ಕೊರೊನಾ ಭೀತಿ: ಎತಿಹಾಡ್ ವಿಮಾನ ಏರಿ ಯುಎಇಗೆ ಹಾರುವಂತಿಲ್ಲ ಭಾರತೀಯರು!
ನವದೆಹಲಿ, ಜುಲೈ 28: ಭಾರತದ ಮತ್ತು ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ನಡುವೆ ಎತಿಹಾಡ್ ಏರ್ ವೇಸ್ ವಿಮಾನಗಳ ಸಂಚಾರವನ್ನು ಮುಂದಿನ ಆದೇಶದವರೆಗೂ ನಿರ್ಬಂಧಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಎರಡು ದಿನಗಳ ಹಿಂದೆಯಷ್ಟೇ ಯುಎಇ ಸರ್ಕಾರವು ಉಭಯ ರಾಷ್ಟ್ರಗಳ ನಡುವಿನ ವಿಮಾನ ಸಂಚಾರಕ್ಕೆ ನಿರ್ಬಂಧ ವಿಧಿಸಿತ್ತು.
ಯುಎಇ ಸರ್ಕಾರದ ನಿರ್ದೇಶನದ ಪ್ರಕಾರ, ಮುಂದಿನ ಆದೇಶದವರೆಗೂ ಭಾರತದಿಂದ ಯುಎಇಗೆ ಎತಿಹಾಡ್ ನೆಟ್ ವರ್ಕ್ ಮೂಲಕ ಪ್ರಯಾಣಿಸುವುದನ್ನು ಸ್ಥಗಿತಗೊಳಿಸಲಾಗಿದೆ. ಎತಿಹಾಡ್ ಭಾರತೀಯ ಪ್ರಯಾಣಿಕರ ಸಂಚಾರಕ್ಕೆ ಯಾವುದೇ ರೀತಿಯಲ್ಲೂ ಅನುಮತಿ ನೀಡುವುದಿಲ್ಲ.
"ಯುಎಇ ಪ್ರಜೆಗಳು, ರಾಜತಾಂತ್ರಿಕ ಕಾರ್ಯಾಚರಣೆ, ಅಧಿಕೃತ ನಿಯೋಗ ಮತ್ತು ಗೋಲ್ಡನ್ ನಿವಾಸ ಹೊಂದಿರುವವರಿಗೆ ಮಾತ್ರ ಯುಎಇ ಪ್ರವೇಶದ ಮೇಲಿನ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ. ಆದರೆ ಈ ಪ್ರಯಾಣಿಕರು ಕ್ವಾರೆಂಟೈನ್ ನಿಯಮಕ್ಕೆ ಒಳಗಾಗುವುದು ಕಡ್ಡಾಯವಾಗಿದೆ," ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ಸರಕು ಸೇವೆಗಳ ಸಂಚಾರಕ್ಕೆ ನಿರ್ಬಂಧವಿಲ್ಲ:
ಎತಿಹಾಡ್ ಭಾರತಕ್ಕೆ ಸಂಚರಿಸುವ ಸರಕುಗಳ ವಿಮಾಗಳ ಕಾರ್ಯಾಚರಣೆಯನ್ನು ಯಥಾವತ್ತಾಗಿ ಮುಂದುವರಿಸಲಿದೆ. ಈ ವಿಮಾನಗಳು ಎರಡೂ ಕಡೆ ಯಾವುದೇ ನಿರ್ಬಂಧವಿಲ್ಲದೇ ಪ್ರಯಾಣಿಸುತ್ತವೆ. ಇದರ ಹೊರತಾಗಿ ಅತಿಥಿಗಳಿಗೆ ತೊಂದರೆ ಆಗದಂತೆ ತಿಳಿಸಲು ಎತಿಹಾಡ್ ಈ ಬಗ್ಗೆ ಮಾಹಿತಿ ನೀಡಿದೆ. "ಟ್ರಾವೆಲ್ ಏಜೆಂಟ್ ಮೂಲಕ ಟಿಕೆಟ್ ಖರೀದಿಸಿದ ಅತಿಥಿಗಳು ಸಹಾಯಕ್ಕಾಗಿ ತಮ್ಮ ಟಿಕೆಟ್ ಖರೀದಿಸಿದ ಏಜೆನ್ಸಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಈ ತಾತ್ಕಾಲಿಕ ನಿರ್ಬಂಧಗಳಿಂದ ಎತಿಹಾಡ್ ತನ್ನ ಪ್ರಯಾಣಿಕರಿಗೆ ಉಂಟಾಗುವ ಯಾವುದೇ ಅನಾನುಕೂಲತೆಗೆ ವಿಷಾದಿಸುತ್ತಿದೆ "ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications