ಸುಧಾರಿತ ಸೂಪರ್ಸಾನಿಕ್ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಯಶಸ್ವಿ: DRDO
ನವದೆಹಲಿ, ಜನವರಿ 20: ಒಡಿಶಾ ಕರಾವಳಿಯಲ್ಲಿ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಅನ್ನು ಇಂದು ಯಶಸ್ವಿಯಾಗಿ ಪರೀಕ್ಷಿಸಲಾಗಿದೆ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಮೂಲಗಳು ತಿಳಿಸಿವೆ. ನಿಯಂತ್ರಣ ವ್ಯವಸ್ಥೆ ಸೇರಿದಂತೆ ಹೊಸ ತಂತ್ರಜ್ಞಾನಗಳೊಂದಿಗೆ, ಕ್ಷಿಪಣಿಯನ್ನು ಚಂಡೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ (ಐಟಿಆರ್) ಉಡಾವಣಾ ಪ್ಯಾಡ್-III ನಿಂದ ಬೆಳಗ್ಗೆ 10.45 ರ ಸುಮಾರಿಗೆ ಪರೀಕ್ಷಾರ್ಥ ಉಡಾವಣೆ ಮಾಡಲಾಗಿದೆ.
ಡಿಆರ್ಡಿಒ ಸಿದ್ಧಪಡಿಸಿರುವ ಬ್ರಹ್ಮೋಸ್ ಕ್ಷಿಪಣಿಯನ್ನು ಭೂಮಿ, ಆಕಾಶ ಮತ್ತು ಸಮುದ್ರದಿಂದಲೂ ಉಡಾಯಿಸಬಹುದಾಗಿದೆ. ಬ್ರಹ್ಮೋಸ್ ವಿಶ್ವದ ಶಬ್ದಾತೀತ ವೇಗದ ಕ್ಷಿಪಣಿಗಳಲ್ಲಿ ಒಂದಾಗಿದೆ. ಈಗಾಗಲೇ ಈ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ.
#WATCH | Today India successfully testfired a new version of the BrahMos supersonic cruise missile off the coast of Odisha in Balasore. The missile was equipped with new technological developments which were successfully proven
— ANI (@ANI) January 20, 2022
(Video source: DRDO) pic.twitter.com/VdGSYW10W5
2014ರಲ್ಲಿ ಸಮುದ್ರದಿಂದಲೂ ಉಡಾವಣೆ ಮಾಡಬಲ್ಲ ಬ್ರಹ್ಮೋಸ್ ಕ್ಷಿಪಣಿ ನೌಕಾಪಡೆಗೆ ಸೇರ್ಪಡೆಗೊಂಡಿತ್ತು. ರಷ್ಯಾದ ಪಿ-800 ಕ್ಷಿಪಣಿ ಮಾದರಿಯಲ್ಲಿಯೇ ಬ್ರಹ್ಮೋಸ್ ತಯಾರು ಮಾಡಲಾಗಿದೆ.
ಭಾರತ ಮತ್ತು ರಷ್ಯಾದ ಎರಡು ನದಿಗಳ ಹೆಸರನ್ನು ಸೇರಿಸಿ ಕ್ಷಿಪಣಿಗೆ ಬ್ರಹ್ಮೋಸ್ ಎಂದು ನಾಮಕರಣ ಮಾಡಲಾಗಿದೆ. ಭೂಮಿಯಿಂದ ಮತ್ತು ಸಮುದ್ರದಿಂದ ಉಡಾವಣೆಗೊಳ್ಳ ಬಲ್ಲ ಬ್ರಹ್ಮೋಸ್ ಕ್ಷಿಪಣಿ ಪರೀಕ್ಷೆ ಈಗಾಗಲೇ ಯಶಸ್ವಿಯಾಗಿದೆ. ಈ ಕ್ಷಿಪಣಿ ಮ್ಯಾಚ್ 4 ವೇಗದಲ್ಲಿ ಸಂಚಾರ ನಡೆಸುತ್ತಿತ್ತು. ಈಗ ಅದನ್ನು ಮ್ಯಾಚ್ 5.0 ವೇಗಕ್ಕೆ ಅಭಿವೃದ್ಧಿಗೊಳಿಸಲಾಗಿದೆ.

ಬ್ರಹ್ಮೋಸ್ ಸೂಪರ್ ಸಾನಿಕ ಕ್ರೂಸ್ ಕ್ಷಿಪಣಿಯನ್ನು ಸಬ್ ಮರೀನ್, ಹಡಗು, ಏರ್ ಕ್ರಾಫ್ಟ್ ಅಥವಾ ಭೂಮಿಯಿಂದ ಉಡಾಯಿಸಿದರೆ 400 ಹೆಚ್ಚು ಕಿಮೀ ದೂರ ಸಾಗುವ ಸಾಮರ್ಥ್ಯ ಹೊಂದಿದೆ.
Defence Minister Rajnath Singh complimented Brahmos, DRDO teams & industry for successful flight test. Dr G Satheesh Reddy, Secy Dept of Defence R&D & Chairman DRDO appreciated scientists & engineers for continuously putting efforts to maximize the weapon systems efficiency pic.twitter.com/WjxWzFRY47
— ANI (@ANI) January 20, 2022
ಈ ಸಾಮರ್ಥ್ಯವನ್ನು 800 ಕಿ.ಮೀಗೆ ಹೆಚ್ಚಿಸಿ ಸರಣಿ ಉಡಾವಣಾ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಮುನ್ನೂರು ಕೆಜಿ ತೂಕದ ಸಿಡಿತಲೆಗಳನ್ನು ಹೊತ್ತೊಯ್ದು ಭೂಮಿ ಅಥವಾ ಸಮುದ್ರದಲ್ಲಿರುವ ಗುರಿಯನ್ನು ನಾಶಪಡಿಸುವ ಸಾಮರ್ಥ್ಯ ಹೊಂದಿದೆ.ಇದನ್ನು ಭಾರತ ಹಾಗೂ ರಷ್ಯಾ ಜೊತೆಯಾಗಿ ಸೇರಿ ಅಭಿವೃದ್ಧಿಪಡಿಸಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications