ಶ್ರೀದೇವಿಯ ಕಟ್ಟಕಡೆಯ ವಿಡಿಯೋ ಮತ್ತು ನಿಲ್ಲದ ಕಂಬನಿ
Recommended Video

ಕನ್ನಡದಲ್ಲಿಯೂ 6 ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದ 54ರ ಹರೆಯದ ಬಹುಭಾಷಾ ನಟಿ ಶ್ರೀದೇವಿ (ಶ್ರೀ ಅಮ್ಮ ಯಾಂಗರ್ ಅಯ್ಯಪ್ಪನ್) ಹಠಾತ್ ನಿಧನ ಭಾರತೀಯ ಚಿತ್ರರಂಗದ ಮೇಲೆ ಬರಸಿಡಿಲಿನಂತೆ ಬಂದು ಎರಗಿದೆ.
ಅಪರೂಪದ ಸೌಂದರ್ಯ, ಅಪ್ರತಿಮ ಪ್ರತಿಭೆಯ ಸಂಗಮವಾಗಿದ್ದ ಶ್ರೀದೇವಿಯವರು ತಮ್ಮ ನಟನಾ ಕೌಶಲ್ಯದಿಂದಲೇ ಹಿಂದಿ ಚಿತ್ರರಂಗವನ್ನು ಆಳಿದವರು ಮತ್ತು ಕೋಟ್ಯಂತರ ಚಿತ್ರಪ್ರೇಮಿಗಳ ಹೃದಯ ಸಾಮ್ರಾಜ್ಞಿಯಾಗಿ ಮೆರೆದವರು.
ಚಿತ್ರರಂಗದಲ್ಲಿ ಮಿಂಚಬಯಸುವ ಯುವ ಕಲಾವಿದೆಯರಿಗೆ ಮಾದರಿಯಂತಿದ್ದ ಅವರು, ತಮ್ಮಲ್ಲಿಯೇ ಎಷ್ಟೇ ಕುಂದುಕೊರತೆಗಳಿದ್ದರೂ ಎಲ್ಲವನ್ನೂ ಮೀರಿ ಯಶಸ್ಸಿನ ಹಿಮಾಲಯವೇರಿದ್ದರು ಮತ್ತು ತಾವು ಕೂಡ ಹಲವಾರು ಕನಸುಗಳನ್ನು ಕಂಡಿದ್ದರು.
ಜೀವನವನ್ನು ಅದಮ್ಯವಾಗಿ ಪ್ರೀತಿಸುತ್ತಿದ್ದ ಅವರ ನಿಧನದಿಂದಾಗಿ ಸಂತಾಪದ ಮಹಾಪೂರವೇ ಸಾಮಾಜಿಕ ತಾಣದಲ್ಲಿ ಹರಿದುಬರುತ್ತಿದೆ. ಭಾಷೆ, ಗಡಿಯನ್ನೂ ಮೀರಿ ಬೆಳೆದಿದ್ದ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ.
|
ಪ್ರಧಾನಿ ನರೇಂದ್ರ ಮೋದಿ ಸಂತಾಪ
ಖ್ಯಾತ ನಟಿ ಶ್ರೀದೇವಿಯವರ ಅಕಾಲಿಕ ಮರಣದಿಂದಾಗಿ ತುಂಬಾ ದುಃಖವಾಗಿದೆ. ತಮ್ಮ ಸುದೀರ್ಘ ವೃತ್ತಿ ಜೀವನದಲ್ಲಿ ಅವರು ವಿಭಿನ್ನ ಪಾತ್ರಗಳಲ್ಲಿ ನೆನಪಿನಲ್ಲುಳಿಯುವಂಥ ನಟನೆ ನೀಡಿದ್ದರು. ಈ ಸಂಕಷ್ಟಮಯ ಸಮಯದಲ್ಲಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ನನ್ನ ಸಂತಾಪವಿದೆ - ನರೇಂದ್ರ ಮೋದಿ
|
ತರಣ್ ಆದರ್ಶ್, ಹಿಂದಿ ಸಿನೆಮಾ ವಿಮರ್ಶಕ
ನನ್ನ ಹೃದಯ ಛಿದ್ರವಾಗಿದೆ. ಶ್ರೀದೇವಿಯವರ ನಿಧನದಿಂದ ತೀವ್ರ ಆಘಾತವಾಗಿದೆ, ದುಃಖವಾಗಿದೆ. ಅವರು ಸತ್ತಿದ್ದಾರೆಂದು ನಂಬಲೇ ಆಗುತ್ತಿಲ್ಲ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು - ತರಣ್ ಆದರ್ಶ್, ಹಿಂದಿ ಸಿನೆಮಾ ವಿಮರ್ಶಕ.
|
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್
ಶ್ರೀದೇವಿಯವರ ನಿಧನದ ಸುದ್ದಿ ಕೇಳಿ ತುಂಬಾ ಆಘಾತವಾಗಿದೆ. ಅವರ ಸಾವು ಲಕ್ಷಾಂತರ ಅಭಿಮಾನಿಗಳ ಹೃದಯ ಬಿರಿಯುವಂತೆ ಮಾಡಿದೆ. ಮೂಂಡ್ರಂ ಪಿರೈ, ಲಮ್ಹೆ, ಇಂಗ್ಲಿಷ್ ವಿಂಗ್ಲಿಷ್ ನಂಥ ಚಿತ್ರಗಳಲ್ಲಿ ಅವರ ನಟನೆ ಎಲ್ಲ ಕಲಾವಿದರಿಗೆ ಸ್ಫೂರ್ತಿಯಾಗಿರುತ್ತದೆ. ಅವರ ಕುಟುಂಬಕ್ಕೆ ಮತ್ತು ಆಪ್ತರಿಗೆ ನನ್ನ ಸಂತಾಪಗಳು - ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್.
|
ಖ್ಯಾತ ನಟ ರಜನಿಕಾಂತ್
ಶ್ರೀದೇವಿ ವಿಧಿವಶರಾಗಿದ್ದು ಕೇಳಿ ತೀವ್ರ ಶಾಕ್ ಆಗಿದೆ, ಡಿಸ್ಟರ್ಬ್ಡ್ ಆಗಿದ್ದೇನೆ. ನಾನು ಆತ್ಮೀಯ ಸ್ನೇಹಿತೆಯನ್ನು ಕಳೆದುಕೊಂಡಿದ್ದೇನೆ. ಚಿತ್ರರಂಗ ಉತ್ಕೃಷ್ಟ ಕಲಾವಿದೆಯನ್ನು ಕಳೆದುಕೊಂಡಿದೆ. ನನ್ನ ಹೃದಯ ಅವರ ಕುಟುಂಬ ಮತ್ತು ಆಪ್ತ ಸ್ನೇಹಿತರಿಗಾಗಿ ಮಿಡಿಯುತ್ತಿದೆ. ಅವರ ದುಃಖದಲ್ಲಿ ನಾನೂ ಭಾಗಿ. ಯು ವಿಲ್ ಬಿ ಮಿಸ್ಡ್ - ಖ್ಯಾತ ನಟ ರಜನಿಕಾಂತ್
|
ಅಂತಿಮ ಕ್ಷಣಗಳ ವಿಡಿಯೋ
ಶ್ರೀದೇವಿ ಅವರ ಅಂತಿಮ ಕ್ಷಣಗಳ ವಿಡಿಯೋ ಇಲ್ಲಿದೆ. ದುಬೈನಲ್ಲಿ ಸಂಬಂಧಿ ಮೋಹಿತ್ ಮಾರ್ವಾ ಎಂಬುವವರ ಮದುವೆಯಲ್ಲಿ ಅವರು ಭಾಗಿಯಾಗಿದ್ದರು. ಅಂತಿಮ ಕ್ಷಣದವರೆಗೂ ಆರೋಗ್ಯವಂತರಂತೆಯೇ ಅವರು ಕಂಡುಬರುತ್ತಿದ್ದರು.
|
ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್
ಅದ್ಭುತ ನಟಿ ಶ್ರೀದೇವಿಯವರ ಅಕಾಲಿಕ ನಿಧನದಿಂದ ಅತೀವ ದುಃಖ ಆವರಿಸಿಕೊಂಡಿದೆ. ಹಿಂದಿ ಚಿತ್ರರಂಗಕ್ಕೆ ಅವರು ನೀಡಿದ ಕಾಣಿಕೆಯನ್ನು ಯಾವುದಕ್ಕೂ ಹೋಲಿಸಲು ಸಾಧ್ಯವಿಲ್ಲ. ಹಲವಾರು ಪೀಳಿಗೆಯ ವರೆಗೆ ಅವರ ನಟನೆ ನೆನಪಿನಲ್ಲುಳಿಯುವಂಥದ್ದು. ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪ - ಪಿಯೂಶ್ ಗೋಯಲ್, ರೈಲ್ವೆ ಸಚಿವ.
|
ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ
ಭಾರತದ ಫೆವರಿಟ್ ನಟಿ ಶ್ರೀದೇವಿಯವರ ಅಕಾಲಿಕ ಮರಣದ ಸುದ್ದಿ ಕೇಳಿ ತುಂಬಾ ಶಾಕ್ ಆಗಿದೆ. ಅವರು ಅಪಾರ ಪ್ರತಿಭಾವಂತೆಯಾಗಿದ್ದರು ಮತ್ತು ಯಾವುದೇ ರೀತಿಯ ಪಾತ್ರ, ಭಾಷೆಯಿದ್ದರೂ ಸುಲಲಿತವಾಗಿ ನಟಿಸುತ್ತಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪ ಮತ್ತು ಅವರ ಆತ್ಮಕ್ಕೆ ಶಾಂತಿ - ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications