ಜಾಗತಿಕ ಯುದ್ಧ ಶಸ್ತ್ರಾಸ್ತ್ರ ಮಾರುಕಟ್ಟೆಯಲ್ಲಿ ಭಾರತವೇ ನಂ. 1 ಗ್ರಾಹಕ!
ಶಸ್ತ್ರಾಸ್ತ್ರ ಖರೀದಿಯಲ್ಲಿ ಯುದ್ಧ ಪೀಡಿತ ಸೌದಿ ರಾಷ್ಟ್ರಗಳನ್ನೇ ಹಿಂದಿಕ್ಕಿದ ಭಾರತ; 2012ರಿಂದ 2016ರವರೆಗೆ ಒಟ್ಟು ಜಾಗತಿಕ ಮಾರುಕಟ್ಟೆಯ ಶೇ. 13ರಷ್ಟು ಸಾಮಗ್ರಿ ಖರೀದಿಸಿರುವ ಭಾರತ ಸರ್ಕಾರ.
ನವದೆಹಲಿ, ಫೆಬ್ರವರಿ 21: ಜಾಗತಿಕ ಯುದ್ಧ ಶಸ್ತ್ರಾಸ್ತ್ರ ಮಾರುಕಟ್ಟೆಯಲ್ಲಿ 1990ರಿಂದಲೂ ಅಗ್ರ ಗ್ರಾಹಕನಾಗಿರುವ ಭಾರತ, ಈಗಲೂ ಅದೇ ಸ್ಥಾನದಲ್ಲಿ ಮುಂದುವರಿದಿದೆ ಎಂದು ಸ್ಟಾಕ್ ಹೋಂ ಅಂತಾರಾಷ್ಟ್ರೀಯ ಶಾಂತಿ ಸಂಶೋಧನಾ ಸಂಸ್ಥೆ (ಎಸ್ಐಪಿಎಸ್ಐ) ಹೇಳಿದೆ.
ಸಂಸ್ಥೆಯು ನಡೆಸಿರುವ ಸಮೀಕ್ಷೆಯ ಪ್ರಕಾರ, 2012ರಿಂದ 2016ರವರೆಗೆ ವಿಶ್ವದ ನಾನಾ ದೇಶಗಳಿಗೆ ಮಾರಾಟವಾದ ಶಸ್ತ್ರಾಸ್ತ್ರಗಳ ಪೈಕಿ ಶೇ. 13ರಷ್ಟನ್ನು ಭಾರತವೇ ಆಮದು ಮಾಡಿಕೊಂಡಿದೆ. ಹಾಗಾಗಿ, ಅತಿ ಹೆಚ್ಚು ಯುದ್ಧ ಸಾಮಗ್ರಿಗಳನ್ನು ಕೊಂಡ ದೇಶಗಳ ಪಟ್ಟಿಯಲ್ಲಿ ಭಾರತವೇ ಅಗ್ರಸ್ಥಾನದಲ್ಲಿದೆ.[ಸತ್ಯ ಹೇಳಿದ ಸೈನಿಕನ ತೇಜೋವಧೆಗೆ ಸಿದ್ಧವಾದ ಬಿಎಸ್ಎಫ್]

ಭಾರತದ ನಂತರದ ಸ್ಥಾನಗಳಲ್ಲಿ, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್, ಚೀನಾ, ಅಲ್ಜೇರಿಯಾ ದೇಶಗಳಿವೆ. 2007ರಿಂದ 2011ರ ನಡುವಿನ ಅಂತರದಲ್ಲಿ ಜಾಗತಿಕ ಮಟ್ಟದಲ್ಲಿ ನಡೆದ ಯುದ್ಧ ಸಾಮಗ್ರಿಗಳ ಮಾರಾಟದಲ್ಲಿ ಶೇ. 9.7ರಷ್ಟನ್ನು ಭಾರತ ಆಮದು ಮಾಡಿಕೊಂಡಿತ್ತು.[ದಶಕಗಳ ನಿರೀಕ್ಷೆ ನಂತರ ಸೈನಿಕರಿಗೆ ಸಿಗಲಿದೆ ಬುಲೆಟ್ ಪ್ರೂಫ್ ಹೆಲ್ಮೆಟ್]
ಆದರೆ, ವಾಸ್ತವದಲ್ಲಿ ಅರೇಬಿಯಾ ಖಂಡದ ಬಹುತೇಕ ರಾಷ್ಟ್ರಗಳು ತಮ್ಮ ನೆರೆಹೊರೆ ದೇಶಗಳೊಂದಿಗೆ ತೀವ್ರ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಯುಮೆನ್, ಸಿರಿಯಾ, ಇರಾನ್, ಇರಾಕ್... ಹೀಗೆ ಅಲ್ಲೆಲ್ಲೂ ಯುದ್ಧ ವಾತಾವರಣವಿದೆ. ಆದರೂ, ಅವನ್ನು ಮೀರಿಸಿ ಭಾರತವು, ನೆರೆಯಲ್ಲಿರುವ ಪಾಕಿಸ್ತಾನದ ಅಟ್ಟಹಾಸವನ್ನು ನಿಯಂತ್ರಿಸುವ ಕಾರಣವನ್ನಿಟ್ಟುಕೊಂಡು ಅತೀವ ಮಟ್ಟದಲ್ಲಿ ಯುದ್ಧ ಶಸ್ತ್ರಾಸ್ತ್ರಗಳನ್ನು ಖರೀದಿಸುತ್ತಿದೆ ಎಂದು ಎಸ್ಐಪಿಎಸ್ಐ ಕಳವಳ ವ್ಯಕ್ತಪಡಿಸಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications