ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ : ಒರಿಸ್ಸಾದಲ್ಲಿ ಬಿಜೆಡಿನೇ ಕಿಂಗ್
ನವದೆಹಲಿ, ನವೆಂಬರ್ 16 : ಇಂಡಿಯಾ ಟಿವಿ ಮತ್ತು ಸಿಎನ್ಎಕ್ಸ್ ಜಂಟಿಯಾಗಿ ನಡೆಸಿರುವ ಚುನಾವಣಾ ಸಮೀಕ್ಷೆಯಲ್ಲಿ ಬಿಜು ಜನತಾ ದಳದ ನವೀನ್ ಪಟ್ನಾಯಕ್ ಅವರು ಲೋಕಸಭೆ ಚುನಾವಣೆಯಲ್ಲಿ ಅತೀಹೆಚ್ಚು ಸೀಟುಗಳನ್ನು ಗೆಲ್ಲಲಿದ್ದಾರೆ.
ಒರಿಸ್ಸಾದಲ್ಲಿ ಭಾರತೀಯ ಜನತಾ ಪಕ್ಷ ಇನ್ನಿತರ ಏಳು ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದರೂ ಬಿಜು ಜನತಾ ದಳವನ್ನು ಹಿಂದಿಕ್ಕುವುದು ಕಷ್ಟಸಾಧ್ಯ ಎಂದು ಸಮೀಕ್ಷೆ ತಿಳಿಸಿದೆ.
ಇರುವ 21 ಲೋಕಸಭಾ ಸೀಟುಗಳಲ್ಲಿ ಬಿಜು ಜನತಾ ದಳ ಕನಿಷ್ಠ 16 ಸೀಟುಗಳನ್ನು ತನ್ನದಾಗಿಸಿಕೊಳ್ಳಲಿದೆ ಮತ್ತು ಉಳಿದ ಕ್ಷೇತ್ರಗಳು ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ಪಾಲಾಗಲಿವೆ. ಕಾಂಗ್ರೆಸ್ ಇಲ್ಲಿ ಒಂದೂ ಕ್ಷೇತ್ರವನ್ನೂ ಗೆಲ್ಲಲಿಕ್ಕಿಲ್ಲ ಎಂದು ಸಮೀಕ್ಷೆ ಅಚ್ಚರಿಯ ಫಲಿತಾಂಶ ಹೊರಹಾಕಿದೆ.

ಮತ ಗಳಿಕೆಯ ವಿಷಯದಲ್ಲಿ ಕಳೆದ ಚುನಾವಣೆಗೆ ಹೋಲಿಸಿದರೆ ಬಿಜೆಡಿಯ ಮತಗಳಿಕೆ ಸ್ವಲ್ಪ ತಗ್ಗಲಿದೆ. 2014ರ ಚುನಾವಣೆಯಲ್ಲಿ ಶೇ.44.77ರಷ್ಟು ಮತ ಬಿಜೆಡಿ ಗಳಿಸಿತ್ತು. 2019ರಲ್ಲಿ ಶೇ.44ರಷ್ಟು ಮತಗಳನ್ನು ಬಿಜೆಡಿ ಗಳಿಸಲಿದೆ. ಆದರೆ ಬಿಜೆಪಿಯ ಮತಗಳಿಕೆಯ ಪ್ರಮಾಣ ಈ ಬಾರಿ ಏರಲಿದ್ದು, ಶೇ.21.88ರಿಂದ ಶೇ.28.53ಗೆ ಹೆಚ್ಚಿಸಿಕೊಳ್ಳಲಿದೆ. ಕಾಂಗ್ರೆಸ್ ಶೇ. 21.67ರಷ್ಟು ಮತಗಳನ್ನು ಗಳಿಸಿದರೂ ಒಂದೂ ಸೀಟು ಗೆಲ್ಲುವುದು ಅನುಮಾನ.

ಕಳೆದ ಚುನಾವಣೆಯಲ್ಲಿ ಬಿಜೆಡಿ 20 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ತನ್ನ ರಾಜ್ಯದಲ್ಲಿ ಸಾರ್ವಭೌಮತ್ವ ಮೆರೆದಿತ್ತು. ಬಿಜೆಪಿ ಕೇವಲ ಒಂದು ಸೀಟು ಮಾತ್ರ ಗೆದ್ದಿತ್ತು. ಕಳೆದ 2014ರ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಒಂದೂ ಕ್ಷೇತ್ರದಲ್ಲಿ ಗೆಲುವು ಸಾಧಿಸಿರಲಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications