ಡಿಆರ್ ಡಿಒದಿಂದ ಸಾಧನೆ, ಪ್ರತಿಬಂಧಕ ಕ್ಷಿಪಣಿ ಪರೀಕ್ಷೆಯಲ್ಲಿ ಪಾಸ್
ಭಾರತ ಮತ್ತೊಂದು ಕ್ಷಿಪಣಿ ಪರೀಕ್ಷೆಯನ್ನು ಬುಧವಾರದಂದು ಯಶಸ್ವಿಯಾಗಿ ನೆರವೇರಿಸಿದೆ. ಆಕಾಶದಲ್ಲೇ ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸ್ವದೇಶಿ ನಿರ್ಮಿತ ಆತ್ಯಾಧುನಿಕ ತಂತ್ರಜ್ಞಾನದ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನು ಡಿಆರ್ಡಿಒ ಕೈಗೊಂಡಿತ್ತು.
ಬಾಲಸೋರ್(ಒಡಿಶಾ), ಮಾರ್ಚ್ 01: ಭಾರತ ಮತ್ತೊಂದು ಕ್ಷಿಪಣಿ ಪರೀಕ್ಷೆಯನ್ನು ಬುಧವಾರದಂದು ಯಶಸ್ವಿಯಾಗಿ ನೆರವೇರಿಸಿದೆ. ಆಕಾಶದಲ್ಲೇ ಹೊಡೆದುರುಳಿಸಬಲ್ಲ ಸಾಮರ್ಥ್ಯದ ಸ್ವದೇಶಿ ನಿರ್ಮಿತ ಆತ್ಯಾಧುನಿಕ ತಂತ್ರಜ್ಞಾನದ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನು ಡಿಆರ್ಡಿಒ ಕೈಗೊಂಡಿತ್ತು. ಸುಮಾರು 20ದಿನಗಳ ಅವಧಿಯಲ್ಲಿ ಎರಡು ಬಾರಿ ಪರೀಕ್ಷೆಯಲ್ಲೂ ಕ್ಷಿಪಣಿ ಪಾಸಾಗಿದೆ.
ಒಡಿಶಾದ ಬಾಲಸೋರ್ ಬಳಿ ಇರುವ ಅಬ್ದುಲ್ ಕಲಾಂ ದ್ವೀಪದಲ್ಲಿ ವಾಯು ಗಡಿ ರಕ್ಷಣಾ ವ್ಯವಸ್ಥೆಯ ಭಾಗವಾದ ಪ್ರತಿಬಂಧಕ ಕ್ಷಿಪಣಿಯ ಪರೀಕ್ಷೆಯನ್ನು ಬುಧವಾರ ಬೆಳಗ್ಗೆ ಯಶಸ್ವಿಯಾಗಿ ನಡೆಸಲಾಗಿದೆ. ಈ ಮೊದಲು ಫೆಬ್ರವರಿ 11 ರಂದು ಪ್ರತಿಬಂಧಕ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಗಿತ್ತು.

ಚಾಂಡಿಪುರ್ ಉಡಾವಣಾ ಕೇಂದ್ರದಿಂದ ಉಡಾಯಿಸಲಾಗಿದ್ದ ಪೃಥ್ವಿ ಕ್ಷಿಪಣಿಯನ್ನು 4 ನಿಮಿಷಗಳ ನಂತರ ಆಕಾಶದಲ್ಲೇ ಪ್ರತಿಬಂಧಕ ಕ್ಷಿಪಣಿ ಹೊಡೆದುರುಳಿಸಿತು.
ಪ್ರತಿಬಂಧಕ ಕ್ಷಿಪಣಿಯಲ್ಲಿ ಅತ್ಯಾಧುನಿಕ ಕಂಪ್ಯೂಟರ್, ಎಲೆಕ್ಟ್ರೋ ಮ್ಯಾಗ್ನೆಟಿಕ್ ಆಕ್ಟಿವೇಟರ್, ಜಿಪಿಎಸ್ ಉಪಕರಣ ಒಳಗೊಂಡಿರುತ್ತದೆ. ಇದು 7.5 ಮೀಟರ್ ಉದ್ದ ಇದ್ದು, 30 ಕಿ.ಮೀ. ಎತ್ತರದಲ್ಲೇ ಎದುರಾಳಿಗೆ ಸೇರಿದ ಕ್ಷಿಪಣಿಯನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ.
ಭಾರತದ ಬಳಿ ಖಂಡಾಂತರ ಕ್ಷಿಪಣಿಯ ದಾಳಿಯನ್ನು ಗುರುತಿಸಲು 2 ಹಂತದ ರಕ್ಷಣಾ ವ್ಯವಸ್ಥೆ ಇದೆ. ಇದು ಭೂಮಿಯ ವಾತಾವರಣದ ಹೊರಭಾಗ ಮತ್ತು ಭೂಮಿಯ ವಾತಾವರಣದ ಒಳಭಾಗದಲ್ಲಿ ಆಗಮಿಸುವ ಕ್ಷಿಪಣಿಯನ್ನು ಗುರುತಿಸುತ್ತದೆ. ಸುಧಾರಿತ ವಾಯು ಗಡಿ ರಕ್ಷಣಾ ವ್ಯವಸ್ಥೆಯ ಯಶಸ್ವಿ ಪರೀಕ್ಷೆಯ ನಂತರ ಈ ವ್ಯವಸ್ಥೆ ಹೊಂದಿದ ಅಮೆರಿಕ, ರಷ್ಯಾ ಮತ್ತು ಇಸ್ರೇಲ್ ರಾಷ್ಟ್ರಗಳೊಂದಿಗೆ ಭಾರತ ಗುರುತಿಸಲಿಕೊಳ್ಳಲಿದೆ ಎಂದು ಡಿಆರ್ಡಿಒ ಅಧಿಕಾರಿಗಳು ತಿಳಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications