ಬೆಂಗಳೂರಿನಿಂದ ಗ್ರೀಸ್ ಗೆ ವಿಮಾನಯಾನ ಸಾಧ್ಯವಾಗಿಸಿದ ಮೋದಿ
ಇನ್ಮುಂದೆ ಗ್ರೀಸ್ ವಿಮಾನಯಾನ ಸಂಸ್ಥೆಗಳು ಭಾರತದ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ, ಹೈದ್ರಾಬಾದ್ ಮತ್ತು ಚೆನ್ನೈನ 6 ಸ್ಥಳಗಳಿಗೆ ನೇರವಾಗಿ ಕಾರ್ಯಾಚರಣೆ ಮಾಡಬಹುದಾಗಿದೆ.
ನವದೆಹಲಿ, ಫೆಬ್ರವರಿ 22: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಗ್ರೀಸ್ ನಡುವೆ ವಾಯು ಸೇವೆಗಳ ಒಪ್ಪಂದ (ಎ.ಎಸ್.ಎ.)ಗೆ ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ.
ಈ ಒಪ್ಪಂದದ ಪರಿಣಾಮವಾಗಿ ಇನ್ಮುಂದೆ ಗ್ರೀಸ್ ವಿಮಾನಯಾನ ಸಂಸ್ಥೆಗಳು ಭಾರತದ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ, ಹೈದ್ರಾಬಾದ್ ಮತ್ತು ಚೆನ್ನೈನ 6 ಸ್ಥಳಗಳಿಗೆ ನೇರವಾಗಿ ಕಾರ್ಯಾಚರಣೆ ಮಾಡಬಹುದಾಗಿದೆ.
ಈ ಒಪ್ಪಂದವು ಎರಡೂ ರಾಷ್ಟ್ರಗಳ ನಡುವೆ ನಾಗರಿಕ ವಿಮಾನಯಾನ ವಲಯದಲ್ಲಿನ ಬೆಳವಣಿಗೆಗಳಿಗೆ ತಕ್ಕಂತೆ ವಾಣಿಜ್ಯ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯ ಹೆಚ್ಚಳಕ್ಕೆ ಪ್ರೇರಣೆ ನೀಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಹೆಚ್ಚಿನ ಮತ್ತು ತಡೆರಹಿತ ಸಂಪರ್ಕ ಒದಗಿಸುವ ವಾತಾವರಣಕ್ಕೆ ಅನುವು ಮಾಡುತ್ತದೆ ಜೊತೆಗೆ ಹೆಚ್ಚಿನ ಸುರಕ್ಷತೆ ಮತ್ತು ಭದ್ರತೆಯೊಂದಿಗೆ ಎರಡೂ ಕಡೆಯ ವಿಮಾನಯಾನ ಸಂಸ್ಥೆಗಳಿಗೆ ವಾಣಿಜ್ಯ ಅವಕಾಶಗಳನ್ನು ಒದಗಿಸುತ್ತದೆ.

ಎ.ಎಸ್.ಎ.ಯ ಪ್ರಮುಖ ಲಕ್ಷಣಗಳು ಈ ಕೆಳಗಿನಂತಿವೆ:
* ಎರಡೂ ರಾಷ್ಟ್ರಗಳು ಒಂದು ಅಥವಾ ಅದಕ್ಕಿಂತ ಹೆಚ್ಚಿನ ವಿಮಾನಯಾನ ಸಂಸ್ಥೆಯನ್ನು ನಿಯೋಜಿಸಲು ಅರ್ಹವಾಗಿರುತ್ತವೆ.
* ಉಭಯ ದೇಶಗಳ ನಿಯೋಜಿತ ವಿಮಾನಯಾನ ಸಂಸ್ಥೆಗಳು ಮತ್ತೊಂದು ದೇಶದಲ್ಲಿ ತಮ್ಮ ವಾಯುಯಾನ ಸೇವೆಗಳ ಮಾರಾಟದ ಉತ್ತೇಜನಕ್ಕಾಗಿ ಕಚೇರಿಯನ್ನು ತೆರೆಯಲು ಹಕ್ಕುಳ್ಳವಾಗಿರುತ್ತವೆ.
* ಎರಡೂ ರಾಷ್ಟ್ರಗಳನಿಯೋಜಿತ ವಿಮಾನಯಾನ ಸಂಸ್ಥೆಗಳು ನಿರ್ದಿಷ್ಟ ಮಾರ್ಗದಲ್ಲಿ ಒಪ್ಪಿತ ಸೇವೆಗಳ ಕಾರ್ಯಾಚರಣೆ ಮಾಡಲು ಸಮಾನ ಮತ್ತು ನ್ಯಾಯಸಮ್ಮತ ಅವಕಾಶವನ್ನು ಹೊಂದಿರುತ್ತವೆ.
* ಪ್ರತಿ ಪಕ್ಷಕಾರರನಿಯೋಜಿತ ವಿಮಾನಯಾನ ಸಂಸ್ಥೆಗಳಿಗೆ ಅದೇ ಪಕ್ಷಕಾರರ, ಮತ್ತೊಬ್ಬ ಪಕ್ಷಕಾರರ ಮತ್ತು ಮೂರನೇ ರಾಷ್ಟ್ರದ ಸಂಸ್ಥೆಗಳೊಂದಿಗೆ ಸಹಕಾರ ಮಾರುಕಟ್ಟೆ ಒಪ್ಪಂದ ಮಾಡಿಕೊಳ್ಳಬಹುದಾಗಿದೆ.
v. ಮಾರ್ಗದ ವೇಳಾಪಟ್ಟಿಯಂತೆ, ಭಾರತೀಯ ವಾಯುಯಾನ ಸಂಸ್ಥೆಗಳು ಭಾರತದ ಸ್ಥಳಗಳಿಂದ ಗ್ರೀಸ್ ನಂತರದಲ್ಲಿ ನಿರ್ದಿಷ್ಟಪಡಿಸುವ ಅಥೆನ್ಸ್, ಥೆಸ್ಸಾಲೊನಿಕಿ, ಹೆರಾಕಿಯಾನ್ ನ ಮೂರು ಸ್ಥಳಗಳಿಗೆ ಕಾರ್ಯಾಚರಣೆ ಮಾಡಬಹುದಾಗಿದ್ದರೆ, ಹೆಲ್ಲೆನಿಕ್ ಗಣರಾಜ್ಯದ ವಿಮಾನಯಾನ ಸಂಸ್ಥೆಗಳು ಭಾರತದ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ, ಹೈದ್ರಾಬಾದ್ ಮತ್ತು ಚೆನ್ನೈನ 6 ಸ್ಥಳಗಳಿಗೆ ನೇರವಾಗಿ ಕಾರ್ಯಾಚರಣೆ ಮಾಡಬಹುದಾಗಿದೆ.
ಭಾರತದ ನಿಯೋಜಿತ ವಿಮಾನಯಾನ ಸಂಸ್ಥೆಗಳಿಗೆ ಹಾಗೂ ಗ್ರೀಸ್ ನ ನಿಯೋಜಿತ ಸಂಸ್ಥೆಗಳಿಗೆ ಮಧ್ಯಂತರ ಮತ್ತು ಅದರಾಚೆಗಿನ ಸ್ಥಳವಾಗಿ ಯಾವುದೇ ಸ್ಥಳ ಲಭ್ಯವಾಗಲಿದೆ.
ಪ್ರಸ್ತುತ ಭಾರತ ಮತ್ತು ಗ್ರೀಸ್ ನಡುವೆ ಯಾವುದೇ ಎ.ಎಸ್.ಎ. ಇರುವುದಿಲ್ಲ. 2016ರ ಸೆಪ್ಟೆಂಬರ್ 6-7ರಂದು ನವದೆಹಲಿಯಲ್ಲಿ ಎರಡೂ ಕಡೆಯ ನಿಯೋಗ ಭೇಟಿ ಮಾಡಿತ್ತು ಮತ್ತು ಎ.ಎಸ್.ಎ.ಯ ಕರಡು ಆಖೈರುಗೊಳಿಸಿತ್ತು.
ಈ ಒಪ್ಪಂದವು ಎರಡೂ ರಾಷ್ಟ್ರಗಳ ನಡುವೆ ವಾಯು ಸಂಪರ್ಕ ಸುಧಾರಣೆ ಮಾಡುವ ಉದ್ದೇಶದೊಂದಿಗೆ ನಾಗರಿಕ ವಿಮಾನಯಾನ ವಲಯದ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡ ಇತ್ತೀಚೆಗಿನ ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ಸಂಸ್ಥೆ (ಐ.ಸಿ.ಎ.ಓ.) ಮಾದರಿಗೆ ಅನುಗುಣವಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications