Mpox in India: ಭಾರತದಲ್ಲಿ ಶಂಕಿತ ಎಂಪಾಕ್ಸ್ ಪ್ರಕರಣ ಪತ್ತೆ; ರೋಗಿಯ ಸ್ಥಿತಿ ಹೇಗಿದೆ?
ಭಾರತದಲ್ಲಿ ಎಂಪಾಕ್ಸ್ ಶಂಕಿತ ಪ್ರಕರಣ ಪತ್ತೆಯಾಗಿದೆ. ಹಲವು ದೇಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿರುವ ಆತಂಕದ ನಡುವೆ ಭಾರತದಲ್ಲಿ ಕೂಡ ಸೋಂಕಿತ ಪ್ರಕರಣ ಪತ್ತೆಯಾಗಿದೆ. ವಿದೇಶದಿಂದ ವಾಪಸಾಗಿರುವ ಯುವಕನಲ್ಲಿ ಎಂಪಾಕ್ಸ್ನ ಲಕ್ಷಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ರೋಗಿಯನ್ನು ಗೊತ್ತುಪಡಿಸಿದ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದೆ.
ರೋಗಿಗೆ ಎಂಪಾಕ್ಸ್ ಸೋಂಕು ಇದೆಯೇ ಎಂದು ದೃಢಪಡಿಸಿಕೊಳ್ಳಲು ವಿವಿಧ ಮಾದರಿಗಳನ್ನು ತೆಗೆದುಕೊಂಡಿದ್ದು, ಪರೀಕ್ಷೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಎಂಪಾಕ್ಸ್ ಸೋಂಕು ಇರುವ ಬಗ್ಗೆ ಖಚಿತಪಡಿಸಲು ವಿವಿಧ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪ್ರೋಟೊಕಾಲ್ಗೆ ಅನುಗುಣವಾಗಿಯೇ ಪ್ರಕರಣವನ್ನು ನಿರ್ವಹಣೆ ಮಾಡಲಾಗುತ್ತಿದೆ. ಆತನ ಸಂಪರ್ಕಕ್ಕೆ ಯಾರಾದರೂ ಬಂದಿದ್ದಾರ ಎನ್ನುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ನಡೆಸಿದ ಹಿಂದಿನ ಅಪಾಯದ ಬಗ್ಗೆ ಮೌಲ್ಯಮಾಪನ ಮಾಡಿದ್ದು, ಸದ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ. ಎಂಪಾಕ್ಸ್ ಸೋಂಕು ನಿಯಂತ್ರಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ, ಸೋಂಕು ನಿಯಂತ್ರಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ.
ಜಾಗತಿಕ ತುರ್ತುಸ್ಥಿತಿ ಘೋಷಣೆ
ಆಫ್ರಿಕಾದ 12 ದೇಶಗಳಲ್ಲಿ ಎಂಪಾಕ್ಸ್ ಪ್ರಕರಣ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ (WHO) ಜಾಗತಿಕ ತುರ್ತುಸ್ಥಿತಿ ಎಂದು ಘೋಷಿಸಿದ ಮೂರು ವಾರಗಳ ಬಳಿಕ ಭಾರತದಲ್ಲಿ ಮೊದಲ ಎಂಪಾಕ್ಸ್ ಪ್ರಕರಣ ಪತ್ತೆಯಾಗಿದೆ.
ಆಫ್ರಿಕಾದ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳು ಮತ್ತು ವಿಶ್ವ ಆರೋಗ್ಯ ಸಂಸ್ಥೆ ಶುಕ್ರವಾರ ಎಂಪಾಕ್ಸ್ ತಡೆಗಟ್ಟಲು ಯೋಜನೆಯನ್ನು ಆರಂಭಿಸಿದೆ. ಇದಕ್ಕಾಗಿ ಆರು ತಿಂಗಳಿಗೆ $600 ಮಿಲಿಯನ್ ಹಣ ಮೀಸಲಿಟ್ಟಿದ್ದು, ಸೋಂಕು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದೆ.
ಗುರುವಾರ ಕಾಂಗೋ ದೇಶಕ್ಕೆ ಮೊದಲ ಬ್ಯಾಚ್ನ 100,000 JYNNEOS ಲಸಿಕೆಯನ್ನು ಪೂರೈಕೆ ಮಾಡಲಾಗಿದೆ. ಯೂರೋಪಿಯನ್ ಒಕ್ಕೂಟ ಆರೋಗ್ಯ ತುರ್ತು ಏಜೆನ್ಸಿ HERA ಮೂಲಕ ಪೂರೈಕೆ ಮಾಡಲಾಗಿದೆ.
ಕಾಂಗೋದಲ್ಲಿ 3 ಮಿಲಿಯನ್ ಲಸಿಕೆಗಳ ಪೂರೈಸಬೇಕಾಗಿದ್ದು ಈಗ ಕೇವಲ 1 ಲಕ್ಷ ಲಸಿಕೆಗಳನ್ನು ಮಾತ್ರ ಪೂರೈಸಲಾಗಿದೆ. ಆರಂಭಿಕ ಹಂತದಲ್ಲಿ ಸೋಂಕಿತರ ಜೊತೆಗೆ ಸಂಪರ್ಕದಲ್ಲಿರುವ ವಯಸ್ಕರು ಮತ್ತು ಲೈಂಗಿಕ ಕಾರ್ಯಕರ್ತರಿಗೆ ಲಸಿಕೆಯನ್ನು ನೀಡಲಾಗುತ್ತದೆ ಎಂದು ಹೇಳಲಾಗಿದೆ. ಆದರೂ ಇನ್ನೂ ಲಸಿಕೆಯನ್ನು ನೀಡುವ ದಿನಾಂಕದ ಬಗ್ಗೆ ಅಸ್ಪಷ್ಟವಾಗಿದೆ. ತಿಂಗಳ ಅಂತ್ಯದ ವೇಳೆಗೆ ಈ ಬಗ್ಗೆ ನಿರ್ಧಾರ ಮಾಡುವ ಸಾಧ್ಯತೆ ಇದೆ.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications