ಅಗ್ನಿ - 5 ಖಂಡಾಂತರ ಕ್ಷಿಪಣಿಯ ಐದನೇ ಪರೀಕ್ಷೆಯೂ ಯಶಸ್ವಿ
ಬಾಲಸೋರ್ (ಒಡಿಶಾ), ಜನವರಿ 18: ಇಂದು ಭಾರತ ಅಗ್ನಿ ಸರಣಿಯ ಅತ್ಯಾಧುನಿಕ ಖಂಡಾಂತರ ಕ್ಷಿಪಣಿ ಅಗ್ನಿ-5ರ ಯಶಸ್ವೀ ಪರೀಕ್ಷೆ ನಡೆಸಿತು. ನೆಲದಿಂದ ನೆಲಕ್ಕೆ ಚಿಮ್ಮುವ, ಅಣ್ವಸ್ತ್ರ ಹೊತ್ತೊಯ್ಯಬಲ್ಲ ಅಗ್ನಿ-5 ಕ್ಷಿಪಣಿ 5,000 ಕಿಲೋಮೀಟರ್ ದೂರದವರೆಗೆ ದಾಳಿ ಮಾಡುವ ಸಾಮರ್ಥ್ಯ ಹೊಂದಿದೆ.
ಯಶಸ್ವೀ ಪರೀಕ್ಷೆಯೊಂದಿಗೆ ಮಿಸೈಲ್ ತಂತ್ರಜ್ಞಾನದಲ್ಲಿ ಭಾರತ ಹೊಸ ಎತ್ತರಕ್ಕೆ ಏರಿದ್ದಲ್ಲದೆ ದೇಶದ ರಕ್ಷಣಾ ಸಾಮರ್ಥ್ಯ ಮತ್ತಷ್ಟು ಹೆಚ್ಚಾಗಿದೆ.
ಈ ಪರೀಕ್ಷೆ 'ಸಂಪೂರ್ಣ ಯಶಸ್ವಿ'ಯಾಗಿದೆ ಎಂದು ಮೂಲಗಳು ಹೇಳಿವೆ. ರಾಡಾರ್, ಟ್ರಾಕಿಂಗ್ ಸಿಸ್ಟಂಗಳು, ರೇಂಜ್ ಸ್ಟೇಷನ್ ಮಾನಿಟರ್ ಗಳು ಮತ್ತು ಫ್ಲೈಟ್ ಪರ್ಫಾರ್ಮೆನ್ಸ್ ಗಳು ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿರುವುದನ್ನು ಖಚಿತಪಡಿಸಿವೆ.

ಅಬ್ದುಲ್ ಕಲಾಂ (ವೀಲರ್) ದ್ವೀಪದಿಂದ ಬೆಳಿಗ್ಗೆ 9.54ಕ್ಕೆ ಅಗ್ನಿ-5 ಕ್ಷಿಪಣಿ ನಭಕ್ಕೆ ಚಿಮ್ಮಿತು. ಸುಮಾರು 19 ನಿಮಿಷಗಳ ಕಾಲ ಪ್ರಯಾಣ ಮಾಡಿದ ಈ ಕ್ಷಿಪಣಿ 4,900 ಕಿಲೋಮೀಟರ್ ಅಂತರವನ್ನು ಕ್ರಮಿಸಿದೆ. ಈ ಹಿಂದೆ ನಾಲ್ಕು ಬಾರಿ ಕ್ಷಿಪಣಿಯನ್ನು ಪರೀಕ್ಷೆ ಒಳಪಡಿಸಲಾಗಿತ್ತು. ಮತ್ತು ಇದೇ ಮೊದಲ ಬಾರಿಗೆ ಬಳಕೆಗೆ ಸಾಧ್ಯವಾಗಿಸುವ ಕ್ಷಿಪಣಿಯ ಪರೀಕ್ಷೆ ನಡೆಸಲಾಗಿದ್ದು, ಪರೀಕ್ಷೆ ಯಶಸ್ವಿಯಾಗಿದೆ..
ಕ್ಷಿಪಣಿಯು ನಿರ್ದಿಷ್ಟ ಗುರಿಯನ್ನು ಕೆಲವೇ ಮೀಟರುಗಳ ಸ್ಪಷ್ಟತೆಯೊಂದಿಗೆ ಮುಟ್ಟಿದ್ದು ಮಿಸೈಲ್ ತನ್ನ ಕಾರ್ಯಕ್ಷಮತೆಯನ್ನು ಸಾಬೀತು ಮಾಡಿದೆ. ಮಿಸೈಲ್ ನಲ್ಲಿದ್ದ ಕಂಪ್ಯೂಟರ್ ಗಳು ಮಿಸೈಲನ್ನು ನಿರ್ದಿಷ್ಟ ಗುರಿ ಮುಟ್ಟಿಸುವಲ್ಲಿ ಸಹಾಯ ಮಾಡಿವೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
700 ಕೀಲೋಮೀಟರ್ ದೂರ ಕ್ರಮಿಸುವ ಸಾಮರ್ಥ್ಯ ಇರುವ ಅಗ್ನಿ -1, 2000 ಕಿ.ಮೀಯ ಅಗ್ನಿ - 2, 2500 ಕಿಮೀ ನಿಂದ 3500 ಕಿಮೀ ರೇಂಜ್ ನ ಅಗ್ನಿ-3 ಮತ್ತು 4 ಅಗ್ನಿ ಸರಣಿಯ ಇತರ ಕ್ಷಿಪಣಿಗಳಾಗಿವೆ.
ಏಪ್ರಿಲ್ 19, 2012ರಲ್ಲಿ ಮೊದಲ ಬಾರಿಗೆ ಅಗ್ನಿ 5ರ ಪರೀಕ್ಷೆ ನಡೆಸಲಾಗಿತ್ತು. ನಂತರ ಸೆಪ್ಟೆಂಬರ್ 15, 2013 ರಲ್ಲಿ ಎರಡನೇ ಬಾರಿಗೆ ಹಾಗೂ ಜನವರಿ 31, 2015ರಲ್ಲಿ ಮೂರನೇ ಬಾರಿಗೆ ಹಾಗೂ ನಾಲ್ಕನೇ ಬಾರಿಗೆ ಡಿಸೆಂಬರ್ 26, 2016ರಲ್ಲಿ ಅಗ್ನಿ-5ರ ಪರೀಕ್ಷೆ ನಡೆಸಲಾಗಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications