ಭಾರತೀಯರ ಸುರಕ್ಷತೆ ಬಗ್ಗೆ ರಷ್ಯಾ-ಉಕ್ರೇನ್ ಜೊತೆ ಮಾತುಕತೆ

ನವದೆಹಲಿ, ಮಾರ್ಚ್ 1: ಪೂರ್ವ ಉಕ್ರೇನ್ ಭಾಗದ ಖಾರ್ಕಿವ್ ನಗರದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ಭಾರತದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವುದರ ಬಗ್ಗೆ ವಿದೇಶಾಂಗ ಸಚಿವಾಲಯವು ಮಂಗಳವಾರ ದೃಢಪಡಿಸಿದೆ.

"ಇಂದು ಬೆಳಿಗ್ಗೆ ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬ ಶೆಲ್ ದಾಳಿಯಲ್ಲಿ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ ಎಂದು ಗಾಢವಾದ ದುಃಖದೊಂದಿಗೆ ನಾವು ಖಚಿತಪಡಿಸುತ್ತೇವೆ. ಸಚಿವಾಲಯ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ನಾವು ಕುಟುಂಬಕ್ಕೆ ನಮ್ಮ ಆಳವಾದ ಸಂತಾಪವನ್ನು ತಿಳಿಸುತ್ತೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಪೂರ್ವ ಮತ್ತು ದಕ್ಷಿಣ ಉಕ್ರೇನ್‌ನಲ್ಲಿ ಸಂಘರ್ಷ ವಲಯಗಳಲ್ಲಿ ಸಿಲುಕಿರುವ ಭಾರತೀಯ ಪ್ರಜೆಗಳ ಸುರಕ್ಷತೆ ಮತ್ತು ಸುರಕ್ಷಿತ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ಭಾರತವು ರಷ್ಯಾ ಮತ್ತು ಉಕ್ರೇನ್‌ಗೆ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ. ಭಾನುವಾರ ರಷ್ಯಾ ಮತ್ತು ಉಕ್ರೇನಿಯನ್ ರಾಯಭಾರಿಗಳೊಂದಿಗಿನ ಪ್ರತ್ಯೇಕ ಸಭೆಗಳಲ್ಲಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಈ ಬೇಡಿಕೆ ಬಗ್ಗೆ ಮೊದಲು ಉಲ್ಲೇಖಿಸಿದ್ದರು. ರಷ್ಯಾ ಮತ್ತು ಉಕ್ರೇನ್‌ನಲ್ಲಿರುವ ನಮ್ಮ ರಾಯಭಾರಿಗಳಿಂದ ಇದೇ ರೀತಿಯ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ನವೀನ್ ಸಾವು

ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ನವೀನ್ ಸಾವು

ಕರ್ನಾಟಕದ ಹಾವೇರಿ ಜಿಲ್ಲೆಯ ನವೀನ್ ಕಳೆದ ನಾಲ್ಕು ವರ್ಷಗಳಿಂದ ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ವಾಸವಾಗಿದ್ದರು. ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ನವೀನ್, ಮಂಗಳವಾರ ಬೆಳಗ್ಗೆ ಕರೆನ್ಸಿ ಬದಲಾಯಿಸಿಕೊಂಡು ಬರುವುದಕ್ಕೆ ತೆರಳಿದ ಸಂದರ್ಭದಲ್ಲಿ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ಅವರ ಜೊತೆಗಿದ್ದ ವಿದ್ಯಾರ್ಥಿಗಳು ವಿವರಿಸಿದ್ದಾರೆ. ಹಲವು ಭಾರತೀಯ ವಿದ್ಯಾರ್ಥಿಗಳನ್ನು ಹೊಂದಿರುವ ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿ (ಕೆಎನ್‌ಎಂಯು) ಬಳಿಯ ಪ್ರದೇಶ ಸೇರಿದಂತೆ ಖಾರ್ಕಿವ್‌ನ ವಿವಿಧ ಸ್ಥಳಗಳ ಮೇಲೆ ಶೆಲ್ ದಾಳಿಯ ಕುರಿತು ಹಲವು ವಿಡಿಯೋಗಳು ಸಾಮಾಜಿಕ ಮಾಧ್ಯಮ ಹರಿದಾಡುತ್ತಿವೆ.

ಉಕ್ರೇನ್‌ನ ಪೂರ್ವ ನಗರಗಳಲ್ಲಿ ಸಂಚಾರ ಅಸ್ತವ್ಯಸ್ತ

ಉಕ್ರೇನ್‌ನ ಪೂರ್ವ ನಗರಗಳಲ್ಲಿ ಸಂಚಾರ ಅಸ್ತವ್ಯಸ್ತ

ಖಾರ್ಕಿವ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಒಟ್ಟು ಸಂಖ್ಯೆಯ 2,000 ರಿಂದ 4,000 ವರೆಗಿದೆ. ಫೆಬ್ರವರಿ 24ರಂದು ದೇಶದ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಭಾರತೀಯ ಮತ್ತು ಇತರ ವಿದೇಶಿಯರು ಪೂರ್ವ ಉಕ್ರೇನ್‌ನಲ್ಲಿ ಖಾರ್ಕಿವ್ ಮತ್ತು ಸುಮಿ ಸೇರಿದಂತೆ ಹೆಚ್ಚಿನ ನಗರಗಳನ್ನು ತೊರೆಯಲು ಸಾಧ್ಯವಾಗುತ್ತಿಲ್ಲ. ಪೂರ್ವ ಪ್ರದೇಶದಲ್ಲಿ ರೈಲು ಮತ್ತು ಸಾರ್ವಜನಿಕ ಸಾರಿಗೆ ಸೇವೆಗಳು ಸಹ ಅಸ್ತವ್ಯಸ್ತಗೊಂಡಿವೆ.

ರಷ್ಯಾ ಮತ್ತು ಉಕ್ರೇನ್ ರಾಯಭಾರಿಗೆ ಮನವಿ

ರಷ್ಯಾ ಮತ್ತು ಉಕ್ರೇನ್ ರಾಯಭಾರಿಗೆ ಮನವಿ

"ಖಾರ್ಕಿವ್ ಮತ್ತು ಸಂಘರ್ಷ ವಲಯಗಳ ಇತರ ನಗರಗಳಿಂದ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ಪ್ರಜೆಗಳಿಗೆ ಸುರಕ್ಷಿತ ಮಾರ್ಗವನ್ನು ಕಲ್ಪಿಸುವಂತೆ ನಾವು ಈಗಾಗಲೇ ರಷ್ಯಾ ಮತ್ತು ಉಕ್ರೇನಿಯನ್ ರಾಯಭಾರ ಕಚೇರಿಗೆ ಮನವಿ ಮಾಡಿಕೊಂಡಿದ್ದೇವೆ. "ಫೆಬ್ರವರಿ 24ರಂದು ಸಂಘರ್ಷದ ಆರಂಭದಿಂದಲೂ ಈ ಬೇಡಿಕೆಯನ್ನು ರಷ್ಯಾ ಮತ್ತು ಉಕ್ರೇನ್‌ ಎದುರಿಗೆ ಇಡಲಾಗುತ್ತಿದೆ. ಖಾರ್ಕಿವ್ ಮತ್ತು ಹತ್ತಿರದ ನಗರಗಳಿಂದ ಸ್ಥಳಾಂತರಿಸಲು ಅನುಕೂಲವಾಗುವಂತೆ ಉಕ್ರೇನ್ ಗಡಿಗೆ ಸಮೀಪವಿರುವ ರಷ್ಯಾದ ನಗರವಾದ ಬೆಲ್ಗೊರೊಡ್‌ನಲ್ಲಿ ಭಾರತೀಯ ತಂಡವನ್ನು ಇರಿಸಲಾಗಿದ್ದರೂ, ಆ ಪ್ರದೇಶದಲ್ಲಿನ ಸಂಘರ್ಷದಿಂದ ತೀವ್ರ ಅಡಚಣೆಯಾಗುತ್ತಿದೆ ಎಂದು ಹೇಳುತ್ತಿದ್ದಾರೆ.

ಭಾರತೀಯರು ತುರ್ತಾಗಿ ನಗರವನ್ನು ತೊರೆಯಲು ಸೂಚನೆ

ಭಾರತೀಯರು ತುರ್ತಾಗಿ ನಗರವನ್ನು ತೊರೆಯಲು ಸೂಚನೆ

ಕೀವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಉಕ್ರೇನಿಯನ್ ರಾಜಧಾನಿಯಲ್ಲಿರುವ ಎಲ್ಲಾ ಭಾರತೀಯರಿಗೆ 64 ಕಿಮೀ ಉದ್ದದ ರಷ್ಯಾದ ಮಿಲಿಟರಿ ಬೆಂಗಾವಲು ಪಡೆ ಈ ಪ್ರದೇಶಕ್ಕೆ ಚಲಿಸುವ ವರದಿಗಳ ಹಿನ್ನೆಲೆ ರೈಲು ಅಥವಾ ಇನ್ನಾವುದೇ ಮಾರ್ಗದಲ್ಲಿ "ತುರ್ತಾಗಿ" ನಗರವನ್ನು ತೊರೆಯುವಂತೆ ಸಲಹೆ ನೀಡಿತು. "ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೀವ್ ತೊರೆಯುವಂತೆ ಸೂಚಿಸಲಾಗಿದೆ. ಮೇಲಾಗಿ ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ, "ಎಂಬಸಿ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ಸಂಕ್ಷಿಪ್ತ ಸಲಹೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+