ಡಿಆರ್ ಡಿಒದಿಂದ ಸಾಧನೆ, ಪ್ರತಿಬಂಧಕ ಕ್ಷಿಪಣಿ ಪರೀಕ್ಷೆಯಲ್ಲಿ ಪಾಸ್
ಭಾರತ ಮತ್ತೊಂದು ಕ್ಷಿಪಣಿ ಪರೀಕ್ಷೆಯನ್ನು ಬುಧವಾರದಂದು ಯಶಸ್ವಿಯಾಗಿ ನೆರವೇರಿಸಿದೆ. ಆಕಾಶದಲ್ಲೇ ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸ್ವದೇಶಿ ನಿರ್ಮಿತ ಆತ್ಯಾಧುನಿಕ ತಂತ್ರಜ್ಞಾನದ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನು ಡಿಆರ್ಡಿಒ ಕೈಗೊಂಡಿತ್ತು.
ಬಾಲಸೋರ್(ಒಡಿಶಾ), ಮಾರ್ಚ್ 01: ಭಾರತ ಮತ್ತೊಂದು ಕ್ಷಿಪಣಿ ಪರೀಕ್ಷೆಯನ್ನು ಬುಧವಾರದಂದು ಯಶಸ್ವಿಯಾಗಿ ನೆರವೇರಿಸಿದೆ. ಆಕಾಶದಲ್ಲೇ ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸ್ವದೇಶಿ ನಿರ್ಮಿತ ಆತ್ಯಾಧುನಿಕ ತಂತ್ರಜ್ಞಾನದ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನು ಡಿಆರ್ಡಿಒ ಕೈಗೊಂಡಿತ್ತು. ಸುಮಾರು 20ದಿನಗಳ ಅವಧಿಯಲ್ಲಿ ಎರಡು ಬಾರಿ ಪರೀಕ್ಷೆಯಲ್ಲೂ ಕ್ಷಿಪಣಿ ಪಾಸಾಗಿದೆ.
ಒಡಿಶಾದ ಬಾಲಸೋರ್ ಬಳಿ ಇರುವ ಅಬ್ದುಲ್ ಕಲಾಂ ದ್ವೀಪದಲ್ಲಿ ವಾಯು ಗಡಿ ರಕ್ಷಣಾ ವ್ಯವಸ್ಥೆಯ ಭಾಗವಾದ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನು ಬುಧವಾರ ಬೆಳಗ್ಗೆ ಯಶಸ್ವಿಯಾಗಿ ನಡೆಸಲಾಗಿದೆ. ಈ ಮೊದಲು ಫೆಬ್ರವರಿ 11 ರಂದು ಪ್ರತಿಬಂಧಕ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿತ್ತು.

ಚಾಂಡಿಪುರ್ ಉಡಾವಣಾ ಕೇಂದ್ರದಿಂದ ಉಡಾಯಿಸಲಾಗಿದ್ದ ಪೃಥ್ವಿ ಕ್ಷಿಪಣಿಯನ್ನು 4 ನಿಮಿಷಗಳ ನಂತರ ಆಕಾಶದಲ್ಲೇ ಪ್ರತಿಬಂಧಕ ಕ್ಷಿಪಣಿ ಹೊಡೆದುರುಳಿಸಿತು.
ಪ್ರತಿಬಂಧಕ ಕ್ಷಿಪಣಿಯಲ್ಲಿ ಅತ್ಯಾಧುನಿಕ ಕಂಪ್ಯೂಟರ್, ಎಲೆಕ್ಟ್ರೋ ಮ್ಯಾಗ್ನೆಟಿಕ್ ಆಕ್ಟಿವೇಟರ್, ಜಿಪಿಎಸ್ ಉಪಕರಣ ಒಳಗೊಂಡಿರುತ್ತದೆ. ಇದು 7.5 ಮೀಟರ್ ಉದ್ದ ಇದ್ದು, 30 ಕಿ.ಮೀ. ಎತ್ತರದಲ್ಲೇ ಎದುರಾಳಿಗೆ ಸೇರಿದ ಕ್ಷಿಪಣಿಯನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ.
ಭಾರತದ ಬಳಿ ಖಂಡಾಂತರ ಕ್ಷಿಪಣಿಯ ದಾಳಿಯನ್ನು ಗುರುತಿಸಲು 2 ಹಂತದ ರಕ್ಷಣಾ ವ್ಯವಸ್ಥೆ ಇದೆ. ಇದು ಭೂಮಿಯ ವಾತಾವರಣದ ಹೊರಭಾಗ ಮತ್ತು ಭೂಮಿಯ ವಾತಾವರಣದ ಒಳಭಾಗದಲ್ಲಿ ಆಗಮಿಸುವ ಕ್ಷಿಪಣಿಯನ್ನು ಗುರುತಿಸುತ್ತದೆ. ಸುಧಾರಿತ ವಾಯು ಗಡಿ ರಕ್ಷಣಾ ವ್ಯವಸ್ಥೆಯ ಯಶಸ್ವಿ ಪರೀಕ್ಷೆಯ ನಂತರ ಈ ವ್ಯವಸ್ಥೆ ಹೊಂದಿದ ಅಮೆರಿಕ, ರಷ್ಯಾ ಮತ್ತು ಇಸ್ರೇಲ್ ರಾಷ್ಟ್ರಗಳೊಂದಿಗೆ ಭಾರತ ಗುರುತಿಸಲಿಕೊಳ್ಳಲಿದೆ ಎಂದು ಡಿಆರ್ಡಿಒ ಅಧಿಕಾರಿಗಳು ತಿಳಿಸಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications