IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ
IMD Weather Forecast: 2026ರ ಟಿ20 ವಿಶ್ವಕಪ್ ಅಂತಿಮಘಟ್ಟವನ್ನು ತಲುಪಿದೆ. ಭಾರತ ಹಾಗೂ ನ್ಯೂಜಿಲೆಂಡ್ ಎರಡೂ ತಂಡಕ್ಕೂ ಈ ಪಂದ್ಯವು ಅತ್ಯಂತ ಮಹತ್ವದ್ದಾಗಿದೆ. ಫೆಬ್ರವರಿ 7 ರಿಂದ ಪ್ರಾರಂಭವಾಗಿದ್ದ 2026ರ ಟಿ20 ವಿಶ್ವಕಪ್ ಈಗ ಅಂತಿಮ ಹಂತವನ್ನು ತಲುಪಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯವು ಮಾರ್ಚ್ 8 ರಂದು ಗುಜರಾತ್ನ ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಂದು ಪಂದ್ಯ ನಡೆಯಲಿದ್ದು ಅಹಮದಾಬಾದ್ನಲ್ಲಿನ ವೆದರ್ ಹೇಗಿದೆ ಎನ್ನುವ ಕುತೂಹಲವೂ ಮೂಡಿದೆ. ಮಳೆ ಬಂದರೆ ಪಂದ್ಯಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಈ ಭಾಗದ ಹವಾಮಾನದ ಬಗ್ಗೆ ಹುಡುಕುವವರ ಸಂಖ್ಯೆ ಹೆಚ್ಚಳವಾಗಿದೆ.
ಮಾರ್ಚ್ 8ರ ಭಾನುವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐಸಿಸಿ ಪುರುಷರ ಟಿ - 20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮುಂಚಿತವಾಗಿ ಅಹಮದಾಬಾದ್ನಲ್ಲಿ ಬಿಸಿಲು ಇರುವ ಸಾಧ್ಯತೆ ಇದೆ. ಪಶ್ಚಿಮ ಭಾರತದಾದ್ಯಂತ ಚಳಿ ಹೆಚ್ಚುತ್ತಿದ್ದಂತೆ ಗುಜರಾತ್ನ ಅಹಮದಾಬಾದ್ ನಗರ ಸೇರಿದಂತೆ ವಿವಿಧ ಭಾಗದಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಭಾನುವಾರ ಐಎಂಡಿ ಮಾಹಿತಿಯ ಪ್ರಕಾರ, ಅಹಮದಾಬಾದ್ ನಗರದಲ್ಲಿ ಸ್ಪಷ್ಟ ಆಕಾಶ ಇರಲಿದೆ. ಗರಿಷ್ಠ ತಾಪಮಾನವು 39 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 19 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವ ಸಾಧ್ಯತೆ ಇದೆ.

ಗುಜರಾತ್ನಾದ್ಯಂತ ತಾಪಮಾನವು ಪ್ರಸ್ತುತ 35-40 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿದೆ. ಮುಂದಿನ ಮೂರು ದಿನಗಳಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಗುಜರಾತ್ನ ಪ್ರತ್ಯೇಕ ಪ್ರದೇಶಗಳಲ್ಲಿ, ವಿಶೇಷವಾಗಿ ಗುಜರಾತ್ ಪ್ರದೇಶದ ಕರಾವಳಿ ಪ್ರದೇಶಗಳು ಮತ್ತು ಸೌರಾಷ್ಟ್ರ ಮತ್ತು ಕಚ್ನಲ್ಲಿ ಮಾರ್ಚ್ 9 ಮತ್ತು 11ರ ನಡುವೆ ಭಾರೀ ಬಿಸಿಲು ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಭಾರತದ ವಿವಿಧ ಭಾಗಗಳಲ್ಲಿ ಬಿಸಿಲು ಹೆಚ್ಚಳ
ಇನ್ನು ಮಾರ್ಚ್ 8 ರಂದು ಹಿಮಾಚಲ ಪ್ರದೇಶ ಮತ್ತು ವಿದರ್ಭದ ಪ್ರತ್ಯೇಕ ಪ್ರದೇಶಗಳಲ್ಲಿ ಶಾಖ ಅಲೆಗಳ ಎಚ್ಚರಿಕೆಗಳನ್ನು ನೀಡಲಾಗಿದೆ. ಪಶ್ಚಿಮ ರಾಜಸ್ಥಾನದಲ್ಲಿ ಮಾರ್ಚ್ 10 ಮತ್ತು 11 ರಂದು ಉಷ್ಣ ಅಲೆಗಳ ಪರಿಸ್ಥಿತಿ ಇರಲಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 5 ರಿಂದ 8 ಡಿಗ್ರಿ ಸೆಲ್ಸಿಯಸ್ನಷ್ಟು ಗಮನಾರ್ಹವಾಗಿ ಹೆಚ್ಚುತ್ತಿದೆ. ವಾಯುವ್ಯ ಮತ್ತು ಮಧ್ಯ ಭಾರತದ ಹಲವಾರು ಪ್ರದೇಶಗಳು ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ದಾಖಲಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.
ವಾಯುವ್ಯ ಭಾರತ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಗುಜರಾತ್ನಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಲಿದೆ ಎಂದು ಮುನ್ಸೂಚನೆಗಳು ಸೂಚಿಸುತ್ತವೆ. ಅದೇ ಸಮಯದಲ್ಲಿ, ಪೂರ್ವ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಹಾಗೂ ಪಶ್ಚಿಮ ಹಿಮಾಚಲ ಪ್ರದೇಶದಲ್ಲಿ ಮಾರ್ಚ್ 8 ಮತ್ತು 13 ರ ನಡುವೆ ಮಿಂಚು - ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.
ದಕ್ಷಿಣ ಭಾರತದಲ್ಲಿ ಹೇಗಿದೆ
ಇನ್ನು ದಕ್ಷಿಣ ಭಾರತದಲ್ಲಿ ಬಹುತೇಕ ಒಣಹವೆ ಮುಂದುವರಿದಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಚಳಿ ಪ್ರಮಾಣ ಇಳಿಕೆಯಾಗುತ್ತಿದ್ದು, ಬಿಸಿಲು ಹೆಚ್ಚಾಗುತ್ತಿದೆ. ಇನ್ನು ಮೂರು ದಿನಗಳ ಕಾಲ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
-
Bengaluru Rain: ಬೆಂಗಳೂರಲ್ಲಿ ಮಳೆ ಬಂದಾಗ ಪವರ್ ಕಟ್ ಆಗುವುದ್ಯಾಕೆ, ಡಾಕ್ಟರ್ ಪ್ರಶ್ನೆಗೆ ನೆಟ್ಟಿಗರು ಹೇಳಿದ್ದೇನು -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ












Click it and Unblock the Notifications