ಮಧ್ಯಪ್ರದೇಶ ಚುನಾವಣೆ 2023; ಬಿಜೆಪಿಗೆ 162 ಸ್ಥಾನಗಳು
ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದು India Today-Axis My India ಚುನಾವಣೋತ್ತರ ಸಮೀಕ್ಷೆ ಹೇಳಿದೆ. ರಾಜ್ಯದ ಚುನಾವಣೆಯ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ.
ಗುರುವಾರ ಸಂಜೆ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟವಾಗಿವೆ. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ. ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಅಧಿಕಾರ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 116.

ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ರಾಜ್ಯದಲ್ಲಿ ದಾಖಲೆಯ 76.22ರಷ್ಟು ಮತದಾನವಾಗಿತ್ತು. ಇಂದು ಚುನಾವಣೋತ್ತರ ಸಮೀಕ್ಷೆ ಫಲಿತಾಂಶ ಪ್ರಕಟವಾಗುತ್ತಿದೆ. India Today-Axis My India ಸಮೀಕ್ಷೆಯ ಪ್ರಕಾರ ಬಿಜೆಪಿ 140-162 ಸ್ಥಾನಗಳಲ್ಲಿ ಜಯಗಳಿಸಲಿದೆ.
ಚುನಾವಣಾ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್ 68-90 ಕ್ಷೇತ್ರಗಳಲ್ಲಿ ಮತ್ತು ಇತರರು 0 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ. ಮಧ್ಯಪ್ರದೇಶ ರಾಜ್ಯದಲ್ಲಿ 2018ರ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿತ್ತು. ಎಸ್ಪಿ, ಬಿಎಸ್ಪಿ ಜೊತೆ ಸೇರಿ ಪಕ್ಷ ಸರ್ಕಾರ ರಚನೆ ಮಾಡಿತ್ತು.
ಆದರೆ 2020ರಲ್ಲಿ ಜ್ಯೋತಿರಾಧಿತ್ಯ್ ಸಿಂಧಿಯಾ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಆಗ ಅವರ ಬೆಂಬಲಿಗ ಶಾಸಕರು ಕಾಂಗ್ರೆಸ್ ಬಿಟ್ಟಿದ್ದರಿಂದ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಬೇಕಾಯಿತು. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂದಿತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾದರು.
ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. ಬಿಜೆಪಿ ರಾಜ್ಯದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡದೇ ಚುನಾವಣೆ ಎದುರಿಸಿದೆ. ಚುನಾವಣೋತ್ತರ ಸಮೀಕ್ಷೆಯಂತೆ ಬಿಜೆಪಿಗೆ ಸರಳ ಬಹುಮತ ಸಿಕ್ಕಿದರೆ ಮುಖ್ಯಮಂತ್ರಿ ಯಾರು? ಎಂದು ಕಾದು ನೋಡಬೇಕಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications