ಕೊರೊನಾ ಭೀತಿ: ಎತಿಹಾಡ್ ವಿಮಾನ ಏರಿ ಯುಎಇಗೆ ಹಾರುವಂತಿಲ್ಲ ಭಾರತೀಯರು!
ನವದೆಹಲಿ, ಜುಲೈ 28: ಭಾರತದ ಮತ್ತು ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ನಡುವೆ ಎತಿಹಾಡ್ ಏರ್ ವೇಸ್ ವಿಮಾನಗಳ ಸಂಚಾರವನ್ನು ಮುಂದಿನ ಆದೇಶದವರೆಗೂ ನಿರ್ಬಂಧಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಎರಡು ದಿನಗಳ ಹಿಂದೆಯಷ್ಟೇ ಯುಎಇ ಸರ್ಕಾರವು ಉಭಯ ರಾಷ್ಟ್ರಗಳ ನಡುವಿನ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಿತ್ತು.
ಯುಎಇ ಸರ್ಕಾರದ ನಿರ್ದೇಶನದ ಪ್ರಕಾರ, ಮುಂದಿನ ಆದೇಶದವರೆಗೂ ಭಾರತದಿಂದ ಯುಎಇಗೆ ಎತಿಹಾಡ್ ನೆಟ್ ವರ್ಕ್ ಮೂಲಕ ಪ್ರಯಾಣಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಎತಿಹಾಡ್ ಭಾರತೀಯ ಪ್ರಯಾಣಿಕರ ಸಂಚಾರಕ್ಕೆ ಯಾವುದೇ ರೀತಿಯಲ್ಲೂ ಅನುಮತಿ ನೀಡುವುದಿಲ್ಲ.
"ಯುಎಇ ಪ್ರಜೆಗಳು, ರಾಜತಾಂತ್ರಿಕ ಕಾರ್ಯಾಚರಣೆ, ಅಧಿಕೃತ ನಿಯೋಗ ಮತ್ತು ಗೋಲ್ಡನ್ ನಿವಾಸ ಹೊಂದಿರುವವರಿಗೆ ಮಾತ್ರ ಯುಎಇ ಪ್ರವೇಶದ ಮೇಲಿನ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಆದರೆ ಈ ಪ್ರಯಾಣಿಕರು ಕ್ವಾರೆಂಟೈನ್ ನಿಯಮಕ್ಕೆ ಒಳಗಾಗುವುದು ಕಡ್ಡಾಯವಾಗಿದೆ," ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಸರಕು ಸೇವೆಗಳ ಸಂಚಾರಕ್ಕೆ ನಿರ್ಬಂಧವಿಲ್ಲ:
ಎತಿಹಾಡ್ ಭಾರತಕ್ಕೆ ಸಂಚರಿಸುವ ಸರಕುಗಳ ವಿಮಾಗಳ ಕಾರ್ಯಾಚರಣೆಯನ್ನು ಯಥಾವತ್ತಾಗಿ ಮುಂದುವರಿಸಲಿದೆ. ಈ ವಿಮಾನಗಳು ಎರಡೂ ಕಡೆ ಯಾವುದೇ ನಿರ್ಬಂಧವಿಲ್ಲದೇ ಪ್ರಯಾಣಿಸುತ್ತವೆ. ಇದರ ಹೊರತಾಗಿ ಅತಿಥಿಗಳಿಗೆ ತೊಂದರೆ ಆಗದಂತೆ ತಿಳಿಸಲು ಎತಿಹಾಡ್ ಈ ಬಗ್ಗೆ ಮಾಹಿತಿ ನೀಡಿದೆ. "ಟ್ರಾವೆಲ್ ಏಜೆಂಟ್ ಮೂಲಕ ಟಿಕೆಟ್ ಖರೀದಿಸಿದ ಅತಿಥಿಗಳು ಸಹಾಯಕ್ಕಾಗಿ ತಮ್ಮ ಟಿಕೆಟ್ ಖರೀದಿಸಿದ ಏಜೆನ್ಸಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಈ ತಾತ್ಕಾಲಿಕ ನಿರ್ಬಂಧಗಳಿಂದ ಎತಿಹಾಡ್ ತನ್ನ ಪ್ರಯಾಣಿಕರಿಗೆ ಉಂಟಾಗುವ ಯಾವುದೇ ಅನಾನುಕೂಲತೆಗೆ ವಿಷಾದಿಸುತ್ತಿದೆ "ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications