ಭಾರತ-ಅಮೆರಿಕ ಮಾತುಕತೆ: ಮಹತ್ವದ ಒಪ್ಪಂದಕ್ಕೆ ಸಹಿ
ನವದೆಹಲಿ, ಅಕ್ಟೋಬರ್ 27: ಭಾರತ ಮತ್ತು ಅಮೆರಿಕಗಳು 2+2 ಸಚಿವಾಲಯ ಮಟ್ಟದ ಮೂರನೇ ಹಂತದ ಮಾತುಕತೆಯನ್ನು ನಡೆಸಿದ್ದು, ದ್ವಿಪಕ್ಷೀಯ ರಕ್ಷಣಾ ಹಾಗೂ ಭದ್ರತಾ ಸಂಬಂಧವನ್ನು ವೃದ್ಧಿಸುವ ಬಗ್ಗೆ ಚರ್ಚೆ ಕೇಂದ್ರೀಕರಿಸಲಾಗಿತ್ತು. ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಮತ್ತು ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈ ಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಿದರು.
ಅಮೆರಿಕ ಚುನಾವಣೆ ಒಂದು ವಾರ ಬಾಕಿ ಇರುವಾಗಲೇ ಉಭಯ ದೇಶಗಳ ನಡುವೆ ನಡೆಯುತ್ತಿರುವ ಪ್ರಮುಖ ಮಾತುಕತೆ ಮಹತ್ವ ಪಡೆದಿದೆ. ಹಾಗೆಯೇ ಭಾರತ-ಚೀನಾ ಗಡಿ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಈ ಮಾತುಕತೆ ಮಹತ್ವದ್ದಾಗಿದೆ.
ಮಾತುಕತೆ ಸಂದರ್ಭದಲ್ಲಿ ಭಾರತ ಮತ್ತು ಅಮೆರಿಕ ಬಿಇಸಿಎ (ಮೂಲ ವಿನಿಮಯ ಮತ್ತು ಸಹಕಾರ ಒಪ್ಪಂದ) ಒಪ್ಪಂದಕ್ಕೆ ಸಹಿ ಹಾಕಿದವು. ಇದು ಅತ್ಯುನ್ನತ ಸೇನಾ ತಂತ್ರಜ್ಞಾನ, ಭೂಸ್ಥಾಯಿ ನಕಾಶೆ ಮತ್ತು ವರ್ಗೀಯ ಉಪಗ್ರಹ ದತ್ತಾಂಶಗಳ ಹಂಚಿಕೆಗೆ ಈ ಒಪ್ಪಂದ ನೆರವಾಗಲಿದೆ. ಚೀನಾದ ಭದ್ರತೆ ಹಾಗೂ ಸ್ವಾತಂತ್ರ್ಯದ ಬೆದರಿಕೆಗಳ ಬಗ್ಗೆ ಸಹ ಚರ್ಚೆ ನಡೆಸಲಾಯಿತು.

ಬಿಇಸಿಎ ಒಪ್ಪಂದ ಪೂರ್ಣಗೊಳಿಸಿದ್ದರ ಬಗ್ಗೆ ನಮಗೆ ಸಂತೋಷವಾಗುತ್ತಿದೆ. ಇದು ಮಾಹಿತಿ ವಿನಿಯಮಕ್ಕೆ ಹೊಸ ಮಾರ್ಗವನ್ನು ತೆರೆಯಲಿದೆ. ಅಮೆರಿಕದೊಂದಿಗೆ ಇನ್ನೂ ಅನೇಕ ಸಂಗತಿಗಳ ಕುರಿತು ಚರ್ಚಿಸಲು ನಾವು ಉತ್ಸುಕರಾಗಿದ್ದೇವೆ ಎಂದು ಮಾತುಕತೆ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದರು.
ಇಂದು ಎರಡು ಮಹಾನ್ ಪ್ರಜಾಪ್ರಭುತ್ವ ದೇಶಗಳಿಗೆ ಪರಸ್ಪರ ಹತ್ತಿರವಾಗಿ ಬೆಳೆಯಲು ದೊಡ್ಡ ಅವಕಾಶ ಸಿಕ್ಕಿದೆ. ಕೋವಿಡ್ ಸೋಂಕಿನ ಪಿಡುಗಿನ ನಡುವೆ ಸಹಕಾರ ವೃದ್ಧಿಯ ವಿಚಾರವಾಗಿ ಸಾಕಷ್ಟು ಚರ್ಚಿಸಿದ್ದೇವೆ. ಜತೆಗೆ ಚೀನಾದ ಕಮ್ಯುನಿಸ್ಟ್ ಪಕ್ಷವು ಈ ಪ್ರದೇಶದಲ್ಲಿ ಒಡ್ಡುತ್ತಿರುವ ಭದ್ರತೆ ಮತ್ತು ಸ್ವಾತಂತ್ರ್ಯದ ಮೇಲಿನ ಬೆದರಿಕೆ ಹಾಗೂ ಶಾಂತಿ ಮತ್ತು ಸ್ಥಿರತೆ ವಿಚಾರವಾಗಿ ಮಾತುಕತೆ ನಡೆಸಿದೆವು ಎಂದು ಮೈಕಲ್ ಪೊಂಪಿಯೊ ತಿಳಿಸಿದ್ದಾರೆ.
-
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral












Click it and Unblock the Notifications