ಭಾರತದಲ್ಲಿ ಅಕ್ಟೋಬರ್ನಲ್ಲಿ ನೋವಾವ್ಯಾಕ್ಸ್ ಲಸಿಕೆ ಪ್ರಯೋಗ
ನವದೆಹಲಿ, ಸೆಪ್ಟೆಂಬರ್ 19: ಭಾರತದಲ್ಲಿ ಅಕ್ಟೋಬರ್ ತಿಂಗಳಲ್ಲಿ ನೋವಾವ್ಯಾಕ್ಸ್ ಲಸಿಕೆಯ ಪ್ರಯೋಗ ನಡೆಸಲಾಗುತ್ತಿದೆ.
ಈ ಕುರಿತು ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಅಮೆರಿಕ ನೋವಾವ್ಯಾಕ್ಸ್ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯನ್ನು ಪುಣೆಯ ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಲಿದೆ.ಅಕ್ಟೋಬರ್ ಎರಡನೇ ವಾರದಿಂದ ಮಾನವರ ಮೇಲೆ ಪ್ರಯೋಗ ಶುರುವಾಗಲಿದೆ.
ಅಕ್ಟೋಬರ್ನಿಂದ ಭಾರತದಲ್ಲಿ ನೋವಾವ್ಯಾಕ್ಸ್ ಲಸಿಕೆ ಟ್ರಯಲ್ ಆರಂಭವಾಗಲಿದೆ ಎಂದು ಲೋಕಸಭೆಗೆ ಸರ್ಕಾರ ತಿಳಿಸಿದೆ.ಸೆಪ್ಟೆಂಬರ್ 18ರವರಗೆ 182 ಲಸಿಕೆ ಅಭ್ಯರ್ಥಿಗಳು ಪ್ರಿ ಕ್ಲಿನಿಕಲ್ ಅಥವಾ ಕ್ಲಿನಿಕಲ್ ಟ್ರಯಲ್ ನಲ್ಲಿ ತೊಡಗಿವೆ.

ಯಾರ್ಯಾರ ಸಹಕಾರ ಇರಲಿದೆ?
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಪ್ರಯೋಗಾಲಯ ನಡೆಯಲಿರುವ ಕ್ಲಿನಿಕಲ್ ಟ್ರಯಲ್ನಲ್ಲಿ ಪುಣೆಯ ರಾಷ್ಟ್ರೀಯ ಏಡ್ಸ್ ಸಂಶೋಧನಾ ಸಂಸ್ಥೆ ಮತ್ತು ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕೈಜೋಡಿಸಿದೆ.

ದಕ್ಷಿಣ ಆಫ್ರಿಕಾದಲ್ಲಿ ಮಾನವನ ಮೇಲೆ ಪ್ರಯೋಗ
ದಕ್ಷಿಣ ಆಫ್ರಿಕಾದಲ್ಲಿ ಕಳೆದ ತಿಂಗಳಿನಿಂದ ಲಸಿಕೆಯನ್ನು ಮಾನವರ ಮೇಲೆ ಪ್ರಯೋಗ ನಡೆಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಖಾತೆ ಸಚಿವ ಅಶ್ವಿನಿ ಕುಮಾರ್ ರಾಜ್ಯಸಭೆಗೆ ತಿಳಿಸಿದ್ದಾರೆ. ಕೊವಿಡ್ 19 ಸಾಂಕ್ರಾಮಿಕ ರೋಗಕ್ಕೆ ಕಾರಣವಾದ ಸಾರ್ಸ್ ಕೋವ್ 2 ವೈರಾಣುವಿನ ಜೀವಜಂತು ಬಳಸಿ ನೋವಾವ್ಯಾಕ್ಸ್ ಎನ್ವಿಎಕ್ಸ್ ಕೋವ್ 2373 ಲಸಿಕೆ ಅಭಿವೃದ್ಧಿಪಡಿಸಲಾಗಿದೆ. ಪ್ರಾಣಿಗಳ ಮೇಲೆ ಮಾಡಲಾದ ಪ್ರಯೋಗಗಳಲ್ಲಿ ಉತ್ತಮ ಫಲಿತಾಂಶ ಕಂಡುಬಂದಿದೆ.

ಭಾರತದಲ್ಲಿ ಎರಡು ಲಸಿಕೆಗಳು ಕ್ಲಿನಿಕಲ್ ಹಂತದಲ್ಲಿವೆ
ಭಾರತದಲ್ಲಿ ಭಾರತ್ ಬಯೋಟೆಕ್ ಮತ್ತು ಕ್ಯಾಡಿಲಾ ಅಭಿವೃದ್ಧಿಪಡಿಸಿರುವ ಎರಡು ಲಸಿಕೆಗಳು ಮೊದಲ ಹಂತದ ಕ್ಲಿನಿಕಲ್ ಟ್ರಯಲ್ನಲ್ಲಿ ಈಗಾಗಲೇ ಉತ್ತಮ ಫಲಿತಾಂಶ ನೀಡಿವೆ. ಮಾನವರ ಮೇಲೆ ಪ್ರಯೋಗಿಸಲು ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಈ ಎರಡೂ ಲಸಿಕೆಗಳ ಎರಡನೇ ಹಂತದ ಪ್ರಯೋಗಕ್ಕೆ ಸಿದ್ಧತೆ ನಡೆದಿದೆ.
Recommended Video

ಆಕ್ಸ್ಫರ್ಡ್ ಲಸಿಕೆ ಪ್ರಯೋಗ ಪುನರಾರಂಭ
ಭಾರತದಲ್ಲಿ ಒಂದು ವಾರದಿಂದ ಸ್ಥಗಿತಗೊಂಡಿದ್ದ ಆಕ್ಸ್ಫರ್ಡ್ ಲಸಿಕೆಯ ಕ್ಲಿನಿಕಲ್ ಟ್ರಯಲ್ ಕೂಡ ಶೀಘ್ರ ಪುನರಾರಂಭವಾಗಲಿದೆ. ಈಗಾಗಲೇ ನೂರಾರು ಜನರ ಮೇಲೆ ಲಸಿಕೆಯನ್ನು ಪ್ರಯೋಗಿಸಲಾಗಿದೆ. ಎರಡನೇ ಹಂತದ ಪ್ರಯೋಗಕ್ಕೆ ಒಪ್ಪಿಗೆ ದೊರೆತ ಕೂಡಲೇ 14 ನಗರಗಳ 1500 ಜನರ ಮೇಲೆ ಸೆರಂ ಇನ್ಸ್ಟಿಟ್ಯೂಟ್ ಲಸಿಕೆಯ ಪ್ರಯೋಗ ಕೆಲಸ ಆರಂಭಿಸಲಿದೆ ಎಂದು ಐಸಿಎಂಆರ್ ಮಹಾನಿರ್ದೇಶಕ ಬಲರಾಂ ಭಾರ್ಗವ್ ತಿಳಿಸಿದ್ದಾರೆ.
-
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei












Click it and Unblock the Notifications