ಜಾಗತಿಕ ಯುದ್ಧ ಶಸ್ತ್ರಾಸ್ತ್ರ ಮಾರುಕಟ್ಟೆಯಲ್ಲಿ ಭಾರತವೇ ನಂ. 1 ಗ್ರಾಹಕ!
ಶಸ್ತ್ರಾಸ್ತ್ರ ಖರೀದಿಯಲ್ಲಿ ಯುದ್ಧ ಪೀಡಿತ ಸೌದಿ ರಾಷ್ಟ್ರಗಳನ್ನೇ ಹಿಂದಿಕ್ಕಿದ ಭಾರತ; 2012ರಿಂದ 2016ರವರೆಗೆ ಒಟ್ಟು ಜಾಗತಿಕ ಮಾರುಕಟ್ಟೆಯ ಶೇ. 13ರಷ್ಟು ಸಾಮಗ್ರಿ ಖರೀದಿಸಿರುವ ಭಾರತ ಸರ್ಕಾರ.
ನವದೆಹಲಿ, ಫೆಬ್ರವರಿ 21: ಜಾಗತಿಕ ಯುದ್ಧ ಶಸ್ತ್ರಾಸ್ತ್ರ ಮಾರುಕಟ್ಟೆಯಲ್ಲಿ 1990ರಿಂದಲೂ ಅಗ್ರ ಗ್ರಾಹಕನಾಗಿರುವ ಭಾರತ, ಈಗಲೂ ಅದೇ ಸ್ಥಾನದಲ್ಲಿ ಮುಂದುವರಿದಿದೆ ಎಂದು ಸ್ಟಾಕ್ ಹೋಂ ಅಂತಾರಾಷ್ಟ್ರೀಯ ಶಾಂತಿ ಸಂಶೋಧನಾ ಸಂಸ್ಥೆ (ಎಸ್ಐಪಿಎಸ್ಐ) ಹೇಳಿದೆ.
ಸಂಸ್ಥೆಯು ನಡೆಸಿರುವ ಸಮೀಕ್ಷೆಯ ಪ್ರಕಾರ, 2012ರಿಂದ 2016ರವರೆಗೆ ವಿಶ್ವದ ನಾನಾ ದೇಶಗಳಿಗೆ ಮಾರಾಟವಾದ ಶಸ್ತ್ರಾಸ್ತ್ರಗಳ ಪೈಕಿ ಶೇ. 13ರಷ್ಟನ್ನು ಭಾರತವೇ ಆಮದು ಮಾಡಿಕೊಂಡಿದೆ. ಹಾಗಾಗಿ, ಅತಿ ಹೆಚ್ಚು ಯುದ್ಧ ಸಾಮಗ್ರಿಗಳನ್ನು ಕೊಂಡ ದೇಶಗಳ ಪಟ್ಟಿಯಲ್ಲಿ ಭಾರತವೇ ಅಗ್ರಸ್ಥಾನದಲ್ಲಿದೆ.[ಸತ್ಯ ಹೇಳಿದ ಸೈನಿಕನ ತೇಜೋವಧೆಗೆ ಸಿದ್ಧವಾದ ಬಿಎಸ್ಎಫ್]

ಭಾರತದ ನಂತರದ ಸ್ಥಾನಗಳಲ್ಲಿ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಚೀನಾ, ಅಲ್ಜೇರಿಯಾ ದೇಶಗಳಿವೆ. 2007ರಿಂದ 2011ರ ನಡುವಿನ ಅಂತರದಲ್ಲಿ ಜಾಗತಿಕ ಮಟ್ಟದಲ್ಲಿ ನಡೆದ ಯುದ್ಧ ಸಾಮಗ್ರಿಗಳ ಮಾರಾಟದಲ್ಲಿ ಶೇ. 9.7ರಷ್ಟನ್ನು ಭಾರತ ಆಮದು ಮಾಡಿಕೊಂಡಿತ್ತು.[ದಶಕಗಳ ನಿರೀಕ್ಷೆ ನಂತರ ಸೈನಿಕರಿಗೆ ಸಿಗಲಿದೆ ಬುಲೆಟ್ ಪ್ರೂಫ್ ಹೆಲ್ಮೆಟ್]
ಆದರೆ, ವಾಸ್ತವದಲ್ಲಿ ಅರೇಬಿಯಾ ಖಂಡದ ಬಹುತೇಕ ರಾಷ್ಟ್ರಗಳು ತಮ್ಮ ನೆರೆಹೊರೆ ದೇಶಗಳೊಂದಿಗೆ ತೀವ್ರ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಯುಮೆನ್, ಸಿರಿಯಾ, ಇರಾನ್, ಇರಾಕ್... ಹೀಗೆ ಅಲ್ಲೆಲ್ಲೂ ಯುದ್ಧ ವಾತಾವರಣವಿದೆ. ಆದರೂ, ಅವನ್ನು ಮೀರಿಸಿ ಭಾರತವು, ನೆರೆಯಲ್ಲಿರುವ ಪಾಕಿಸ್ತಾನದ ಅಟ್ಟಹಾಸವನ್ನು ನಿಯಂತ್ರಿಸುವ ಕಾರಣವನ್ನಿಟ್ಟುಕೊಂಡು ಅತೀವ ಮಟ್ಟದಲ್ಲಿ ಯುದ್ಧ ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿದೆ ಎಂದು ಎಸ್ಐಪಿಎಸ್ಐ ಕಳವಳ ವ್ಯಕ್ತಪಡಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications