ಶ್ರೀಲಂಕಾ ಜತೆಗಿನ ಬುದ್ಧಿಸ್ಟ್ ಒಪ್ಪಂದಕ್ಕೆ ಭಾರತದಿಂದ 15 ಮಿಲಿಯನ್ ಡಾಲರ್ ನೆರವು
ನವದೆಹಲಿ, ಸೆಪ್ಟೆಂಬರ್ 26: ನೆರೆಹೊರೆಯವರು ಮೊದಲು ಎಂಬ ನೀತಿಯಡಿ ಭಾರತವು ಶ್ರೀಲಂಕಾಕ್ಕೆ ಯಾವಾಗಲೂ ಆದ್ಯತೆ ನೀಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದರು.
ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜತೆ ಆನ್ಲೈನ್ ದ್ವಿಪಕ್ಷೀಯ ಮಾತುಕತೆ ನಡೆಸಿದ ಅವರು, ಪ್ರದೇಶದಲ್ಲಿನ ಎಲ್ಲರ ಭದ್ರತೆ ಮತ್ತು ಬೆಳವಣಿಗೆ (ಸಾಗರ್) ನೀತಿಯಲ್ಲಿ ಕೂಡ ಶ್ರೀಲಂಕಾಕ್ಕೆ ಮಹತ್ವ ನೀಡುತ್ತಿದ್ದೇವೆ. ಭಾರತ ಮತ್ತು ಶ್ರೀಲಂಕಾ ಸಂಬಂಧ ಸಾವಿರಾರು ವರ್ಷಗಳಷ್ಟು ಹಳೆಯದು ಎಂದು ಮೋದಿ ತಿಳಿಸಿದರು.
ಆನ್ಲೈನ್ ದ್ವಿಪಕ್ಷೀಯ ಸಮ್ಮೇಳನಕ್ಕೆ ನೀಡಿದ ಆಹ್ವಾನವನ್ನು ಸ್ವೀಕರಿಸಿದ್ದಕ್ಕಾಗಿ ರಾಜಪಕ್ಸ ಅವರಿಗೆ ಧನ್ಯವಾದ ಸಲ್ಲಿಸಿದ ಮೋದಿ, ಇತ್ತೀಚೆಗಷ್ಟೇ ಪ್ರಧಾನಿಯಾಗಿ ಆಯ್ಕೆಯಾದ ಅವರನ್ನು ಹಾಗೂ ಅವರ ಪಕ್ಷವನ್ನು ಅಭಿನಂದಿಸಿದರು.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿ ಪ್ರಕಾರ, ಭಾರತ ಮತ್ತು ಶ್ರೀಲಂಕಾ ನಡುವಿನ ಬುದ್ಧಿಸ್ಟ್ ಒಪ್ಪಂದವನ್ನು ಉತ್ತೇಜಿಸಲು 15 ಮಿಲಿಯನ್ ಡಾಲರ್ ನೆರವು ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದರು. ಉತ್ತರ ಪ್ರದೇಶದ ಕುಶಿನಗರಕ್ಕೆ ಮೊದಲ ಉದ್ಘಾಟನಾ ವಿಮಾನದಲ್ಲಿ ಬರಲಿರುವ ಶ್ರೀಲಂಕಾದ ಬೌದ್ಧ ಯಾತ್ರಾರ್ಥಿಗಳ ನಿಯೋಗಕ್ಕೆ ಭಾರತ ಸತ್ಕಾರ ನೀಡಲಿದೆ.
ಕೊರೊನಾ ವೈರಸ್ ಪಿಡುಗಿನ ಸಂದರ್ಭದಲ್ಲಿ ಇತರೆ ದೇಶಗಳ ಜತೆ ಸೇರಿ ಭಾರತ ಕಾರ್ಯನಿರ್ವಹಿಸಿದ ಬಗೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದ ಮಹಿಂದಾ ರಾಜಪಕ್ಸ, ಎಂಟಿ ನ್ಯೂ ಡೈಮಂಡ್ ಹಡಗಿಗೆ ಹೊತ್ತಿಕೊಂಡ ಬೆಂಕಿಯನ್ನು ನಂದಿಸುವ ವೇಳೆ ನಡೆದ ಕಾರ್ಯಾಚರಣೆಯು ಎರಡೂ ದೇಶಗಳ ನಡುವಿನ ಸಹಕಾರವನ್ನು ದೊಡ್ಡಮಟ್ಟಕ್ಕೆ ಬಲಪಡಿಸಲು ಅವಕಾಶ ನೀಡಿದೆ ಎಂದು ಹೇಳಿದರು.
ಇದು ಪ್ರಧಾನಿ ನರೇಂದ್ರ ಮೋದಿ ಅವರು ನೆರೆಯ ದೇಶವೊಂದರ ಜತೆ ನಡೆಸಿದ ಮೊದಲ ಆನ್ಲೈನ್ ಮಾತುಕತೆಯಾಗಿದೆ. ಆಗಸ್ಟ್ನಲ್ಲಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ರಾಜಪಕ್ಸ ವಿದೇಶವೊಂದರ ಜತೆ ನಡೆಸಿದ ಪ್ರಥಮ ರಾಜತಾಂತ್ರಿಕ ಸಭೆ ಇದಾಗಿದೆ.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications