2 ವರ್ಷಗಳಲ್ಲಿ ಹೆದ್ದಾರಿಗಳು ಟೋಲ್ ಪ್ಲಾಜಾ ಮುಕ್ತ: ಜಿಪಿಎಸ್ ವ್ಯವಸ್ಥೆಗೆ ಮುಂದಾದ ಸರ್ಕಾರ
ನವದೆಹಲಿ, ಡಿಸೆಂಬರ್ 18: ಭಾರತವು ಇನ್ನು ಎರಡು ವರ್ಷಗಳ ಒಳಗೆ ಟೋಲ್ಬೂತ್ ಮುಕ್ತವಾಗಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹೊಸ ಜಿಪಿಎಸ್ ಆಧಾರಿಯ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಅಂತಿಮಗೊಳಿಸಿದ್ದು, ದೇಶದಲ್ಲಿ ಇನ್ನು ಮುಂದೆ ಸುಂಕ ಸಂಗ್ರಹ ಕೇಂದ್ರಗಳ ಅವಶ್ಯಕತೆ ಬರುವುದಿಲ್ಲ.
ದೇಶದಲ್ಲಿ ವಾಹನಗಳ ತಡೆರಹಿತ ಸಂಚಾರಕ್ಕೆ ಅನುಕೂಲವಾಗುವಂತೆ ಹೊಸ ವ್ಯವಸ್ಥೆ ನೆರವಾಗಲಿದೆ. ವಾಹನಗಳ ಚಲನೆ ಆಧಾರದಲ್ಲಿ ಸುಂಕದ ಮೊತ್ತವು ನೇರವಾಗಿ ವಾಹನ ಮಾಲೀಕರ ಬ್ಯಾಂಕ್ ಖಾತೆಯಿಂದ ಕಡಿತಗೊಳ್ಳಲಿದೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಅಸೋಚಾಮ್ ಫೌಂಡೇಷನ್ ವೀಕ್ನಲ್ಲಿ ಮಾತನಾಡಿದ ಗಡ್ಕರಿ, ಮುಂಬರುವ ಟೋಲ್ ಸಂಗ್ರಹವು ಜಿಪಿಎಸ್ ಆಧಾರಿತವಾಗಿರಲಿದೆ ಎಂದು ತಿಳಿಸಿದ್ದಾರೆ. ರಷ್ಯಾ ಸರ್ಕಾರದ ಸಹಕಾರದೊಂದಿಗೆ ಈ ವ್ಯವಸ್ಥೆಯನ್ನು ಅಳವಡಿಸಲಿದ್ದು, ಮುಂದಿನ ಎರಡು ವರ್ಷಗಳ ಒಳಗೆ ಭಾರತವು ಟೋಲ್ ಪ್ಲಾಜಾ ಮುಕ್ತವಾಗಲಿದೆ ಎಂದಿದ್ದಾರೆ. ಮುಂದೆ ಓದಿ.

ನಿರ್ವಹಣೆ ವೆಚ್ಚ ಇಳಿಕೆ
ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯು ಸಂಚಾರ ದಟ್ಟಣೆಯನ್ನು ತಡೆಯುವುದು ಮಾತ್ರವಲ್ಲದೆ, ದೇಶದೆಲ್ಲೆಡೆ ಅಂತಹ ಟೋಲ್ ಪ್ಲಾಜಾಗಳ ನಿರ್ವಹಣೆಗೆ ವ್ಯಯಿಸುವ ವೆಚ್ಚವನ್ನು ಕೂಡ ಉಳಿಸಲಿದೆ. ಜತೆಗೆ ಸರ್ಕಾರದ ಸುಂಕ ಸಂಗ್ರಹ ಆದಾಯವನ್ನು ಗಣನೀಯವಾಗಿ ಹೆಚ್ಚಿಸಲಿದೆ.

ಹಳೆ ವಾಹನಗಳಿಗೂ ಜಿಪಿಎಸ್ ಅಳವಡಿಕೆ
ಇತ್ತೀಚೆಗೆ ತಯಾರಾಗುತ್ತಿರುವ ಎಲ್ಲಾ ವಾಣಿಜ್ಯ ವಾಹನಗಳು ವೆಹಿಕಲ್ ಟ್ರ್ಯಾಕಿಂಗ್ ವ್ಯವಸ್ಥೆಗಳನ್ನು ಒಳಗೊಳ್ಳುತ್ತಿವೆ. ಈಗ ಎಲ್ಲ ಹಳೆಯ ವಾಹನಗಳಿಗೂ ಜಿಪಿಎಸ್ ತಂತ್ರಜ್ಞಾನವನ್ನು ಅಳವಡಿಸುವ ವ್ಯವಸ್ಥೆಯನ್ನು ಜಾರಿಗೆ ತರಲು ಸರ್ಕಾರ ಆಲೋಚಿಸುತ್ತಿದೆ ಎಂದು ಗಡ್ಕರಿ ಮಾಹಿತಿ ನೀಡಿದ್ದಾರೆ.

ಸುಂಕ ಸಂಗ್ರಹ 34 ಲಕ್ಷ ಕೋಟಿಗೆ ಏರಿಕೆ
ಹೊಸ ಜಿಪಿಎಸ್ ವ್ಯವಸ್ಥೆ ಆಧಾರಿತ ಪದ್ಧತಿ ಭಾರತದಲ್ಲಿ ಜಾರಿಗೆ ಬಂದ ಬಳಿಕ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸುಂಕ ಸಂಗ್ರಹದ ಮೊತ್ತವು ಐದು ವರ್ಷಗಳಲ್ಲಿ 1.34 ಲಕ್ಷ ಕೋಟಿಗೆ ಏರಿಕೆಯಾಗಲಿದೆ. ಈ ಹಣಕಾಸು ವರ್ಷದಲ್ಲಿ ಟೋಲ್ ಸಂಗ್ರಹದ ಮೊತ್ತವು 34,000 ಕೋಟಿಗೆ ತಲುಪುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.

ಫಾಸ್ಟ್ಯಾಗ್ನಿಂದ ಸಂಗ್ರಹ ಹೆಚ್ಚಳ
ಜಿಪಿಎಸ್ ಆಧಾರಿತ ಸುಂಕ ಸಂಗ್ರಹ ವ್ಯವಸ್ಥೆಯು ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ತಗ್ಗಿಸಲು ಇತ್ತೀಚೆಗೆ ಜಾರಿಗೆ ಬಂದ ಫಾಸ್ಟ್ಯಾಗ್ ಆಧಾರಿತ ಸುಂಕ ಸಂಗ್ರಹಕ್ಕೆ ಒತ್ತಾಸೆಯಾಗುವ ನಿರೀಕ್ಷೆಯಿದೆ. ಫಾಸ್ಟ್ಯಾಗ್ ಜಾರಿಯ ಬಳಿಕ ಹೆದ್ದಾರಿಗಳಲ್ಲಿ ಸುಂಕ ಸಂಗ್ರಹ ವ್ಯವಸ್ಥೆ ಪಾರದರ್ಶಕವಾಗಿದ್ದು, ಟೋಲ್ ಸಂಗ್ರಹದ ಆದಾಯದಲ್ಲಿ ಏರಿಕೆಗೆ ಕಾರಣವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications