ವಿಶ್ವ ಆರೋಗ್ಯ ಸಂಸ್ಥೆಯಿಂದ ಕೋವಾಕ್ಸಿನ್ಗೆ ಅನುಮೋದನೆ ಪಡೆಯಲು ಭಾರತ ಪ್ರಯತ್ನ
ನವದೆಹಲಿ, ಮೇ 23: ವಿಶ್ವ ಆರೋಗ್ಯ ಸಂಸ್ಥೆಯಿಂದ ಭಾರತ್ ಬಯೋಟೆಕ್ ಉತ್ಪಾದನೆ ಮಾಡುತ್ತಿರುವ ಕೊವಾಕ್ಸಿನ್ ಲಸಿಕೆಗೆ ಆದಷ್ಟು ಶೀಘ್ರವಾಗಿ ಅನುಮೋದನೆ ಪಡೆಯಲು ಭಾರತ ಪ್ರಯತ್ನಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮತ್ತು ಯುರೋಪಿಯನ್ ಒಕ್ಕೂಟಗಳಿಂದ ಅನುಮೋದನೆ ಪಡೆಯಲು ಬೇಕಾಗಿರುವ ಅಗತ್ಯ ಕ್ರಮಗಳತ್ತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಉನ್ನತ ರಾಜತಾಂತ್ರಿಕರು ಚಿತ್ತಹರಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ವೈರಸ್ ಲಸಿಕೆಗಳಾದ ಆಕ್ಸ್ಫರ್ಡ್ ಆಸ್ಟ್ರಜನಿಕಾ, ಫೈಜರ್ ಮತ್ತು ಮಾಡೆರ್ನಾ ಸಹಿತ ಹಲವು ಲಸಿಕೆಗಳಿಗೆ ಅನುಮೋದನೆಯನ್ನು ನೀಡಿದೆ. ಇದರಿಂದಾಗಿ ವಿಶ್ವಾದ್ಯಂತ ಈ ಲಸಿಕೆಗಳನ್ನು ರಫ್ತು ಮಾಡಲು ಸಾಧ್ಯವಾಗುತ್ತದೆ. ಆದರೆ ಭಾರತದಲ್ಲಿ ನೀಡಲಾಗುತ್ತಿರುವ ಎರಡು ಲಸಿಕೆಗಳ ಪೈಕಿ ಕೋವಾಕ್ಸಿನ್ಗೆ ಈ ಮಾನ್ಯತೆ ದೊರೆತಿಲ್ಲ.
ಈ ವಿಚಾರವಾಗಿ ಕೆಲ ಮಹತ್ವದ ಚರ್ಚೆ ನಡೆಸಲು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಸೋಮವಾರ ಭಾರತ್ ಬಯೋಟೆಕ್ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಸಚಿವಾಲಯದ ಮೂಲಗಳು ಖಚಿತಪಡಿಸಿಲ್ಲ. ಆದರೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮತಿ ಪಡೆಯುವ ವಿಚಾರವಾಗಿ ಅವರು ಗಮನಹರಿಸಿರುವುದನ್ನು ಸಚಿವಾಲಯದ ಮೂಲಗಳು ಸ್ಪಷ್ಟಪಡಿಸಿದೆ. ವಿಶ್ವ ಆರೋಗ್ಯಸಂಸ್ಥೆಯ 'ತುರ್ತು ಬಳಕೆಯ ಪಟ್ಟಿ'ಯಲ್ಲಿ ಕೊವಾಕ್ಸಿನ್ ಲಸಿಕೆಯನ್ನು ಸೇರ್ಪಡೆಗೊಳಿಸಲು ಖಂಡಿತವಾಗಿಯೂ ಭಾರತ ಆಸಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯುರೋಪ್ನ ದೇಶಗಳು ಸೇರಿದಂತೆ ವಿಶ್ವಾದ್ಯಂತ ಕೆಲ ರಾಷ್ಟ್ರಗಳು ಕೊರೊನಾ ಲಸಿಕೆ ಪಡೆದ ಜನರ ಪ್ರವಾಸಕ್ಕೆ ಅನುವು ಮಾಡಿಕೊಡುತ್ತಿದೆ. ಆದರೆ ಕೊವಾಕ್ಸಿನ್ ವಿಶ್ವಸಂಸ್ಥೆಯ ಅನುಮೋದನೆ ಪಡೆಯದ ಕಾರಣ ಕೊವಾಕ್ಸಿನ್ ಲಸಿಕೆ ಪಡೆದ ಜನರ ಪ್ರವಾಸಕ್ಕೆ ಅಡ್ಡಿಯಾಗಬಹುದು. ಮೂಲಗಳ ಮಾಹಿತಿಯ ಪ್ರಕಾರ ಯುರೋಪಿನ್ ಒಕ್ಕೂಟಗಳಿಂದ ಮಾನ್ಯತೆ ದೊರೆಯಲು ಬೇರೆಯದೇ ಪ್ರಕ್ರಿಯೆಯಿದ್ದು ಅದು ಮತ್ತಷ್ಟು ಸಮಯ ತೆಗೆದುಕೊಳ್ಳಬಹುದು ಎಂದಿದೆ. ಆದರೆ ಈ ಮಾನ್ಯತೆ ಪಡೆಯುವ ಬಗ್ಗೆಯೂ ಸರ್ಕಾರ ಯೋಚಿಸುತ್ತಿದೆ ಎನ್ನಲಾಗಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications