ಮಧ್ಯಪ್ರದೇಶದ ಇಂಧೋರ್ನಲ್ಲಿ ಸೋಮವಾರ 196 ಹೊಸ ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1372ಕ್ಕೆ ಆಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ 396 ಹೊಸ ಪ್ರಕರಣಗಳು ದಾಖಲಾಗಿದೆ. ದೆಹಲಿಯಲ್ಲಿ 190 ಹೊಸ ಪ್ರಕರಣದಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3000ರ ಗಡಿ ದಾಟಿದೆ.
ಮಹಾರಾಷ್ಟ್ರ, ಗುಜರಾತ್, ದೆಹಲಿ, ರಾಜಸ್ಥಾನ ಮತ್ತು ಮಧ್ಯಪ್ರದೇಶ ದೇಶದಲ್ಲಿ ಕೊರೊನಾ ಸೋಂಕಿತರು ಇರುವ ಟಾಪ್ 5 ರಾಜ್ಯಗಳಾಗಿವೆ. ಮಧ್ಯಪ್ರದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2165, ಇದರಲ್ಲಿ ಇಂಧೋರ್ ಒಂದು ಕಡೆಯೇ 1207 ಪ್ರಕರಣಗಳಿವೆ.

ಮೃತಪಟ್ಟವರ ಲೆಕ್ಕ
ಮಹಾರಾಷ್ಟ್ರದಲ್ಲಿ ಒಂದೇ ದಿನ 27 ಜನರು ಮೃತಪಟ್ಟಿದ್ದು ರಾಜ್ಯದ ಮೊದಲ ಸ್ಥಾನದಲ್ಲಿದೆ. ಗುಜರಾತ್ನಲ್ಲಿ 11, ರಾಜಸ್ಥಾನದಲ್ಲಿ 9, ಮಧ್ಯಪ್ರದೇಶದಲ್ಲಿ 7, ಪಶ್ಚಿಮ ಬಂಗಾಳದಲ್ಲಿ 2, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ತಲಾ 1 ಸಾವಿನ ಪ್ರಕರಣ ಸೋಮವಾರ ದಾಖಲಾಗಿದೆ.

ಸೋಂಕು ನಿಯಂತ್ರಣಕ್ಕೆ ಬಂದಿದೆ
ಸೋಮವಾರ ಇಂಧೋರ್ನಲ್ಲಿ 196 ಹೊಸ ಪ್ರಕರಣ ದಾಖಲಾಗಿ ಆತಂಕ ಮೂಡಿಸಿದೆ. ಆದರೆ, ಬಿಹಾರ, ಜಾರ್ಖಂಡ್ ರಾಜ್ಯಗಳು ಸೋಂಕನ್ನು ನಿಯಂತ್ರಣಕ್ಕೆ ತಂದಿವೆ. ಎರಡೂ ರಾಜ್ಯದಲ್ಲಿ 20 ಹೊಸ ಪ್ರಕರಣ ದಾಖಲಾಗಿದೆ. ಅದಕ್ಕೂ ಮೊದಲು 68 ಪ್ರಕರಣ ದಾಖಲಾಗಿದ್ದವು.

937 ಜನರ ಸಾವು
ಭಾರತದಲ್ಲಿ ಸೋಮವಾರ ರಾತ್ರಿಯ ತನಕ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 937. ಇದರಲ್ಲಿ 396 ಜನರು ಮಹಾರಾಷ್ಟ್ರ ರಾಜ್ಯದಲ್ಲಿಯೇ ಮೃತಪಟ್ಟಿದ್ದಾರೆ. 219 ಜನರು ಮುಂಬೈನಲ್ಲಿ ಮೃತಪಟ್ಟಿದ್ದಾರೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಅಹಮದಾಬಾದ್
ಗುಜರಾತ್ನ ಅಹಮದಾಬಾದ್ ಆತಂಕ ಉಂಟು ಮಾಡಿದೆ. ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಶೇ 4.7ರಷ್ಟಿದೆ. ಮುಂಬೈನಲ್ಲಿ ಶೇ 3.8 ಇದೆ. ಗುಜರಾತ್ನ ಒಟ್ಟು ಸಾವಿನಲ್ಲಿ ಅಹಮದಾಬಾದ್ ಶೇ 67.5ರಷ್ಟು ಪಾಲನ್ನು ಹೊಂದಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications