ಮೋದಿ ಸರಕಾರದಿಂದ ಯೋಧರಿಗೆ ಭರ್ಜರಿ ದೀಪಾವಳಿ ಬೋನಸ್
ನವದೆಹಲಿ, ಅಕ್ಟೋಬರ್ 13 : ಭಾರತೀಯ ಯೋಧರಿಗೆ ಈ ದೀಪಾವಳಿಯಂದು ನರೇಂದ್ರ ಮೋದಿಯಿಂದ ಭರ್ಜರಿ ಬಳುವಳಿ ದೊರೆಯಲಿದೆ. ವೇತನ ಆಯೋಗದ ಶಿಫಾರಸಿನ ಪ್ರಕಾರ, ಯೋಧರಿಗೆ ಬರಬೇಕಾದ ಬಾಕಿ ಮೊತ್ತದ ಶೇ.10ರಷ್ಟು ಅಕ್ಟೋಬರ್ 30ರೊಳಗೆ ದೊರೆಯಲಿದೆ.
ಇದರಂತೆ, ಪ್ರತಿ ಯೋಧನಿಗೂ ಹೆಚ್ಚೂಕಡಿಮೆ ಒಂದು ತಿಂಗಳ ಸಂಬಳ ಬೋನಸ್ ರೂಪದಲ್ಲಿ ಈ ದೀಪಾವಳಿಗೆ ದೊರೆಯಲಿದೆ. ವೇತನ ಆಯೋಗದ ಶಿಫಾರಸಿನಂತೆ ಸಿವಿಲ್ ಸೇವೆಯಲ್ಲಿರುವವರಿಗೆ ಬಾಕಿ ಮೊತ್ತ ಬಂದಿದ್ದರೆ, ಯೋಧರಿಗೆ ಮಾತ್ರ ಇನ್ನೂ ಬರಬೇಕಾದ ಹಣ ಇನ್ನೂ ಬಂದಿಲ್ಲ. [ಗಡಿಯಲ್ಲಿ ಹೈ ಅಲರ್ಟ್ : ಶಸ್ತ್ರಸನ್ನದ್ಧವಾಗಿದೆ ಭಾರತೀಯ ಸೇನೆ]

ವೇತನ ಆಯೋಗದ ಆದೇಶದಲ್ಲಿ ಕೆಲ ತಿದ್ದುಪಡಿಗಳನ್ನು ಸೇನೆಯ ದಂಡನಾಯಕರು ಸೂಚಿಸಿದ್ದರಿಂದ ಯೋಧರಿಗೆ ಬರಬೇಕಾದ ಬಾಕಿ ಮೊತ್ತ ಇನ್ನೂ ಸಿಕ್ಕಿಲ್ಲ. ಅಂಗವಿಕಲರಿಗೆ ಸಿಗಬೇಕಾದ ವೇತನ ಮತ್ತು ಪಿಂಚಣಿಗೆ ಸಂಬಂಧಿಸಿದಂತೆ ವೇತನ ಆಯೋಗದ ಶಿಫಾರಸಿನಲ್ಲಿ ಸಾಕಷ್ಟು ತಪ್ಪುಗಳಿವೆ ಎಂದು ಸೇನಾಪತಿಗಳು ತಗಾದೆ ಎತ್ತಿದ್ದಾರೆ.
ವೇತನ ಆಯೋಗದ ಶಿಫಾರಸುಗಳು ಇನ್ನೂ ಜಾರಿಯಾಗದಿದ್ದರೂ, ಬರಬೇಕಾದ ಬಾಕಿ ಮೊತ್ತದ ಶೇ.10ರಷ್ಟು ತುರ್ತಾಗಿ ಯೋಧರಿಗೆ ನೀಡಬೇಕೆಂಬ ಮನವಿಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಹೀಗಾಗಿ, ಈ ದೀಪಾವಳಿಗೆ ಪ್ರತಿ ಯೋಧರ ಮನೆಮನೆಗಳಲ್ಲಿಯೂ ಆತಂಕದ ಕಾರ್ಮೋಡ ಕಳೆದು ಸಂತಸದ ಜ್ಯೋತಿ ಬೆಳಗಲಿದೆ. [ಸರ್ಜಿಕಲ್ ಸ್ಟ್ರೈಕ್ ನಡೆದದ್ದು ಹೇಗೆ? 10 ಬೆಳವಣಿಗೆಗಳು]
More From
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ












Click it and Unblock the Notifications