ಭಾರತದಲ್ಲಿ 6-7 ತಿಂಗಳಲ್ಲಿ 30 ಕೋಟಿ ಮಂದಿಗೆ ಕೊರೊನಾ ಲಸಿಕೆ:ಹರ್ಷವರ್ಧನ್
ನವದೆಹಲಿ, ಡಿಸೆಂಬರ್ 19:ಭಾರತದಲ್ಲಿ 6-7 ತಿಂಗಳಲ್ಲಿ 30 ಕೋಟಿ ಮಂದಿಗೆ ಕೊರೊನಾ ಲಸಿಕೆ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಭರವಸೆ ನೀಡಿದ್ದಾರೆ.
ನಮ್ಮ ವಿಜ್ಞಾನಿಗಳು ಮತ್ತು ಆರೋಗ್ಯ ತಜ್ಞರು ಕೊರೊನಾವೈರಸ್ನ ಜೀನೋಮ್ ಅನುಕ್ರಮ ಮತ್ತು ಪ್ರತ್ಯೇಕತೆಯ ಮೂಲಕ ಲಸಿಕೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದಾರೆ, ಸ್ಥಳೀಯ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ.
ಮುಂದಿನ 6-7 ತಿಂಗಳಲ್ಲಿ ನಾವು ಸುಮಾರು 30 ಕೋಟಿ ಜನರಿಗೆ ಲಸಿಕೆ ನೀಡುವ ಸಾಮರ್ಥ್ಯವನ್ನು ಹೊಂದಿದ್ದೇವೆ.

ಈವರೆಗೆ ಭಾರತದಲ್ಲಿ 95 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ. ಇಡೀ ವಿಶ್ವದಲ್ಲೇ ಭಾರತವು ಕೊವಿಡ್ 19 ಚೇತರಿಕೆ ಪ್ರಮಾಣ ಅತಿ ಹೆಚ್ಚು ಅಂದರೆ ಶೇ.95.46ರಷ್ಟಿದೆ.
ಭಾರತದ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದು ಕೋಟಿಯ ಗಡಿ ದಾಟಿದೆ.
ದೇಶದಲ್ಲಿ ಮೊದಲ ಸೋಂಕು ಕಾಣಿಸಿಕೊಂಡ ಹತ್ತು ತಿಂಗಳಲ್ಲಿ ಭಾರತ ಈ ಗಡಿ ತಲುಪಿದೆ. ಕಳೆದ 24 ಗಂಟೆಗಳಲ್ಲಿ 25,153 ಹೊಸ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ. ಇದರಿಂದ ಒಟ್ಟು ಪ್ರಕರಣಗಳ ಸಂಖ್ಯೆ 10,004,599ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಶುಕ್ರವಾರ 347 ಮಂದಿ ಸೋಂಕಿತರು ವೈರಸ್ನಿಂದ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 1,45,136ಕ್ಕೆ ತಲುಪಿದೆ. ಪ್ರಯೋಗಕ್ಕೆ ಯಾರೂ ಬರ್ತಿಲ್ಲ;
ಕೊರೊನಾ ಲಸಿಕೆ ಸಿಗೋದು ತಡವಾಗುತ್ತಾ? ದೇಶದಲ್ಲಿ ಇದುವರೆಗೂ ಒಟ್ಟು ಬಿಡುಗಡೆಯಾದವರ ಸಂಖ್ಯೆ 95,50,712ಕ್ಕೆ ಏರಿಕೆಯಾಗಿದೆ. ಜತೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,08,751ಕ್ಕೆ ತಗ್ಗಿದೆ.
700ಕ್ಕೂ ಅಧಿಕ ಜಿಲ್ಲೆಗಳಿರುವ ಭಾರತದಲ್ಲಿ ಅರ್ಧದಷ್ಟು ಕೋವಿಡ್ ಪ್ರಕರಣಗಳ ಸಂಖ್ಯೆ ಕೇವಲ 47 ಜಿಲ್ಲೆಗಳಲ್ಲಿಯೇ ವರದಿಯಾಗಿವೆ. ದೇಶದ ಬಹುಪಾಲು ಜಿಲ್ಲೆಗಳಲ್ಲಿ 5,000ಕ್ಕೂ ಕಡಿಮೆ ಪ್ರಕರಣಗಳು ದಾಖಲಾಗಿವೆ. ಕೇವಲ 11 ಜಿಲ್ಲೆಗಳಲ್ಲಿಯೇ ಒಂದು ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಈ 11 ಜಿಲ್ಲೆಗಳು ದೇಶದ ಜನಸಂಖ್ಯೆಯ ಶೇ 7.8ರಷ್ಟು ಜನಸಂಖ್ಯೆ ಇವೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications